AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾನೆ. ಇಬ್ಬರ ನಡುವೆ ದೂರು ಪ್ರತಿ ದೂರು ದಾಖಲಾಗಿದೆ.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ
ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ
ಆಯೇಷಾ ಬಾನು
|

Updated on:Dec 15, 2020 | 7:43 AM

Share

ಹಾವೇರಿ: ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವಿದೆ.

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಜೈಲಿನಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡ್ತಿದ್ದೀಯಾ ಎಂದು ಮುಖ, ಮೂಗಿಗೆ ಗುದ್ದಿದ್ದಾರೆ. ವಿಚಾರಣಾಧೀನ ಕೈದಿ ವಿನಾಯಕನನ್ನು ಕರೆಸಿಕೊಂಡು ಬೆದರಿಕೆ ಹಾಕಿದ್ದು, ಈತನನ್ನು ಕೊಲೆ ಮಾಡು, ಬಂದಿದ್ದು ನೋಡಿಕೊಳ್ತೇನೆಂದು ಧಮ್ಕಿ ಹಾಕಿದ್ದಾರೆ ಎಂದು ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾರೆ.

ಹಾವೇರಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಜೈಲು ಅಧೀಕ್ಷಕ ಭಜಂತ್ರಿ, ವಿನಾಯಕನ ವಿರುದ್ಧ ದೂರು ದಾಖಲಾಗಿದೆ. ಹಾಗೂ ಟಿ.ಬಿ.ಭಜಂತ್ರಿಯಿಂದ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಎಂ.ಮರಿಗೌಡ, ಹಾವೇರಿ ಜೈಲು ವೀಕ್ಷಕ ಪುಂಡಲೀಕ ಪವಾರನ ವಿರುದ್ಧ ಪ್ರತಿ ದೂರು ದಾಖಲಾಗಿದೆ. ಜೈಲು ಸಿಬ್ಬಂದಿ ಪುಂಡಲೀಕ, ನೇಮಿಸಿದ ಸ್ಥಳ ಬಿಟ್ಟು ಬೇರೆಡೆ ಕೈದಿಗಳಿಗೆ ತಯಾರಿಸಿದ್ದ ಊಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಜೈಲು ಸಿಬ್ಬಂದಿ ಪುಂಡಲೀಕ ವಿರುದ್ಧ ಜೈಲರ್​ ಭಜಂತ್ರಿ ಆರೋಪಿಸಿದ್ದಾರೆ.

ಕರ್ತವ್ಯದ ವೇಳೆ ತಮ್ಮ ಮೇಲೆಯೇ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪುಂಡಲೀಕ ಪವಾರಗೆ ಎಂ.ಮರಿಗೌಡ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಹಾವೇರಿ ಸೆಂಟ್ರಲ್ ಜೈಲು ಅಧೀಕ್ಷಕ ಭಜಂತ್ರಿಯಿಂದ ಪ್ರತಿ ದೂರು ದಾಖಲಾಗಿದೆ. ಈ ರೀತಿ ವೀಕ್ಷಕ ಪುಂಡಲೀಕ ಪವಾರ ಮತ್ತು ಜೈಲು ಅಧೀಕ್ಷಕ ಭಜಂತ್ರಿ ನಡುವೆ ದೂರು-ಪ್ರತಿ ದೂರಿನ ಸಮರ ಶುರುವಾಗಿದೆ.

ಸಾಮಾನ್ಯ ಜನರು ವಿಮಾನ ಹತ್ತಬೇಕೆಂಬ ಕನಸಿಗಾಗಿ ಶ್ರಮಿಸಿದ್ದ ಏರೊಸ್ಪೇಸ್ ವಿಜ್ಞಾನಿ ರೊದ್ದಂ ನರಸಿಂಹ ನಿಧನ

Published On - 7:42 am, Tue, 15 December 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?