AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆದ ಯೋಧ! ಗ್ರಾಮಸ್ಥರು ಶಹಬ್ಬಾಸ್​ ಅಂದ್ರು..

ಗದಗ: ದೇಶದ ಗಡಿ ಕಾಯೋ ಯೋಧನೊಬ್ಬ ಮರಳಿ ತನ್ನ ಊರಿಗೆ ಹಿಂದಿರುಗಿದ ನಂತರ ತನ್ನ ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆಗಿರೋ ಪ್ರಸಂಗ ಜಿಲ್ಲೆಯ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ತನ್ನ ಜಮೀನಿನಲ್ಲಿ ಯೋಧ ಪ್ರಕಾಶ್ ಹೈಗರ್ ಸ್ವಯಂ ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ಭಾರತೀಯ ಸೇನೆಯ 49 ಬಟಾಲಿಯನ್​ನಲ್ಲಿ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಕಾಶ್​ರನ್ನು ಅರುಣಾಚಲ ಪ್ರದೇಶದ ಭಾರತ- ಚೀನಾ ಗಡಿಯಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಜುಲೈ 2ರಂದು ಅರುಣಾಚಲ ಪ್ರದೇಶದಿಂದ ತಮ್ಮ ಗ್ರಾಮಕ್ಕೆ […]

ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆದ ಯೋಧ! ಗ್ರಾಮಸ್ಥರು ಶಹಬ್ಬಾಸ್​ ಅಂದ್ರು..
KUSHAL V
| Edited By: |

Updated on:Jul 09, 2020 | 4:07 PM

Share

ಗದಗ: ದೇಶದ ಗಡಿ ಕಾಯೋ ಯೋಧನೊಬ್ಬ ಮರಳಿ ತನ್ನ ಊರಿಗೆ ಹಿಂದಿರುಗಿದ ನಂತರ ತನ್ನ ಜಮೀನಿನಲ್ಲೇ ಸ್ವಯಂ ಕ್ವಾರಂಟೈನ್​ ಆಗಿರೋ ಪ್ರಸಂಗ ಜಿಲ್ಲೆಯ ಅಂತೂರ ಬೆಂತೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ತನ್ನ ಜಮೀನಿನಲ್ಲಿ ಯೋಧ ಪ್ರಕಾಶ್ ಹೈಗರ್ ಸ್ವಯಂ ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ಭಾರತೀಯ ಸೇನೆಯ 49 ಬಟಾಲಿಯನ್​ನಲ್ಲಿ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಕಾಶ್​ರನ್ನು ಅರುಣಾಚಲ ಪ್ರದೇಶದ ಭಾರತ- ಚೀನಾ ಗಡಿಯಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಜುಲೈ 2ರಂದು ಅರುಣಾಚಲ ಪ್ರದೇಶದಿಂದ ತಮ್ಮ ಗ್ರಾಮಕ್ಕೆ ರಜೆ ಮೇಲೆ ಮರಳಿದ್ದಾರೆ‌.

ಈ ಮಧ್ಯೆ ಗ್ರಾಮದೆಲ್ಲೆಡೆ ಸೋಂಕಿನ ಭೀತಿ ಹರಡಿರುವ ಕಾರಣ ಯಾರಿಗೂ ತೊಂದರೆ ಕೊಡಲು ಬಯಸದ ಯೋಧ ತನ್ನ ಜಮೀನಿನಲ್ಲಿ ಟ್ರ್ಯಾಕ್ಟರ್​ ಮೇಲೆ ಟೆಂಟ್ ನಿರ್ಮಿಸಿಕೊಂಡು ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಸರ್ಕಾರದ ಮಾರ್ಗಸೂಚಿಯಂತೆ ಯೋಧ ಕ್ವಾರಂಟೈನ್​ ಸರಕಾರದ ಮಾರ್ಗಸೂಚಿಯಂತೆ ತಮ್ಮ ಕ್ವಾರಂಟೈನ್ ಅವಧಿ ಪೂರೈಸಲು ಮುಂದಾಗಿದ್ದಾರೆ. ಸದ್ಯಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿ ಯೋಧನ ಪರೀಕ್ಷೆ ನಡೆಸಿದ್ದಾರೆ. ಆದರೆ ಯೋಧನಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.

ಆದರೂ ನನ್ನಿಂದ ಗ್ರಾಮಸ್ಥರಿಗೆ ಆತಂಕ ಉಂಟಾಗೋದು ಬೇಡ ಅಂತಾ ಖುದ್ದು ತಾವೇ ದಿನ ನಿತ್ಯ ಮನೆಯಿಂದ ಊಟವನ್ನ ತರಿಸಿಕೊಂಡು ಹೊಲದಲ್ಲಿ ಕಾಲ‌ ಕಳೆಯುತ್ತಿದ್ದಾರೆ. ಯೋಧನ ನಿರ್ಧಾರಕ್ಕೆ ಗ್ರಾಮಸ್ಥರಿಂದ ಭಾರೀ  ಶಹಬ್ಬಾಸ್​ಗಿರಿ ಸಿಕ್ಕಿದೆ.

Published On - 1:32 pm, Thu, 9 July 20

Follow Us
KUSHAL V
KUSHAL V
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ