ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಲೈನ್‌ಮ್ಯಾನ್ ಮೇಲೆ ಹಲ್ಲೆ.. ಯಾವೂರಲ್ಲಿ

ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಐಮಂಗಲ ಬೆಸ್ಕಾಂ ಕಚೇರಿ ಬಳಿ ಲೈನ್‌ಮ್ಯಾನ್ ಮೇಲೆ ಹಲ್ಲೆ ನಡೆದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಲೈನ್‌ಮ್ಯಾನ್ ಮೇಲೆ ಹಲ್ಲೆ.. ಯಾವೂರಲ್ಲಿ
ಆಯೇಷಾ ಬಾನು

Updated on: Nov 27, 2020 | 8:11 AM

ಚಿತ್ರದುರ್ಗ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬೆಸ್ಕಾಂ ಕಚೇರಿ ಬಳಿ ನಡೆದಿದೆ.

ನೀರಾವರಿ ಪಂಪ್‌ಸೆಟ್‌ಗೆ ನಿರಂತರ ಜ್ಯೋತಿ ಸಂಪರ್ಕ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು. ಆದ್ರೆ ಲೈನ್‌ಮ್ಯಾನ್ ಕೇಶವ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದ. ಈ ಹಿನ್ನೆಲೆಯಲ್ಲಿ ಗ್ರಾಮದ ಶಿವರಾಜ್, ಚೇತನ್, ನಿತಿನ್ ಲೈನ್‌ಮ್ಯಾನ್ ಕೇಶವಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಹಾಗೂ ಚಪ್ಪಲಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:10 am, Fri, 27 November 20

Loading...
Unable to load recommendations.
Follow Us