AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾನೆ. ಇಬ್ಬರ ನಡುವೆ ದೂರು ಪ್ರತಿ ದೂರು ದಾಖಲಾಗಿದೆ.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ
ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ
ಆಯೇಷಾ ಬಾನು
|

Updated on:Dec 15, 2020 | 7:43 AM

Share

ಹಾವೇರಿ: ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವಿದೆ.

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಜೈಲಿನಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡ್ತಿದ್ದೀಯಾ ಎಂದು ಮುಖ, ಮೂಗಿಗೆ ಗುದ್ದಿದ್ದಾರೆ. ವಿಚಾರಣಾಧೀನ ಕೈದಿ ವಿನಾಯಕನನ್ನು ಕರೆಸಿಕೊಂಡು ಬೆದರಿಕೆ ಹಾಕಿದ್ದು, ಈತನನ್ನು ಕೊಲೆ ಮಾಡು, ಬಂದಿದ್ದು ನೋಡಿಕೊಳ್ತೇನೆಂದು ಧಮ್ಕಿ ಹಾಕಿದ್ದಾರೆ ಎಂದು ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾರೆ.

ಹಾವೇರಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಜೈಲು ಅಧೀಕ್ಷಕ ಭಜಂತ್ರಿ, ವಿನಾಯಕನ ವಿರುದ್ಧ ದೂರು ದಾಖಲಾಗಿದೆ. ಹಾಗೂ ಟಿ.ಬಿ.ಭಜಂತ್ರಿಯಿಂದ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಎಂ.ಮರಿಗೌಡ, ಹಾವೇರಿ ಜೈಲು ವೀಕ್ಷಕ ಪುಂಡಲೀಕ ಪವಾರನ ವಿರುದ್ಧ ಪ್ರತಿ ದೂರು ದಾಖಲಾಗಿದೆ. ಜೈಲು ಸಿಬ್ಬಂದಿ ಪುಂಡಲೀಕ, ನೇಮಿಸಿದ ಸ್ಥಳ ಬಿಟ್ಟು ಬೇರೆಡೆ ಕೈದಿಗಳಿಗೆ ತಯಾರಿಸಿದ್ದ ಊಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಜೈಲು ಸಿಬ್ಬಂದಿ ಪುಂಡಲೀಕ ವಿರುದ್ಧ ಜೈಲರ್​ ಭಜಂತ್ರಿ ಆರೋಪಿಸಿದ್ದಾರೆ.

ಕರ್ತವ್ಯದ ವೇಳೆ ತಮ್ಮ ಮೇಲೆಯೇ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪುಂಡಲೀಕ ಪವಾರಗೆ ಎಂ.ಮರಿಗೌಡ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಹಾವೇರಿ ಸೆಂಟ್ರಲ್ ಜೈಲು ಅಧೀಕ್ಷಕ ಭಜಂತ್ರಿಯಿಂದ ಪ್ರತಿ ದೂರು ದಾಖಲಾಗಿದೆ. ಈ ರೀತಿ ವೀಕ್ಷಕ ಪುಂಡಲೀಕ ಪವಾರ ಮತ್ತು ಜೈಲು ಅಧೀಕ್ಷಕ ಭಜಂತ್ರಿ ನಡುವೆ ದೂರು-ಪ್ರತಿ ದೂರಿನ ಸಮರ ಶುರುವಾಗಿದೆ.

ಸಾಮಾನ್ಯ ಜನರು ವಿಮಾನ ಹತ್ತಬೇಕೆಂಬ ಕನಸಿಗಾಗಿ ಶ್ರಮಿಸಿದ್ದ ಏರೊಸ್ಪೇಸ್ ವಿಜ್ಞಾನಿ ರೊದ್ದಂ ನರಸಿಂಹ ನಿಧನ

Published On - 7:42 am, Tue, 15 December 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ