AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ದುಡ್ಡು, ಸ್ವಂತ ದುಡಿಮೆ: ರಸ್ತೆ ಸರಿಪಡಿಸೋಕೆ ಖಡಕ್​ ಖಾಕಿ ಅಧಿಕಾರಿ ಕಾರ್ಮಿಕನಾದ ಪರಿ

ರಸ್ತೆಯ ದುಃಸ್ಥಿತಿ ನೋಡಿ ಎಷ್ಟೋ ಸಲ ಪೊಲೀಸರೇ ಗುಂಡಿಗಳನ್ನ ಮುಚ್ಚೋಕೆ ಮುಂದಾಗೋದನ್ನೂ ಸಹ ನೋಡಿದ್ದೀವಿ. ಅಂತೆಯೇ, ಜನಪ್ರತಿನಿಧಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಾಳಜಿ ವಹಿಸಿ ಮಾಡಬೇಕಾದ ಕೆಲಸವನ್ನು ಖಡಕ್ ಖಾಕಿ ಅಧಿಕಾರಿಯೊಬ್ಬರು ಮಾಡಲು ಮುಂದಾಗಿದ್ದಾರೆ.

ಸ್ವಂತ ದುಡ್ಡು, ಸ್ವಂತ ದುಡಿಮೆ: ರಸ್ತೆ ಸರಿಪಡಿಸೋಕೆ ಖಡಕ್​ ಖಾಕಿ ಅಧಿಕಾರಿ ಕಾರ್ಮಿಕನಾದ ಪರಿ
ASI ದೊರೆಸ್ವಾಮಿರವರ ಸಮಾಜಮುಖಿ ಕೆಲಸ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Nov 26, 2020 | 4:29 PM

ಮೈಸೂರು: ಅಪ್ಪಾ.. ಅಮ್ಮಾ.. ಅಯ್ಯೋ.. ಹಾಳಾದ್ ಗುಂಡಿಗಳು. ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಯಲ್ಲಿ ರಸ್ತೆಯಿದೆಯೋ ಗೊತ್ತಿಲ್ಲ. ಹೀಗೆ ಹತ್ತು ಹಲವಾರು ರೀತಿ ಶಪಿಸುತ್ತಾ, ಅಧಿಕಾರಿಗಳನ್ನು ಬೈದು ಮುಂದಕ್ಕೆ ಸಾಗುವುದನ್ನು ನಾವೆಲ್ಲರೂ ಮಾಡಿರುತ್ತೇವೆ. ಕೆಲವೊಮ್ಮೆ, ರಸ್ತೆಯ ದುಃಸ್ಥಿತಿ ನೋಡಿ ಎಷ್ಟೋ ಸಲ ಪೊಲೀಸರೇ ಗುಂಡಿಗಳನ್ನ ಮುಚ್ಚೋಕೆ ಮುಂದಾಗೋದನ್ನೂ ಸಹ ನೋಡಿದ್ದೀವಿ.

ಅಂತೆಯೇ, ಜನಪ್ರತಿನಿಧಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಾಳಜಿ ವಹಿಸಿ ಮಾಡಬೇಕಾದ ಕೆಲಸವನ್ನು ಖಡಕ್ ಖಾಕಿ ಅಧಿಕಾರಿಯೊಬ್ಬರು ಮಾಡಲು ಮುಂದಾಗಿದ್ದಾರೆ. ಹೌದು, H.D.ಕೋಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ASI ದೊರೆಸ್ವಾಮಿ ಪಟ್ಟಣದ ಗದ್ದಿಗೆ ವೃತ್ತದಿಂದ ಮಲಾರ ಕಾಲೋನಿ ಕ್ರಾಸ್ ರಸ್ತೆಯಲ್ಲಿರುವ ಗುಂಡಿಗಳನ್ನು ತಾವೇ ಮುಂದೆ ನಿಂತು ಮುಚ್ಚಿಸಿದರು.

ಅದು ತಮ್ಮದೇ ದುಡ್ಡಲ್ಲಿ ಸ್ವಾಮಿ. ಯೆಸ್​, ತಮ್ಮ ಸ್ವಂತ ಹಣ ಖರ್ಚು ಮಾಡಿರುವ ASI ದೊರೆಸ್ವಾಮಿ ಸಾರ್ವಜನಿಕರ ಸಹಕಾರ ಪಡೆದು ರಸ್ತೆಗುಂಡಿಗಳನ್ನ ಮುಚ್ಚಿಸಿದ್ದಾರೆ. ಮೆಚ್ಚುಗೆಯ ಸಂಗತಿಯೆಂದರೆ ಕೇವಲ ದುಡ್ಡು ಖರ್ಚು ಮಾಡಿದ್ದಲ್ಲದೇ ದೊರೆಸ್ವಾಮಿ ತಾವೇ ಕಾರ್ಮಿಕನಂತೆ ಎಲ್ಲರೊಂದಿಗೆ ಕೈಜೋಡಿಸಿ ಕೆಲಸ ಮಾಡಿದ್ದಾರೆ. ಗುಂಡಿಬಿದ್ದಿದ್ದ ಡಾಂಬರ್ ರಸ್ತೆಗೆ ಸ್ವಂತ ಹಣದಿಂದ ಕಾಂಕ್ರೀಟ್ ಹಾಕಿಸಿ ರಿಪೇರಿ ಮಾಡಿದ್ದಾರೆ. ಜನಸಾಮಾನ್ಯರಿಗಾಗಿ ಈ ಅಧಿಕಾರಿ ಬೆವರು ಸುರಿಸಿ ದುಡಿದು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಅಂದ ಹಾಗೆ, ದೊರೆಸ್ವಾಮಿಯವರ ಸಮಾಜಮುಖಿ ಕೆಲಸಗಳಲ್ಲಿ ಇದೇ ಮೊದಲಲ್ಲ. ಈ ಹಿಂದೆ, ಕೊರೊನಾ ಸಂದರ್ಭದಲ್ಲಿ ದೊರೆಸ್ವಾಮಿ ಆಹಾರ ಕಿಟ್​ಗಳನ್ನ ವಿತರಿಸಿ ಮಾನವೀಯತೆ ಮೆರೆದಿದ್ದರು.

Published On - 1:23 pm, Thu, 26 November 20

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ