AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆದ ಯೋಧ! ಗ್ರಾಮಸ್ಥರು ಶಹಬ್ಬಾಸ್​ ಅಂದ್ರು..

ಗದಗ: ದೇಶದ ಗಡಿ ಕಾಯೋ ಯೋಧನೊಬ್ಬ ಮರಳಿ ತನ್ನ ಊರಿಗೆ ಹಿಂದಿರುಗಿದ ನಂತರ ತನ್ನ ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆಗಿರೋ ಪ್ರಸಂಗ ಜಿಲ್ಲೆಯ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ತನ್ನ ಜಮೀನಿನಲ್ಲಿ ಯೋಧ ಪ್ರಕಾಶ್ ಹೈಗರ್ ಸ್ವಯಂ ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ಭಾರತೀಯ ಸೇನೆಯ 49 ಬಟಾಲಿಯನ್​ನಲ್ಲಿ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಕಾಶ್​ರನ್ನು ಅರುಣಾಚಲ ಪ್ರದೇಶದ ಭಾರತ- ಚೀನಾ ಗಡಿಯಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಜುಲೈ 2ರಂದು ಅರುಣಾಚಲ ಪ್ರದೇಶದಿಂದ ತಮ್ಮ ಗ್ರಾಮಕ್ಕೆ […]

ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆದ ಯೋಧ! ಗ್ರಾಮಸ್ಥರು ಶಹಬ್ಬಾಸ್​ ಅಂದ್ರು..
KUSHAL V
| Edited By: |

Updated on:Jul 09, 2020 | 4:07 PM

Share

ಗದಗ: ದೇಶದ ಗಡಿ ಕಾಯೋ ಯೋಧನೊಬ್ಬ ಮರಳಿ ತನ್ನ ಊರಿಗೆ ಹಿಂದಿರುಗಿದ ನಂತರ ತನ್ನ ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆಗಿರೋ ಪ್ರಸಂಗ ಜಿಲ್ಲೆಯ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ತನ್ನ ಜಮೀನಿನಲ್ಲಿ ಯೋಧ ಪ್ರಕಾಶ್ ಹೈಗರ್ ಸ್ವಯಂ ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ಭಾರತೀಯ ಸೇನೆಯ 49 ಬಟಾಲಿಯನ್​ನಲ್ಲಿ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಕಾಶ್​ರನ್ನು ಅರುಣಾಚಲ ಪ್ರದೇಶದ ಭಾರತ- ಚೀನಾ ಗಡಿಯಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಜುಲೈ 2ರಂದು ಅರುಣಾಚಲ ಪ್ರದೇಶದಿಂದ ತಮ್ಮ ಗ್ರಾಮಕ್ಕೆ ರಜೆ ಮೇಲೆ ಮರಳಿದ್ದಾರೆ‌.

ಈ ಮಧ್ಯೆ ಗ್ರಾಮದೆಲ್ಲೆಡೆ ಸೋಂಕಿನ ಭೀತಿ ಹರಡಿರುವ ಕಾರಣ ಯಾರಿಗೂ ತೊಂದರೆ ಕೊಡಲು ಬಯಸದ ಯೋಧ ತನ್ನ ಜಮೀನಿನಲ್ಲಿ ಟ್ರ್ಯಾಕ್ಟರ್​ ಮೇಲೆ ಟೆಂಟ್ ನಿರ್ಮಿಸಿಕೊಂಡು ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಸರ್ಕಾರದ ಮಾರ್ಗಸೂಚಿಯಂತೆ ಯೋಧ ಕ್ವಾರಂಟೈನ್​ ಸರಕಾರದ ಮಾರ್ಗಸೂಚಿಯಂತೆ ತಮ್ಮ ಕ್ವಾರಂಟೈನ್ ಅವಧಿ ಪೂರೈಸಲು ಮುಂದಾಗಿದ್ದಾರೆ. ಸದ್ಯಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿ ಯೋಧನ ಪರೀಕ್ಷೆ ನಡೆಸಿದ್ದಾರೆ. ಆದರೆ ಯೋಧನಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.

ಆದರೂ ನನ್ನಿಂದ ಗ್ರಾಮಸ್ಥರಿಗೆ ಆತಂಕ ಉಂಟಾಗೋದು ಬೇಡ ಅಂತಾ ಖುದ್ದು ತಾವೇ ದಿನ ನಿತ್ಯ ಮನೆಯಿಂದ ಊಟವನ್ನ ತರಿಸಿಕೊಂಡು ಹೊಲದಲ್ಲಿ ಕಾಲ‌ ಕಳೆಯುತ್ತಿದ್ದಾರೆ. ಯೋಧನ ನಿರ್ಧಾರಕ್ಕೆ ಗ್ರಾಮಸ್ಥರಿಂದ ಭಾರೀ  ಶಹಬ್ಬಾಸ್​ಗಿರಿ ಸಿಕ್ಕಿದೆ.

Published On - 1:32 pm, Thu, 9 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ