AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರ ನಿಮ್ಮ ಭವಿಷ್ಯದ ಮಾರ್ಗ ಇಂದು ನಿರ್ಧಾರವಾಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ಪಂಚಮೀ ತಿಥಿ, ಶುಕ್ರವಾರದಂದು ಮೂಲದ ಸಂಪತ್ತಿನ ಕಡೆ ಗಮನ, ಉದ್ಯಮದ ವಿಸ್ತಾರ, ಮಕ್ಕಳಿಗೆ ಅನುಕೂಲತೆಯ ನಿರ್ಮಾಣ ಇವು ಈ ದಿನದ‌ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಈ ರಾಶಿಯವರ ನಿಮ್ಮ ಭವಿಷ್ಯದ ಮಾರ್ಗ ಇಂದು ನಿರ್ಧಾರವಾಗಲಿದೆ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 18, 2025 | 1:44 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ :ಶುಕ್ರ, ತಿಥಿ : ಪಂಚಮೀ, ನಿತ್ಯನಕ್ಷತ್ರ: ಮೂಲಾ, ಯೋಗ : ಪರಿಘ, ಕರಣ : ತೈತಿಲ, ಸೂರ್ಯೋದಯ – 06:18 am, ಸೂರ್ಯಾಸ್ತ 06: 45 pm, ಇಂದಿನ ಶುಭಾಶುಭಕಾಲ : ರಾಹು ಕಾಲ 10:59 – 12:32, ಯಮಘಂಡ ಕಾಲ 15:39 – 17:12, ಗುಳಿಕ ಕಾಲ 07:52-09:25

ತುಲಾ ರಾಶಿ: ಕಳೆದುಕೊಂಡ ವಸ್ತು ಅನ್ಯರ ಮೂಲಕ ಪ್ರಾಪ್ತವಾಗಲಿದೆ. ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಕಸಿದುಕೊಳ್ಳಬಹುದು. ವಾಹನದ ಖರೀಗೆ ಸಾಲ ಮಾಡಬೇಕಾಗುವುದು. ಇತ್ತೀಚಿನ ನಿರಾಶೆಯಿಂದ ಹೊರಬರಲು ನೀವು ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು. ಇಂದು ಸಂಗಾತಿಯೊಂದಿಗೆ ಹಣಕಾಸಿನ ವಿಚಾರದಲ್ಲಿ ಚರ್ಚೆ ಆಗಬಹುದಾದರೂ, ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.‌ ಮೇಲಧಿಕಾರಿಗಳು ಕೆಲಸದ ಮಾಹಿತಿಯನ್ನು ಕೇಳುವರು. ಶಾಂತ ಸ್ವಭಾವದಿಂದ ವಾಗ್ವಾದ ನಿಲ್ಲುತ್ತದೆ. ಕುಟುಂಬದ ಕಲ್ಯಾಣಕ್ಕಾಗಿ ತೆಗೆದುಕೊಳ್ಳುವ ಕ್ರಮಗಳು ಫಲಕಾರಿಯಾಗುತ್ತವೆ. ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಬಹುದು. ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ನಿಮ್ಮ ಸ್ವಭಾವಕ್ಕೆ ಯೋಗ್ಯವಾದ ವ್ಯಕ್ತಿಯ ಗೆಳೆತನವಾಗಲಿದೆ.

ವೃಶ್ಚಿಕ ರಾಶಿ: ಇಂದು ಸಾಮೂಹಿಕ ಕಾರ್ಯದಿಂದ ಸಂತೋಷವೂ ಹೊಸತನವೂ ಸಿಗಲಿದೆ. ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ. ಸ್ನೇಹಿತರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ, ಅವರು ನಿಮಗೆ ಸಹಾಯ ಮಾಡುವ ಇಚ್ಛೆಯೇ ಇರುತ್ತದೆ. ಹಣದ ನಷ್ಟವನ್ನು ತಪ್ಪಿಸಲು ಖರ್ಚನ್ನು ಮಿತಿಗೊಳಿಸಿ. ಜೀವನದಲ್ಲಿ ಹೊಸತನ್ನು ಸ್ವೀಕರಿಸುವ ಮನಸ್ಥಿತಿಯಿರಲಿ. ಹಳೆಯ ಮನೆಯನ್ನು ದುರಸ್ತಿ ಮಾಡುವ ಚಿಂತನೆಯಿರುವುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಆದರ್ಶಗಳಿಂದಲೇ ಸ್ಪೂರ್ತಿ ಪಡೆಯಿರಿ. ಇಂದಿನ ಪ್ರಯಾಣ ದುರಂತವಾಗಬಹುದು. ಸಹೋದ್ಯೋಗಿಗಳ ಜೊತೆ ಸೌಹಾರ್ದಯುತವಾಗಿ ವರ್ತಿಸಿ. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ. ನೀವು ಹೊಸತನ್ನು ಒಮ್ಮನಸ್ಸಿನಿಂದ ಒಪ್ಪಿಕೊಳ್ಳಲಾರಿರಿ. ಸಹೋದರ ಸಹೋದರಿಯರ ಜೊತೆ ಆಸ್ತಿಯ ವಿಷಯಕ್ಕೆ ಸಂಬಂಧಿಸಿದಂತೆ ಜಗಳಗಳು ಆಗಬಹುದು. ಹೊಸ ಉದ್ಯೋಗವನ್ನು ಹುಡುಕುವವರಿಗೆ ಹೆಚ್ಚು ಗೊಂದಲವಾಗಬಹುದು. ಇಂದು ಒಂದು ಮಿತಿಯಲ್ಲಿ ನಿಮ್ಮ ಮಾತಿರಲಿ. ತಾಯಿಯ ವಿಚಾರದಲ್ಲಿ ಕೋಪವನ್ನು ಮಾಡುವಿರಿ.

ಧನು ರಾಶಿ: ಎಲ್ಲರಿಗೂ ಸಹಾಯ ಮಾಡುವ ನಿಮ್ಮ ನಿರಂತರ ಇಚ್ಛೆಯು ನಿಮಗೆ ದಣಿವನ್ನು ತರಬಹುದು. ದುರಭ್ಯಾಸದ ಜನರ ಸಹವಾಸ ಇರುವುದು. ಅನಾವಶ್ಯಕ ಚರ್ಚೆಗಳಿಂದ ದೂರವಿರಿ, ಶಾಂತಿಯುತವಾಗಿ ದಿನಚರಿ ನಡೆಸಿ. ಹೊಸ ಆರ್ಥಿಕ ಒಪ್ಪಂದಗಳಿಂದ ಲಾಭ ಸಾಧ್ಯ. ಸಣ್ಣ ವಿಚಾರಗಳಿಂದ ಸಂಗಾತಿಯೊಂದಿಗೆ ಮನಸ್ತಾಪ ಸಂಭವಿಸಬಹುದು. ಎಂದೂ ನಂಬದವರ ಮಾತನ್ನು ನೀವು ಇಂದು ನಂಬುವಿರಿ. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು. ಧೈರ್ಯದಿಂದ ತೆಗೆದುಕೊಳ್ಳುವ ನಿರ್ಧಾರಗಳು ಫಲಕಾರಿಯಾಗುವ ಸಾಧ್ಯತೆ ಇದೆ. ಸಂಗಾತಿ ತಮ್ಮ ಕುಟುಂಬಕ್ಕಿಂತ ನಿಮ್ಮವರಿಗೆ ಕಡಿಮೆ ಮಹತ್ವ ನೀಡುತ್ತಿದ್ದಾರೆ ಎನಿಸಬಹುದು. ಆದರೆ ಅದು ನಿಮ್ಮ ತಪ್ಪು ಕಲ್ಪನೆಯಾಗಿದೆ. ಅಪರಿಚಿತರ ಮಾತುಗಳಿಂದ ದೂರವಿರಬೇಕು. ಕೆಲವು ಕೆಲಸಗಳಿಗಾಗಿ ನೀವು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ಏನೂ ಮಾಡಿದರೂ ಆಗುತ್ತದೆ ಎಂದು ಏನನ್ನಾದರೂ ಮಾಡಲು ಹೋಗುವುದು ಬೇಡ. ಮಿಂಚಿ ಹೋದ ಕಾರ್ಯವನ್ನು ಎಷ್ಟೆಂದು ಚಿಂತಿಸುವಿರಿ.‌

ಮಕರ ರಾಶಿ: ನೀವು ನಿರುದ್ಯೋಗದಿಂದ ಅಪಮಾನವನ್ನು ಎದುರಿಸಬೇಕಾಗುವುದು. ಅನಗತ್ಯ ವಾದಗಳಿಗೆ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುವದರ ಜೊತೆ ಹೆಸರೂ ಹಾಳಾಗುವುದು. ಹೆಚ್ಚುವರಿ ಆದಾಯವನ್ನು ಗಳಿಸಲು ನಿಮ್ಮ ಕ್ರೀಯಾಶೀಲತೆ ಅಗತ್ಯವಾಗಿ ಬೇಕು. ಹಣಕಾಸಿನ ಚಟುವಟಿಕೆಗಳಲ್ಲಿ ಸುಧಾರಣೆಯಿಂದ ಬಾಕಿ ಬಿಲ್‌ಗಳನ್ನು ತೀರಿಸಲು ಅನುಕೂಲ. ಸಂಬಂಧಿಕರ ಆಗಮನದಿಂದ ಸಂಜೆಯು ವಿಶೇಷವಾಗಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಇಂದು ಹಳೆಯ ತಪ್ಪುಗಳನ್ನು ಮರೆತು ಸಂತೋಷವಾಗಿರಿ. ಹೊಸ ತಂತ್ರಜ್ಞಾನ ಬಳಸಿಕೊಂಡು ಬದಲಾಗುವ ಕಾಲಕ್ಕೆ ತಕ್ಕಂತೆ ನಡೆಯಿರಿ. ನೀವು ಹೊಸ ಕೆಲಸಗಳಲ್ಲಿ ಹೂಡಿಕೆ ಮಾಡುವುದು ಉತ್ತಮ. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಕಚ್ಚಬಹುದು. ತಾಯಿಗೆ ಯಾವುದಾದರೂ ಹಳೆಯ ಕಾಯಿಲೆ ಮರುಕಳಿಸಬಹುದು. ಬಹಳ ದಿನಗಳ ಅನಂತರ ಹಳೆಯ ಗೆಳೆಯರನ್ನು ಭೇಟಿಯಾಗುವ ಸಂತಸ ಇರಲಿದೆ. ದೈವಭಕ್ತಿಯು ನಿಮ್ಮನ್ನು ಬಲ ಮಾಡುವುದು.

ಕುಂಭ ರಾಶಿ: ಸ್ನೇಹಿತರ ಜೊತೆ ಸೇರಿ ವಾಗ್ವಾದ ಮಾಡುವಿರಿ.‌ ಗೆಲುವು ಸಿಗದಿದ್ದರೂ ಪ್ರಯತ್ನ ಬಿಡಲಾರಿರಿ. ಇಂದು ಉದಾರತೆಯು ಖರ್ಚಿನಿಂದ ಆರಂಭವಾಗುವುದು. ಮನೆಗೆ ಅತಿಥಿಗಳ ಆಗಮನವು ಹೊಸ ಮೆರುಗನ್ನು ಕೊಡುವುದು. ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದಿರುವುದು ಉತ್ತಮ; ತಪ್ಪಾದ ನಿರ್ಧಾರಗಳು ನಷ್ಟಕ್ಕೆ ಕಾರಣವಾಗುತ್ತದೆ. ಕುಟುಂಬದಲ್ಲಿ ಹಿರಿಯರ ಸಲಹೆಗಳನ್ನು ಗೌರವದಿಂದ ಸ್ವೀಕರಿಸಿ. ಸ್ನೇಹಿತರೊಂದಿಗೆ ಚರ್ಚೆಗಳಲ್ಲಿ ಧೈರ್ಯವಂತಿಕೆಯಿಂದ ನಿರ್ವಹಿಸಿ. ಉದ್ಯೋಗದಲ್ಲಿ ನಿಮಗೆ ನೀಡಲ್ಪಡುವೆ ಹೊಸ ಜವಾಬ್ದಾರಿ ನಿಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶವಾಗಲಿದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ಕೆಲವು ಅಪವಾದವನ್ನು ಕೇಳಬೇಕಾದೀತು. ನೀವು ಕೆಲವು ಹಳೆಯ ತಪ್ಪುಗಳಿಂದ ಕಲಿಯಬೇಕು. ಇಂದು ಹೆಚ್ಚಿನ ಸಮಯವನ್ನು ತಂದೆ, ತಾಯಿಯರ ಸೇವೆಯಲ್ಲಿ ಹೆಚ್ಚಿನ ಸಮಯ ಕಳೆಯುವಿರಿ. ಬಹಳ ದಿನಗಳಿಂದ ಒಂದೇ ತರದ ಕೆಲಸಗಳಿಂದ ಬೇಸರವಾಗುವುದು. ಇಂದು ನಡೆದ ಅಹಿತಕರ‌ ಘಟನೆಯನ್ನು ಕೆಟ್ಟ ಗಳಿಗೆ ಎಂದು ಮರೆತುಬಿಡುವಿರಿ.

ಮೀನ ರಾಶಿ: ನಿಮ್ಮ ಭವಿಷ್ಯದ ಮಾರ್ಗ ನಿರ್ಧಾರವಾಗಲಿದೆ. ಇಂದು ಸಂತೋಷದ ಕ್ಷಣಗಳನ್ನು ನೀವೆ ಸೃಷ್ಟಿಸಿಕೊಳ್ಳುವಿರಿ. ಮನೋರಂಜನೆಗೆ ಹಣವು ಖರ್ಚಾಗುವುದು. ನಿಮ್ಮ ವೈಭವವನ್ನು ಕಂಡು ಬೇರೆಯವರಿಂದ ಮೆಚ್ಚುಗೆ ಸಿಗುವುದು. ಪ್ರೀತಿಯ ಸಂಗಾತಿಯ ಜೊತೆ ವಿಶೇಷ ಸಮಯ ಕಳೆಯಬಹುದು. ನಿಮ್ಮ ಕೆಲಸದಲ್ಲಿ ಉತ್ತಮ ಸಾಧನೆ ಮಾಡಲು ಸಮಯ ಸೂಕ್ತ. ನಿರೀಕ್ಷಿಸದ ಅತಿಥಿಗಳ ಆಗಮನದಿಂದ ಕೆಲವೊಂದು ಕಾರ್ಯಗಳಲ್ಲಿ ವ್ಯತ್ಯಯ ಉಂಟಾಗಬಹುದು. ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಕಾನೂನಿನ‌ ಕ್ರಮದಲ್ಲಿ ಮುಂದುವರಿದರೆ, ನೀವು ಅದರಲ್ಲಿ ಯಶಸ್ವಿಯಾಗುತ್ತೀರಿ. ರಾಜಕೀಯದಲ್ಲಿ ಕೆಲಸ ಮಾಡುವವರಿಗೆ ದೊಡ್ಡ ಹುದ್ದೆಗಳು ಸಿಗುತ್ತವೆ. ಉದ್ಯಮಿಗಳ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ. ನಿಮ್ಮ ವ್ಯವಹಾರವನ್ನು ಕಾನೂನಾತ್ಮಕವಾಗಿ ನಡೆಸಿದರೆ ಉತ್ತಮ. ಆಕಸ್ಮಿಕವಾಗಿ ಬರುವ ಅಲ್ಪ ಸಂಪತ್ತೂ ಕೈಯಲ್ಲಿ ನಿಲ್ಲದು. ಕೋಪವನ್ನು ಮಾಡುವ ಸಂದರ್ಭವು ಎದರಾಗಲಿದ್ದು, ನಿಮ್ಮ ನಿಯಂತ್ರಣದಲ್ಲಿ ಇರಲಿ.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ