AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸುನೀಲ್ ಕುಮಾರ್ ಜತೆ 20 ನಿಮಿಷ ಚರ್ಚಿಸಿದ ಅರುಣ್​ ಸಿಂಗ್​; ಅದೊಂದು ಪತ್ರವೇ ಕಾರಣ ಪ್ರತ್ಯೇಕ ಮಾತುಕತೆಗೆ

ಪತ್ರದ ವಿಚಾರ ಅರುಣ್​ ಸಿಂಗ್ ಗಮನಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಭೇಟಿಯಾಗುವಂತೆ ಸುನೀಲ್​ಗೆ ತಿಳಿಸಿದ್ದರು. ಅದರಂತೆ ಇಂದು ಭೇಟಿಯಾದ ಶಾಸಕ ಸುನೀಲ್ ಕುಮಾರ್​ರೊಂದಿಗೆ 20 ನಿಮಿಷ ಚರ್ಚೆ ನಡೆಸಿದ್ದಾರೆ.

ಶಾಸಕ ಸುನೀಲ್ ಕುಮಾರ್ ಜತೆ 20 ನಿಮಿಷ ಚರ್ಚಿಸಿದ ಅರುಣ್​ ಸಿಂಗ್​; ಅದೊಂದು ಪತ್ರವೇ ಕಾರಣ ಪ್ರತ್ಯೇಕ ಮಾತುಕತೆಗೆ
ಸುನೀಲ್​ ಕುಮಾರ್​ (ಎಡ)ಅರುಣ್ ಸಿಂಗ್​ (ಬಲ)
Lakshmi Hegde
| Edited By: |

Updated on:Dec 06, 2020 | 4:55 PM

Share

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಿ, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಭೋಜನ ಮುಗಿಸಿ ತೆರಳಿದ್ದಾರೆ. ಹಾಗೆ ಹೋಗುವ ಮುನ್ನ ಸಿಎಂ ಯಡಿಯೂರಪ್ಪನವರ ಸರ್ಕಾರವನ್ನು ಹೊಗಳಿದ್ದಲ್ಲದೆ, ಸಂಪುಟ ವಿಸ್ತರಣೆಯ ಹೊಣೆಯನ್ನೂ ಯಡಿಯೂರಪ್ಪನವರ ಹೆಗಲಿಗೇ ವಹಿಸಿದ್ದಾರೆ. ಅಲ್ಲಿಗೆ, ಇಂದಾದರೂ ಸಚಿವ ಸಂಪುಟ ವಿಸ್ತರಣೆಗೆ ಒಪ್ಪಿಗೆ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದ ಬಿಜೆಪಿಗರಿಗೆ ಸಣ್ಣ ನಿರಾಸೆಯೇ ಆಗಿದೆ.

ಭೇಟಿಗೆ ಪತ್ರ ಕಾರಣ ಆದರೆ ಈ ಮಧ್ಯೆ ಅರುಣ್ ಸಿಂಗ್​ ಇಂದು ಶಾಸಕ ಸುನೀಲ್ ಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ, 20 ನಿಮಿಷ ಮಾತನಾಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ವಿಧಾನಸಭೆ ಮುಖ್ಯಸಚೇತಕ ಸುನೀಲ್​ ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ಕುಮಾರ್ ಕಟೀಲ್​ಗೆ ಪತ್ರ ಬರೆದು, ಪಕ್ಷದ ಕೆಲವು ಆಂತರಿಕ ವಿಚಾರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಪತ್ರದ ವಿಚಾರ ಅರುಣ್​ ಸಿಂಗ್ ಗಮನಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಭೇಟಿಯಾಗುವಂತೆ ಸುನೀಲ್​ಗೆ ತಿಳಿಸಿದ್ದರು. ಅದರಂತೆ ಇಂದು ಭೇಟಿಯಾದ ಶಾಸಕ ಸುನೀಲ್ ಕುಮಾರ್​ರೊಂದಿಗೆ 20 ನಿಮಿಷ ಚರ್ಚೆ ನಡೆಸಿದ್ದಾರೆ. ಅದಾದ ಬೆನ್ನಲ್ಲೇ ಸಚಿವರು, ಸಂಸದರು, ಶಾಸಕರೊಂದಿಗೆ ಅರುಣ್​ ಸಿಂಗ್ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಈ ಹಂತದ ಮಾತುಕತೆಯೀಗ ಸಿಕ್ಕಾಪಟೆ ಕುತೂಹಲ ಮೂಡಿಸಿದೆ. ಪಕ್ಷದ ಆಂತರಿಕ ಸಮಸ್ಯೆಗಳನ್ನೆಲ್ಲ ಸುನೀಲ್ ಅರುಣ್​ಸಿಂಗ್ ಎದುರು ಹೇಳಿದ್ದಾರಾ ಎಂಬ ಪ್ರಶ್ನೆಯೂ ಎದ್ದಿದೆ.

ಏನಿತ್ತು ಪತ್ರದಲ್ಲಿ? ಸುನೀಲ್ ಕುಮಾರ್ ರಾಜ್ಯಾಧ್ಯಕ್ಷರಿಗೆ ಬರೆದ ಪತ್ರದಲ್ಲಿ, ಕೆಲವು ವಿಚಾರಗಳನ್ನು ಬಹಿರಂಗವಾಗಿ ಮಾತನಾಡುತ್ತಿರುವ ಶಾಸಕರು, ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿಯ ಮೂಲ ಸಿದ್ಧಾಂತದಡಿ ಕೆಲಸ ಮಾಡುತ್ತಿರುವ ಕಾರ್ಯಕರ್ತರು ನಿಗಮ ಮಂಡಳಿ ನೇಮಕ, ಮಂತ್ರಿ ಮಂಡಲ ರಚನೆ ವಿಚಾರವಾಗಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮೂಲ ಮತ್ತು ವಲಸಿಗರು ಎಂಬ ವಿಭಜನಾ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಪಕ್ಷದ ಶಿಸ್ತಿನ ಬಗ್ಗೆ ಎಲ್ಲರಿಗೂ ಗಟ್ಟಿಯಾಗಿ ಹೇಳಬೇಕಿದೆ. ಇನ್ನು ಶಾಸಕರೂ ಕೂಡ ಪಕ್ಷದ ಚೌಕಟ್ಟಿನಲ್ಲಿಯೇ ಅಭಿಪ್ರಾಯವನ್ನು ಹಂಚಿಕೊಳ್ಳಬೇಕು. ನೀವು ರಾಜ್ಯಾಧ್ಯಕ್ಷರು ಎಲ್ಲ ಶಾಸಕರ ಮಾತು, ಅನಿಸಿಕೆಯನ್ನೂ ಆಲಿಸಬೇಕು. ಹಾಗಾಗಿ ಕೂಡಲೇ ಒಂದು ಶಾಸಕರ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದರು.

ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಅಂತಿಮ ನಿರ್ಧಾರ ಕೈಗೊಳ್ತಾರೆ.. BSY ಅಂಗಳಕ್ಕೆ ಚೆಂಡೆಸೆದ ಅರುಣ್ ಸಿಂಗ್

Published On - 4:55 pm, Sun, 6 December 20

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ