AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾನೆ. ಇಬ್ಬರ ನಡುವೆ ದೂರು ಪ್ರತಿ ದೂರು ದಾಖಲಾಗಿದೆ.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ
ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 15, 2020 | 7:43 AM

Share

ಹಾವೇರಿ: ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವಿದೆ.

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಜೈಲಿನಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡ್ತಿದ್ದೀಯಾ ಎಂದು ಮುಖ, ಮೂಗಿಗೆ ಗುದ್ದಿದ್ದಾರೆ. ವಿಚಾರಣಾಧೀನ ಕೈದಿ ವಿನಾಯಕನನ್ನು ಕರೆಸಿಕೊಂಡು ಬೆದರಿಕೆ ಹಾಕಿದ್ದು, ಈತನನ್ನು ಕೊಲೆ ಮಾಡು, ಬಂದಿದ್ದು ನೋಡಿಕೊಳ್ತೇನೆಂದು ಧಮ್ಕಿ ಹಾಕಿದ್ದಾರೆ ಎಂದು ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾರೆ.

ಹಾವೇರಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಜೈಲು ಅಧೀಕ್ಷಕ ಭಜಂತ್ರಿ, ವಿನಾಯಕನ ವಿರುದ್ಧ ದೂರು ದಾಖಲಾಗಿದೆ. ಹಾಗೂ ಟಿ.ಬಿ.ಭಜಂತ್ರಿಯಿಂದ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಎಂ.ಮರಿಗೌಡ, ಹಾವೇರಿ ಜೈಲು ವೀಕ್ಷಕ ಪುಂಡಲೀಕ ಪವಾರನ ವಿರುದ್ಧ ಪ್ರತಿ ದೂರು ದಾಖಲಾಗಿದೆ. ಜೈಲು ಸಿಬ್ಬಂದಿ ಪುಂಡಲೀಕ, ನೇಮಿಸಿದ ಸ್ಥಳ ಬಿಟ್ಟು ಬೇರೆಡೆ ಕೈದಿಗಳಿಗೆ ತಯಾರಿಸಿದ್ದ ಊಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಜೈಲು ಸಿಬ್ಬಂದಿ ಪುಂಡಲೀಕ ವಿರುದ್ಧ ಜೈಲರ್​ ಭಜಂತ್ರಿ ಆರೋಪಿಸಿದ್ದಾರೆ.

ಕರ್ತವ್ಯದ ವೇಳೆ ತಮ್ಮ ಮೇಲೆಯೇ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪುಂಡಲೀಕ ಪವಾರಗೆ ಎಂ.ಮರಿಗೌಡ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಹಾವೇರಿ ಸೆಂಟ್ರಲ್ ಜೈಲು ಅಧೀಕ್ಷಕ ಭಜಂತ್ರಿಯಿಂದ ಪ್ರತಿ ದೂರು ದಾಖಲಾಗಿದೆ. ಈ ರೀತಿ ವೀಕ್ಷಕ ಪುಂಡಲೀಕ ಪವಾರ ಮತ್ತು ಜೈಲು ಅಧೀಕ್ಷಕ ಭಜಂತ್ರಿ ನಡುವೆ ದೂರು-ಪ್ರತಿ ದೂರಿನ ಸಮರ ಶುರುವಾಗಿದೆ.

ಸಾಮಾನ್ಯ ಜನರು ವಿಮಾನ ಹತ್ತಬೇಕೆಂಬ ಕನಸಿಗಾಗಿ ಶ್ರಮಿಸಿದ್ದ ಏರೊಸ್ಪೇಸ್ ವಿಜ್ಞಾನಿ ರೊದ್ದಂ ನರಸಿಂಹ ನಿಧನ

Published On - 7:42 am, Tue, 15 December 20

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು