ಐಟಿ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿ ಸೆರೆ

ಬೆಂಗಳೂರು: ಐಟಿ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಿವಾಸಿ ನಾಗೇಂದ್ರ(40) ಬಂಧಿತ ಆರೋಪಿ. ಎಲ್‌ಐಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಂದ್ರ, ಎಲ್‌ಐಸಿ ಹಣ ಪಡೆಯುವ ವೇಳೆ ಸರ್ಕಾರಿ ಅಧಿಕಾರಿಗಳ ಮಾಹಿತಿ ಸಂಗ್ರಹಿಸುತ್ತಿದ್ದ. ಬಳಿಕ ಅದೇ ಅಧಿಕಾರಿಗಳಿಗೆ ಮಂಜುನಾಥ್ ನಾಯಕ್ ಎಂಬ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ. ನಿವೃತ್ತಿಯ ಸನಿಹದಲ್ಲಿರುವವರನ್ನು ಟಾರ್ಗೆಟ್ ಮಾಡಿ ನಿಮ್ಮ ಆಸ್ತಿವಿವರ ನನ್ನ ಬಳಿ ಇದೆ, ಲೆಕ್ಕ ನೀಡಿ ಎಂದು ಧಮ್ಕಿ ಹಾಕಿ, ನಾಳೆಯೇ […]

ಐಟಿ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿ ಸೆರೆ
ಸಾಧು ಶ್ರೀನಾಥ್​

Updated on: Feb 21, 2020 | 9:08 AM

ಬೆಂಗಳೂರು: ಐಟಿ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಿವಾಸಿ ನಾಗೇಂದ್ರ(40) ಬಂಧಿತ ಆರೋಪಿ. ಎಲ್‌ಐಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಂದ್ರ, ಎಲ್‌ಐಸಿ ಹಣ ಪಡೆಯುವ ವೇಳೆ ಸರ್ಕಾರಿ ಅಧಿಕಾರಿಗಳ ಮಾಹಿತಿ ಸಂಗ್ರಹಿಸುತ್ತಿದ್ದ. ಬಳಿಕ ಅದೇ ಅಧಿಕಾರಿಗಳಿಗೆ ಮಂಜುನಾಥ್ ನಾಯಕ್ ಎಂಬ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ.

ನಿವೃತ್ತಿಯ ಸನಿಹದಲ್ಲಿರುವವರನ್ನು ಟಾರ್ಗೆಟ್ ಮಾಡಿ ನಿಮ್ಮ ಆಸ್ತಿವಿವರ ನನ್ನ ಬಳಿ ಇದೆ, ಲೆಕ್ಕ ನೀಡಿ ಎಂದು ಧಮ್ಕಿ ಹಾಕಿ, ನಾಳೆಯೇ ಕಚೇರಿಗೆ ಬರುವಂತೆ ಕೇಳುತ್ತಿದ್ದ. ಆಗ ನಾವು ನಿವೃತ್ತಿ ಹಂತದಲ್ಲಿದ್ದೇವೆ ಎಂದು ಮನವಿ ಮಾಡಿಕೊಳ್ತಿದ್ರು. ಬಳಿಕ ಹಣ ನೀಡಿ ಸುಮ್ಮನಾಗಿ ಎಂದು ನಾಗೇಂದ್ರ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ. ಆರೋಪಿ ಮಾತು ನಂಬಿ ಅಧಿಕಾರಿಗಳು ಹಣವನ್ನು ನೀಡಿದ್ದರು. ಹೀಗೆ ಓರ್ವ ಅಧಿಕಾರಿಗೆ ಅನುಮಾನ ಬಂದು ಪರಿಶೀಲನೆ ಮಾಡಿದ್ದಾರೆ ಈ ವೇಳೆ ಆರೋಪಿ ಮಾಡಿರುವ ವಂಚನೆ ಬಯಲಾಗಿದೆ.

ಅಧಿಕಾರಿ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರ್​ಟಿ ಓನ ಡಿಆರ್​ಡಿಓ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬರೋಬ್ಬರಿ ನೂರು ಮಂದಿ ಸರ್ಕಾರಿ ನೌಕರರಿಂದ ಕೋಟ್ಯಾಂತರ ಹಣ ಲೂಟಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ವಿಚಾರಣೆ ವೇಳೆ ಮತ್ತಷ್ಟು ವಂಚನೆ ಪ್ರಕರಣ ಬೆಳಕಿಗೆ ಬರುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us