AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾನೆ. ಇಬ್ಬರ ನಡುವೆ ದೂರು ಪ್ರತಿ ದೂರು ದಾಖಲಾಗಿದೆ.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ
ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 15, 2020 | 7:43 AM

Share

ಹಾವೇರಿ: ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವಿದೆ.

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಜೈಲಿನಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡ್ತಿದ್ದೀಯಾ ಎಂದು ಮುಖ, ಮೂಗಿಗೆ ಗುದ್ದಿದ್ದಾರೆ. ವಿಚಾರಣಾಧೀನ ಕೈದಿ ವಿನಾಯಕನನ್ನು ಕರೆಸಿಕೊಂಡು ಬೆದರಿಕೆ ಹಾಕಿದ್ದು, ಈತನನ್ನು ಕೊಲೆ ಮಾಡು, ಬಂದಿದ್ದು ನೋಡಿಕೊಳ್ತೇನೆಂದು ಧಮ್ಕಿ ಹಾಕಿದ್ದಾರೆ ಎಂದು ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾರೆ.

ಹಾವೇರಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಜೈಲು ಅಧೀಕ್ಷಕ ಭಜಂತ್ರಿ, ವಿನಾಯಕನ ವಿರುದ್ಧ ದೂರು ದಾಖಲಾಗಿದೆ. ಹಾಗೂ ಟಿ.ಬಿ.ಭಜಂತ್ರಿಯಿಂದ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಎಂ.ಮರಿಗೌಡ, ಹಾವೇರಿ ಜೈಲು ವೀಕ್ಷಕ ಪುಂಡಲೀಕ ಪವಾರನ ವಿರುದ್ಧ ಪ್ರತಿ ದೂರು ದಾಖಲಾಗಿದೆ. ಜೈಲು ಸಿಬ್ಬಂದಿ ಪುಂಡಲೀಕ, ನೇಮಿಸಿದ ಸ್ಥಳ ಬಿಟ್ಟು ಬೇರೆಡೆ ಕೈದಿಗಳಿಗೆ ತಯಾರಿಸಿದ್ದ ಊಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಜೈಲು ಸಿಬ್ಬಂದಿ ಪುಂಡಲೀಕ ವಿರುದ್ಧ ಜೈಲರ್​ ಭಜಂತ್ರಿ ಆರೋಪಿಸಿದ್ದಾರೆ.

ಕರ್ತವ್ಯದ ವೇಳೆ ತಮ್ಮ ಮೇಲೆಯೇ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪುಂಡಲೀಕ ಪವಾರಗೆ ಎಂ.ಮರಿಗೌಡ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಹಾವೇರಿ ಸೆಂಟ್ರಲ್ ಜೈಲು ಅಧೀಕ್ಷಕ ಭಜಂತ್ರಿಯಿಂದ ಪ್ರತಿ ದೂರು ದಾಖಲಾಗಿದೆ. ಈ ರೀತಿ ವೀಕ್ಷಕ ಪುಂಡಲೀಕ ಪವಾರ ಮತ್ತು ಜೈಲು ಅಧೀಕ್ಷಕ ಭಜಂತ್ರಿ ನಡುವೆ ದೂರು-ಪ್ರತಿ ದೂರಿನ ಸಮರ ಶುರುವಾಗಿದೆ.

ಸಾಮಾನ್ಯ ಜನರು ವಿಮಾನ ಹತ್ತಬೇಕೆಂಬ ಕನಸಿಗಾಗಿ ಶ್ರಮಿಸಿದ್ದ ಏರೊಸ್ಪೇಸ್ ವಿಜ್ಞಾನಿ ರೊದ್ದಂ ನರಸಿಂಹ ನಿಧನ

Published On - 7:42 am, Tue, 15 December 20

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ