ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಲಿಂಗಸಗೂರು ಮೂಲದ ಗಸ್ತಿ ಹಿನ್ನೆಲೆ

ಆಶ್ಚರ್ಯಕರ ಬೆಳವಣಿಗೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರ ಮೂಲದ ಅಶೋಕ್ ಗಸ್ತಿ ಅವರನ್ನು ಬಿಜೆಪಿ ಹೈಕಮಾಂಡ್ ಇದೇ 19ರಂದು ನಡೆಯುವ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ರಾಜ್ಯ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಸ್ತಿ, ಎಬಿವಿಪಿ ಮತ್ತು ಸಂಘ ಪರಿವಾರದ ಚಟುವಟಿಕೆಯಲ್ಲಿ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯ ಸಂತೋಷಜಿ ಜತೆ ಉತ್ತಮ‌ ಬಾಂಧವ್ಯ ಹೊಂದಿದ್ದಾರೆ. ಇವರಿಗೆ ರಾಜ್ಯಸಭೆ ಟಿಕೇಟ್ ಘೋಷಣೆಯಾಗಿದ್ದು ಜಿಲ್ಲೆಯ ಬಹುತೇಕ ಬಿಜೆಪಿ ಮುಖಂಡರಲ್ಲೆ ಆಶ್ಚರ್ಯ ಮೂಡಿಸಿದೆ. ಎರಡು ಬಾರಿ ರಾಯಚೂರ ಜಿಲ್ಲಾ ಬಿಜೆಪಿ ಪ್ರಧಾನ […]

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಲಿಂಗಸಗೂರು ಮೂಲದ ಗಸ್ತಿ ಹಿನ್ನೆಲೆ
ಸಾಧು ಶ್ರೀನಾಥ್​

Updated on: Jun 08, 2020 | 4:29 PM

ಆಶ್ಚರ್ಯಕರ ಬೆಳವಣಿಗೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರ ಮೂಲದ ಅಶೋಕ್ ಗಸ್ತಿ ಅವರನ್ನು ಬಿಜೆಪಿ ಹೈಕಮಾಂಡ್ ಇದೇ 19ರಂದು ನಡೆಯುವ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.

ರಾಜ್ಯ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಸ್ತಿ, ಎಬಿವಿಪಿ ಮತ್ತು ಸಂಘ ಪರಿವಾರದ ಚಟುವಟಿಕೆಯಲ್ಲಿ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯ ಸಂತೋಷಜಿ ಜತೆ ಉತ್ತಮ‌ ಬಾಂಧವ್ಯ ಹೊಂದಿದ್ದಾರೆ. ಇವರಿಗೆ ರಾಜ್ಯಸಭೆ ಟಿಕೇಟ್ ಘೋಷಣೆಯಾಗಿದ್ದು ಜಿಲ್ಲೆಯ ಬಹುತೇಕ ಬಿಜೆಪಿ ಮುಖಂಡರಲ್ಲೆ ಆಶ್ಚರ್ಯ ಮೂಡಿಸಿದೆ. ಎರಡು ಬಾರಿ ರಾಯಚೂರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಸ್ತಿ ರಾಯಚೂರ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us