Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಂದಲದ ಗೂಡಾದ ಕರ್ನಾಟಕ ಯುವ ಕಾಂಗ್ರೆಸ್ ಚುನಾವಣೆ: ಮರು ಮತ ಎಣಿಕೆಗೆ ಸೂಚಿಸಿದ AICC!

recounting of karnataka youth congress president election ವಿಜೇತ ಅಭ್ಯರ್ಥಿ ರಕ್ಷಾ ರಾಮಯ್ಯ ಮನವಿಯಂತೆ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಮರು ಮತ ಎಣಿಕೆ ನಡೆಸಲು ಎಐಸಿಸಿ ಒಪ್ಪಿಗೆ ನೀಡಿದೆ. ಫೆಬ್ರವರಿ 20 ಮತ್ತು 21 ರಂದು ಮರು ಮತ ಎಣಿಕೆ ನಡೆಯಲಿದೆ.

ಗೊಂದಲದ ಗೂಡಾದ ಕರ್ನಾಟಕ ಯುವ ಕಾಂಗ್ರೆಸ್ ಚುನಾವಣೆ: ಮರು ಮತ ಎಣಿಕೆಗೆ ಸೂಚಿಸಿದ AICC!
ಎಮ್.ಎಸ್. ರಕ್ಷಾ ರಾಮಯ್ಯ
Follow us
ಸಾಧು ಶ್ರೀನಾಥ್​
|

Updated on:Feb 12, 2021 | 3:24 PM

ಬೆಂಗಳೂರು: ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಪ್ರಕ್ರಿಯೆ ಇತ್ತೀಚೆಗಷ್ಟೇ ಮುಗಿದಿದ್ದು, ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯೂ ಮುಗಿದಿದೆ. ಆದರೆ ಪ್ರಕ್ರಿಯೆಯು ಭಾರೀ ವಿವಾದಕ್ಕೆ ತುತ್ತಾಗಿದ್ದು, ಅದಿನ್ನೂ ತಿಳಿಯಾಗಿಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು. ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ.. ಕಡಿಮೆ ಮತಗಳು ಪಡೆದರೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ರಕ್ಷಾ ರಾಮಯ್ಯ ಅವರು ಈಗ ಯುವ ಕಾಂಗ್ರೆಸ್ ಚುನಾವಣೆ ಮತದಾನದಲ್ಲಿ ನಡೆದಿದ್ದ ಮತಗಳ ಮರು ಎಣಿಕೆ ನಡೆಯಲಿ ಎಂದು ಮನವಿ ಮಾಡಿದ್ದಾರೆ.

ಕಡಿಮೆ ಮತ ಪಡೆದಿದ್ದರೂ ವಿಜೇತ ಅಭ್ಯರ್ಥಿ ಎಂದು ಘೋಷಣೆಯಾದೆ. ಆದರೆ ನನಗೆ ಹೆಚ್ಚಿನ‌ ಮತ ಪಡೆದಿರುವ ವಿಶ್ವಾಸವಿದೆ. ಹಾಗಾಗಿ ಮತಗಳ ಮರು ಎಣಿಕೆ ನಡೆಯಲಿ ಎಂದು ರಕ್ಷ ರಾಮಯ್ಯ ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರವಾಗಿ ರಕ್ಷಾ ರಾಮಯ್ಯ ಮನವಿಯನ್ನು ಎಐಸಿಸಿ ಒಪ್ಪಿದೆ! ಫೇಮ್ ಸಂಸ್ಥೆ ಮೂಲಕ ಮರು ಮತ ಎಣಿಕೆ ನಡೆಸಲು ಎಐಸಿಸಿ ಒಪ್ಪಿಗೆ ನೀಡಿದೆ. ಫೆಬ್ರವರಿ 20 ಮತ್ತು 21 ರಂದು ಮರು ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ಅಭ್ಯರ್ಥಿಗಳಾಗಿದ್ದ ರಕ್ಷಾ ರಾಮಯ್ಯ, ನಲಪಾಡ್ ಹ್ಯಾರಿಸ್ ಹಾಗೂ ಎನ್ ಎಸ್ ಮಂಜುನಾಥ್ ಅವರುಗಳಿಗೆ ದೆಹಲಿಗೆ ಬರುವಂತೆ ಎಐಸಿಸಿ ಬುಲಾವ್ ನೀಡಿದೆ.

Published On - 3:19 pm, Fri, 12 February 21

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ