AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹೂ ಕುಂಡಗಳಲ್ಲಿ ಗಾಂಜಾ ಬೆಳೆದಿದ್ದ ಖತರ್ನಾಕ್ ಆಸಾಮಿಯ ಬಂಧನ

ಸಿಮ್​ ಕಾರ್ಡ್​​ ಕದ್ದು ಬ್ಯಾಂಕ್​ ಖಾತೆಗೆ ಕನ್ನ ಹಾಕಿದ್ದ ಆರೋಪಿ ಪ್ರಕಾಶ್ ಜೆ.ಬಿ(31) ಎಂಬಾತನನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯಿಂದ 1.30 ಲಕ್ಷ, 2 ಮೊಬೈಲ್, ಬೈಕ್ ಜಪ್ತಿ ಮಾಡಲಾಗಿದೆ.

Crime News: ಹೂ ಕುಂಡಗಳಲ್ಲಿ ಗಾಂಜಾ ಬೆಳೆದಿದ್ದ ಖತರ್ನಾಕ್ ಆಸಾಮಿಯ ಬಂಧನ
ಸ್ಥಳಕ್ಕೆ ಭೇಟಿ ನೀಡಿ ಮಹಜರ್ ನಡೆಸಿದ ಗುಬ್ಬಿ ತಹಶಿಲ್ದಾರ್ ಆರತಿ.
TV9 Web
| Edited By: |

Updated on: Aug 08, 2022 | 10:39 AM

Share

ತುಮಕೂರು: ಹೂ ಕುಂಡಗಳಲ್ಲಿ ಗಾಂಜಾ (cannabis) ಬೆಳೆದಿದ್ದ ಖತರ್ನಾಕ್ ಆಸಾಮಿಯ ಬಂಧನವಾಗಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ಪಟ್ಟಣದ ಜ್ಯೋತಿನಗರದಲ್ಲಿ ನಡೆದಿದೆ. ಗಾಂಜಾ ಸಮೇತ ಗಫರ್ ಅಲಿಖಾನ್(42) ಎಂಬಾತನನ್ನು ಬಂಧಿಸಲಾಗಿದೆ. ಆಟೋ ಚಾಲಕನಾಗಿ ಗುರುತಿಸಿಕೊಂಡಿದ್ದ ಗಫರ್ ಅಲಿಖಾನ್, ತನ್ನ ಮನೆಯ ಎರಡು ಹೂವಿನ ಕುಂಡಗಳಲ್ಲಿ ಗಾಂಜಾ ಸೊಪ್ಪು ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಗುಬ್ಬಿ ಮತ್ತು ಚೇಳೂರು ಪೊಲೀಸರು ದಾಳಿ ಮಾಡಿದ್ದರು. ಸ್ಥಳಕ್ಕೆ ಭೇಟಿ ನೀಡಿ ಗುಬ್ಬಿ ತಹಶಿಲ್ದಾರ್ ಆರತಿ ಮಹಜರ್ ನಡೆಸಿದರು. ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮ್​ ಕಾರ್ಡ್​​ ಕದ್ದು ಬ್ಯಾಂಕ್​ ಖಾತೆಗೆ ಕನ್ನ: ಆರೋಪಿ ಅಂದರ್

ಬೆಂಗಳೂರು: ಸಿಮ್​ ಕಾರ್ಡ್​​ ಕದ್ದು ಬ್ಯಾಂಕ್​ ಖಾತೆಗೆ ಕನ್ನ ಹಾಕಿದ್ದ ಆರೋಪಿ ಪ್ರಕಾಶ್ ಜೆ.ಬಿ(31) ಎಂಬಾತನನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯಿಂದ 1.30 ಲಕ್ಷ, 2 ಮೊಬೈಲ್, ಬೈಕ್ ಜಪ್ತಿ ಮಾಡಲಾಗಿದೆ. ಪರಿಚಯಸ್ಥರಿಂದ ಬ್ಯಾಂಕ್ ಅಕೌಂಟ್ ಲಿಂಕ್ ಮೊಬೈಲ್ ಪಡೆದು ಸಿಮ್ ಕದಿಯುತ್ತಿದ್ದು, ಆ ಮೊಬೈಲ್​ಗೆ ಬೇರೆ ಸಿಮ್ ಹಾಕಿ ಹಣ ಎಗರಿಸ್ತಿದ್ದ. ಸಿಮ್ ಕಳೆದಿದೆ ಅಂತಾ ಮೋಸ ಹೋದವರು ಬ್ಲಾಕ್ ಮಾಡುತ್ತಿದ್ದರು. ನಕಲಿ ಸಿಮ್ ಪಡೆದು ಆ್ಯಕ್ಟಿವ್ ಮಾಡಿದಾಗ ವಂಚನೆ ಬೆಳಕಿಗೆ ಬಂದಿದೆ.

ಸರ, ಬೈಕ್​ ಕಳ್ಳರ ಬಂಧನ

ಮೈಸೂರು: ಸರಗಳ್ಳತನ ಮತ್ತು ಬೈಕ್​​​ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನ ನರಸಿಂಹರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷ ಮೌಲ್ಯದ 27 ಗ್ರಾಂ ಚಿನ್ನಾಭರಣ, 1.5 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳು ವಶಕ್ಕೆ ಪಡೆಯಲಾಗಿದೆ. ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾಡಾನೆ ದಾಳಿಗೆ ಮತ್ತೊಂದು ಬಲಿ

ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ‌ ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ನಡೆದಿದೆ. ಕೆಂಪಣ್ಣ (50) ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ. ಇಂದು ಬೆಳಗಿನಜಾವ ಜಮೀನಿಗೆ ತೆರಳೊ ವೇಳೆ ಕಾಡಾನೆ ದಾಳಿ ಮಾಡಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಳ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳಿಯರ ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಡಹಗಲೇ ಸುಲಿಗೆ ಮಾಡುತ್ತಿದ್ದವರ ಬಂಧನ

ರಾಯಚೂರು: ಹಾಡಹಗಲೇ ತರಕಾರಿ ಮತ್ತು ಹಣ್ಣಿನ ವ್ಯಾಪಾರಿಗಳನ್ನು ಸುಲಿಗೆ ಮಾಡುತ್ತಿದ್ದ ರವಿ, ರಮೇಶ್, ಈರಕುಮಾರ್ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 1 ಲಕ್ಷ ನಗದು, ಬೈಕ್ ಜಪ್ತಿ ಮಾಡಲಾಗಿದೆ. ಜು.29ರಂದು ಸಿಂಧನೂರು ತಾಲೂಕಿನ ಜವಳಗೆರಾ ಬಳಿ ತರಕಾರಿ ವ್ಯಾಪಾರಿ ಭೀಮಣ್ಣ ಎಂಬುವರನ್ನು ಅಡ್ಡಗಟ್ಟಿ‌ ಆರೋಪಿಗಳು 1 ಲಕ್ಷ ನಗದು ದೋಚಿದ್ದರು. ಬಳಗಾನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?