ಹೃದಯ ವಿದ್ರಾವಕ.. ನರಳಿ ನರಳಿ ಪ್ರಾಣಬಿಟ್ಟ ಕೊರೊನಾ ಸೋಂಕಿತ ಉದ್ಯಮಿ

ಬೆಂಗಳೂರು: ಚಿಕಿತ್ಸೆ ಸಿಗದೇ ಕೊರೊನಾ ಸೋಂಕಿತರೊಬ್ಬರು ನರಳಿ ನರಳಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಯಶವಂತಪುರದ ಒರಾಯನ್ ಮಾಲ್ ಹಿಂಭಾಗದಲ್ಲಿರುವ ಬೆಂಗಳೂರಿನ ಬ್ರಿಗೇಡ್ ಗೇಟ್​ವೇ ಅಪಾರ್ಟ್​ಮೆಂಟ್​​ನಲ್ಲಿ ನಡೆದಿದೆ. ಈ ಉದ್ಯಮಿಗೆ ಕೊರೊನಾ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ತಮ್ಮ ಫ್ಲಾಟ್​ನಲ್ಲಿ ಕ್ವಾರಂಟೈನ್ ಆಗಿದ್ದರು. ಈ ಸಮಯದಲ್ಲಿ ಕುಟುಂಬಸ್ಥರನ್ನು ಸೋಂಕಿತ ಉದ್ಯಮಿ, ಬೇರೆಡೆಗೆ ಕಳುಹಿಸಿದ್ದರು. ಹೀಗಾಗಿ ಒಂದು ವಾರದಿಂದ ಫ್ಲಾಟ್​ನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಕಳೆದ ರಾತ್ರಿ ಇವರ ಅಣ್ಣ ಊಟ ನೀಡಿ ಹೋಗಿದ್ದಾರೆ. ಆದ್ರೆ ತಡರಾತ್ರಿ ಉಸಿರಾಟದ ಸಮಸ್ಯೆಯಾಗಿದ್ದರಿಂದ ಕೊಲಂಬಿಯಾ […]

ಹೃದಯ ವಿದ್ರಾವಕ.. ನರಳಿ ನರಳಿ ಪ್ರಾಣಬಿಟ್ಟ ಕೊರೊನಾ ಸೋಂಕಿತ ಉದ್ಯಮಿ
ಸಾಧು ಶ್ರೀನಾಥ್​ Edited By:

Updated on: Jul 10, 2020 | 5:25 PM

ಬೆಂಗಳೂರು: ಚಿಕಿತ್ಸೆ ಸಿಗದೇ ಕೊರೊನಾ ಸೋಂಕಿತರೊಬ್ಬರು ನರಳಿ ನರಳಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಯಶವಂತಪುರದ ಒರಾಯನ್ ಮಾಲ್ ಹಿಂಭಾಗದಲ್ಲಿರುವ ಬೆಂಗಳೂರಿನ ಬ್ರಿಗೇಡ್ ಗೇಟ್​ವೇ ಅಪಾರ್ಟ್​ಮೆಂಟ್​​ನಲ್ಲಿ ನಡೆದಿದೆ.

ಈ ಉದ್ಯಮಿಗೆ ಕೊರೊನಾ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ತಮ್ಮ ಫ್ಲಾಟ್​ನಲ್ಲಿ ಕ್ವಾರಂಟೈನ್ ಆಗಿದ್ದರು. ಈ ಸಮಯದಲ್ಲಿ ಕುಟುಂಬಸ್ಥರನ್ನು ಸೋಂಕಿತ ಉದ್ಯಮಿ, ಬೇರೆಡೆಗೆ ಕಳುಹಿಸಿದ್ದರು. ಹೀಗಾಗಿ ಒಂದು ವಾರದಿಂದ ಫ್ಲಾಟ್​ನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ.

ಕಳೆದ ರಾತ್ರಿ ಇವರ ಅಣ್ಣ ಊಟ ನೀಡಿ ಹೋಗಿದ್ದಾರೆ. ಆದ್ರೆ ತಡರಾತ್ರಿ ಉಸಿರಾಟದ ಸಮಸ್ಯೆಯಾಗಿದ್ದರಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ತೆರಳಿದ್ದರು. ಆದ್ರೆ ಬೆಡ್ ಖಾಲಿಯಿಲ್ಲವೆಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆ ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿತ್ತು. ಅಷ್ಟೇ ಅಲ್ಲ ನಿಮಗೇನು ಆಗಲ್ಲವೆಂದು ವೈದ್ಯರು ಸೋಂಕಿತನಿಗೆ ಹೇಳಿ ಕಳುಹಿಸಿದ್ದರು ಎನ್ನಲಾಗಿದೆ.

ಆದ್ರೆ ಸೋಂಕಿತ ಫ್ಲಾಟ್​ಗೆ ಹಿಂದಿರುಗಿದ ನಂತರ ಮತ್ತಷ್ಟು ಸಮಸ್ಯೆಯಾಗಿದೆ. ನಂತರ ತೀವ್ರ ಉಸಿರಾಟದ ಸಮಸ್ಯೆಯಿಂದ ರಾತ್ರಿ ಸೋಂಕಿತ ಉದ್ಯಮಿ ಮೃತಪಟ್ಟಿದ್ದಾರೆ. ಮಲಗಿದ ಕಾಟ್​ನಿಂದ ಕೆಳಗೆ ಬಿದ್ದು ತಲೆಗೆ ಏಟು ಮಾಡಿಕೊಂಡಿದ್ದರು ಎಂದೂ ತಿಳಿದು ಬಂದಿದೆ.

Published On - 1:57 pm, Fri, 10 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us