AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆದ ಯೋಧ! ಗ್ರಾಮಸ್ಥರು ಶಹಬ್ಬಾಸ್​ ಅಂದ್ರು..

ಗದಗ: ದೇಶದ ಗಡಿ ಕಾಯೋ ಯೋಧನೊಬ್ಬ ಮರಳಿ ತನ್ನ ಊರಿಗೆ ಹಿಂದಿರುಗಿದ ನಂತರ ತನ್ನ ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆಗಿರೋ ಪ್ರಸಂಗ ಜಿಲ್ಲೆಯ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ತನ್ನ ಜಮೀನಿನಲ್ಲಿ ಯೋಧ ಪ್ರಕಾಶ್ ಹೈಗರ್ ಸ್ವಯಂ ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ಭಾರತೀಯ ಸೇನೆಯ 49 ಬಟಾಲಿಯನ್​ನಲ್ಲಿ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಕಾಶ್​ರನ್ನು ಅರುಣಾಚಲ ಪ್ರದೇಶದ ಭಾರತ- ಚೀನಾ ಗಡಿಯಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಜುಲೈ 2ರಂದು ಅರುಣಾಚಲ ಪ್ರದೇಶದಿಂದ ತಮ್ಮ ಗ್ರಾಮಕ್ಕೆ […]

ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆದ ಯೋಧ! ಗ್ರಾಮಸ್ಥರು ಶಹಬ್ಬಾಸ್​ ಅಂದ್ರು..
KUSHAL V
| Edited By: |

Updated on:Jul 09, 2020 | 4:07 PM

Share

ಗದಗ: ದೇಶದ ಗಡಿ ಕಾಯೋ ಯೋಧನೊಬ್ಬ ಮರಳಿ ತನ್ನ ಊರಿಗೆ ಹಿಂದಿರುಗಿದ ನಂತರ ತನ್ನ ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆಗಿರೋ ಪ್ರಸಂಗ ಜಿಲ್ಲೆಯ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ತನ್ನ ಜಮೀನಿನಲ್ಲಿ ಯೋಧ ಪ್ರಕಾಶ್ ಹೈಗರ್ ಸ್ವಯಂ ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ಭಾರತೀಯ ಸೇನೆಯ 49 ಬಟಾಲಿಯನ್​ನಲ್ಲಿ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಕಾಶ್​ರನ್ನು ಅರುಣಾಚಲ ಪ್ರದೇಶದ ಭಾರತ- ಚೀನಾ ಗಡಿಯಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಜುಲೈ 2ರಂದು ಅರುಣಾಚಲ ಪ್ರದೇಶದಿಂದ ತಮ್ಮ ಗ್ರಾಮಕ್ಕೆ ರಜೆ ಮೇಲೆ ಮರಳಿದ್ದಾರೆ‌.

ಈ ಮಧ್ಯೆ ಗ್ರಾಮದೆಲ್ಲೆಡೆ ಸೋಂಕಿನ ಭೀತಿ ಹರಡಿರುವ ಕಾರಣ ಯಾರಿಗೂ ತೊಂದರೆ ಕೊಡಲು ಬಯಸದ ಯೋಧ ತನ್ನ ಜಮೀನಿನಲ್ಲಿ ಟ್ರ್ಯಾಕ್ಟರ್​ ಮೇಲೆ ಟೆಂಟ್ ನಿರ್ಮಿಸಿಕೊಂಡು ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಸರ್ಕಾರದ ಮಾರ್ಗಸೂಚಿಯಂತೆ ಯೋಧ ಕ್ವಾರಂಟೈನ್​ ಸರಕಾರದ ಮಾರ್ಗಸೂಚಿಯಂತೆ ತಮ್ಮ ಕ್ವಾರಂಟೈನ್ ಅವಧಿ ಪೂರೈಸಲು ಮುಂದಾಗಿದ್ದಾರೆ. ಸದ್ಯಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿ ಯೋಧನ ಪರೀಕ್ಷೆ ನಡೆಸಿದ್ದಾರೆ. ಆದರೆ ಯೋಧನಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.

ಆದರೂ ನನ್ನಿಂದ ಗ್ರಾಮಸ್ಥರಿಗೆ ಆತಂಕ ಉಂಟಾಗೋದು ಬೇಡ ಅಂತಾ ಖುದ್ದು ತಾವೇ ದಿನ ನಿತ್ಯ ಮನೆಯಿಂದ ಊಟವನ್ನ ತರಿಸಿಕೊಂಡು ಹೊಲದಲ್ಲಿ ಕಾಲ‌ ಕಳೆಯುತ್ತಿದ್ದಾರೆ. ಯೋಧನ ನಿರ್ಧಾರಕ್ಕೆ ಗ್ರಾಮಸ್ಥರಿಂದ ಭಾರೀ  ಶಹಬ್ಬಾಸ್​ಗಿರಿ ಸಿಕ್ಕಿದೆ.

Published On - 1:32 pm, Thu, 9 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್