AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಅಂತಿಮ ನಿರ್ಧಾರ ಕೈಗೊಳ್ತಾರೆ.. BSY ಅಂಗಳಕ್ಕೆ ಚೆಂಡೆಸೆದ ಅರುಣ್ ಸಿಂಗ್

ಇಂದು ನಗರಕ್ಕೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಅವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ಜೊತೆಗೆ, ಸಂಪುಟ ವಿಸ್ತರಣೆ ಬಗ್ಗೆ ಪ್ರಶ್ನಿಸಿದ್ದಕ್ಕೆ, ನೀವೆಲ್ಲಾ ಯಾಕೆ ಇಷ್ಟೊಂದು ತರಾತುರಿಯಲ್ಲಿದ್ದೀರಿ ಎಂದು ಮರುಪ್ರಶ್ನೆ ಹಾಕಿ ಹೊರಟು ಹೋದರು.

ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಅಂತಿಮ ನಿರ್ಧಾರ ಕೈಗೊಳ್ತಾರೆ.. BSY ಅಂಗಳಕ್ಕೆ ಚೆಂಡೆಸೆದ ಅರುಣ್ ಸಿಂಗ್
ಅರುಣ್​ ಸಿಂಗ್ (ಎಡ); ಬಿ.ಎಸ್.​ ಯಡಿಯೂರಪ್ಪ (ಬಲ)
TV9 Web
| Edited By: |

Updated on:Apr 07, 2022 | 5:37 PM

Share

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನೆರವೇರಿಸುವ ನಿಟ್ಟಿನಲ್ಲಿ ಹೈಕಮಾಂಡ್​ ಅನುಮತಿ ಪಡೆಯಲು ಭಾರಿ ಹುಮ್ಮಸ್ಸಿನಲ್ಲಿ ದೆಹಲಿಗೆ ಪ್ರಯಾಣ ಬೆಳಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ, ಇದೀಗ ಸಂಪುಟ ವಿಸ್ತರಣೆ ಬಗ್ಗೆ ಪ್ರಶ್ನೆ ಕೇಳಿದರೆ ಉತ್ತರ ಕೊಡದೆ ಮೌನವಹಿಸುತ್ತಿದ್ದಾರೆ.

ದೆಹಲಿಯಿಂದ ಯಡಿಯೂರಪ್ಪ ವಾಪಾಸ್​ ಆಗಿ ವಾರ ಕಳೆದರೂ ಇನ್ನೂ ಸಂಪುಟ ವಿಸ್ತರಣೆ ಆಗಿಲ್ಲ. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತದೆ ಎಂದಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಇತ್ತ, ಇಂದು ನಗರಕ್ಕೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಅವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ಜೊತೆಗೆ, ಸಂಪುಟ ವಿಸ್ತರಣೆ ಬಗ್ಗೆ ಪ್ರಶ್ನಿಸಿದ್ದಕ್ಕೆ, ನೀವೆಲ್ಲಾ ಯಾಕೆ ಇಷ್ಟೊಂದು ತರಾತುರಿಯಲ್ಲಿದ್ದೀರಿ ಎಂದು ಮರುಪ್ರಶ್ನೆ ಹಾಕಿ ಹೊರಟು ಹೋದರು.

ಈ ಮೂಲಕ, ಹೈಕಮಾಂಡ್‌ ನಿರ್ಧಾರವೇ ಅಂತಿಮ ಅಂತಿದ್ದ ನಾಯಕರು ಈಗ U-ಟರ್ನ್​ ತೆಗೆದುಕೊಂಡಿದ್ದಾರೆ. ಇದೀಗ ಎಲ್ಲರ ಗಮನ ಸಿಎಂನತ್ತ ಹರಿದಿದೆ. ಆದರೆ, ಅರುಣ್​ ಸಿಂಗ್​ ಹೇಳಿಕೆಯ ನಂತರವೂ ಸಿಎಂ ಯಡಿಯೂರಪ್ಪ ಮೌನಂ ಶರಣಂ ಗಚ್ಛಾಮಿ ಎಂದು ಸುಮ್ಮನಾಗಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆಯ ವಿಚಾರ ಹಲವು ಗೊಂದಲ ಸೃಷ್ಟಿಸಿದೆ. ಹಾಗಾಗಿ, ಹೈಕಮಾಂಡ್‌ ಮೇಲೆ ಸಿಎಂ ಬಿಎಸ್‌ವೈ ಮುನಿಸಿಕೊಂಡಿದ್ದಾರಾ ಎಂಬ ಅನುಮಾನಗಳು ಮೂಡಿವೆ.

ಸಿಎಂ ಯಡಿಯೂರಪ್ಪ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ಅದಕ್ಕಾಗಿ ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿರಬಹುದು. ರಾಜ್ಯಸರ್ಕಾರ ಚೆನ್ನಾಗಿ ಕೆಲಸ ನಿರ್ವಹಿಸಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಬಿಜೆಪಿ ನಾಯಕರು: ಕೋರ್ ಕಮಿಟಿ ಸಭೆ ಒಳಗೆ ನಡೆದಿದ್ದೇನು? ಇಂದಿನ ಕಾರ್ಯಕಾರಿಣಿ ಸಭೆ ಏನು ಮಾಡುತ್ತೆ?

Published On - 3:03 pm, Sun, 6 December 20

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!