AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಲ್ಲಿ ಶೇ. 80ರಷ್ಟು ಮಂದಿ ಸಾವಿಗೆ ಇದೇ ಕಾರಣ!

ಬೆಂಗಳೂರು: ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರಲ್ಲಿ ಉಸಿರಾಟದ ಸಮಸ್ಯೆಯಿಂದಲೇ ಹೆಚ್ಚು ಸಾವನ್ನಪ್ಪಿದ್ದಾರೆ. ಶೇಕಡಾ 80 ರಷ್ಟು ಸೋಂಕಿತರು ಸತ್ತಿರೋದು ಉಸಿರಾಟದ ಸಮಸ್ಯೆಯಿಂದ ಎಂದು ವೈದ್ಯರು ಉಸಿರಾಟದ ಸಮಸ್ಯೆ ಇರೋರಿಗೆ ಎಚ್ಚರಿಕೆ ನೀಡಿದ್ದಾರೆ. ಹೌದು ಕೊರೊನಾ ರೋಗಿಗಳಿಗೆ ಹೆಚ್ಚಾಗಿ ಬಾಧಿಸುತ್ತಿರೋದು ಉಸಿರಾಟದ ಸಮಸ್ಯೆ. ರಾಜ್ಯದಲ್ಲಿ ಸಾಯುತ್ತಿರೋ ಬಹುತೇಕ ಜನರು ಉಸಿರಾಟದ ಸಮಸ್ಯೆಗೊಳಗಾದವರೇ ಹೆಚ್ಚು. ಪ್ರತೀ ದಿನ ಸಾವನ್ನಪ್ಪುತ್ತಿರೋ ರೋಗಿಗಳ ಪೈಕಿ ಶೇ.80 ರಷ್ಟು ಉಸಿರಾಟದ ಸಮಸ್ಯೆಯಿಂದಲೇ ಜೀವ ಬಿಡ್ತಿದ್ದಾರೆ. ಹೀಗಾಗಿ ಆಸ್ತಮಾ, ವೀಸಿಂಗ್ ಸಮಸ್ಯೆ ಇರೋ ಜನರು ಕೊರೊನಾದಿಂದ ಎಚ್ಚರದಿಂದ […]

ಕೊರೊನಾ ಸೋಂಕಿತರಲ್ಲಿ ಶೇ. 80ರಷ್ಟು ಮಂದಿ ಸಾವಿಗೆ ಇದೇ ಕಾರಣ!
Guru
| Updated By: ಸಾಧು ಶ್ರೀನಾಥ್​|

Updated on: Aug 11, 2020 | 10:03 AM

Share

ಬೆಂಗಳೂರು: ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರಲ್ಲಿ ಉಸಿರಾಟದ ಸಮಸ್ಯೆಯಿಂದಲೇ ಹೆಚ್ಚು ಸಾವನ್ನಪ್ಪಿದ್ದಾರೆ. ಶೇಕಡಾ 80 ರಷ್ಟು ಸೋಂಕಿತರು ಸತ್ತಿರೋದು ಉಸಿರಾಟದ ಸಮಸ್ಯೆಯಿಂದ ಎಂದು ವೈದ್ಯರು ಉಸಿರಾಟದ ಸಮಸ್ಯೆ ಇರೋರಿಗೆ ಎಚ್ಚರಿಕೆ ನೀಡಿದ್ದಾರೆ.

ಹೌದು ಕೊರೊನಾ ರೋಗಿಗಳಿಗೆ ಹೆಚ್ಚಾಗಿ ಬಾಧಿಸುತ್ತಿರೋದು ಉಸಿರಾಟದ ಸಮಸ್ಯೆ. ರಾಜ್ಯದಲ್ಲಿ ಸಾಯುತ್ತಿರೋ ಬಹುತೇಕ ಜನರು ಉಸಿರಾಟದ ಸಮಸ್ಯೆಗೊಳಗಾದವರೇ ಹೆಚ್ಚು. ಪ್ರತೀ ದಿನ ಸಾವನ್ನಪ್ಪುತ್ತಿರೋ ರೋಗಿಗಳ ಪೈಕಿ ಶೇ.80 ರಷ್ಟು ಉಸಿರಾಟದ ಸಮಸ್ಯೆಯಿಂದಲೇ ಜೀವ ಬಿಡ್ತಿದ್ದಾರೆ.

ಹೀಗಾಗಿ ಆಸ್ತಮಾ, ವೀಸಿಂಗ್ ಸಮಸ್ಯೆ ಇರೋ ಜನರು ಕೊರೊನಾದಿಂದ ಎಚ್ಚರದಿಂದ ಇರಬೇಕು. ಮಳೆಗಾಲ ಶುರುವಾಗಿದೆ, ವಾತವರಣದಲ್ಲಿ ಶೀತಾಂಶ ಹೆಚ್ಚಾಗಿದೆ. ಇದರಿಂದ ಆಸ್ತಮಾ ರೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳಿದೆ. ಇಂಥಹ ರೋಗಿಗಳಿಗೆ ಕೊರೊನಾ ಕೂಡ ಅಟ್ಯಾಕ್ ಮಾಡಿ ಜೀವಕ್ಕೆ ಕುತ್ತು ತರುತ್ತಿದೆ. ಹೀಗಾಗಿ ಆಸ್ತಮಾ ಇರೋರು ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ಬೇರೆ ಬೇರೆ ಖಾಯಿಲೆಗಳಿಗಿಂತ, ಉಸಿರಾಟದ ತೊಂದರೆ ಇಂದ ಬಲಿಯಾಗ್ತಿರೋರೆ ಹೆಚ್ಚು. ಉಸಿರಾಟದ ಸಮಸ್ಯೆ ಇರುವವರು ಎಚ್ಚೆತ್ತುಕೊಳ್ಳಲೇಬೇಕು. ಕಳೆದ ಹತ್ತು ದಿನಗಳಲ್ಲಿ ಬರೋಬ್ಬರಿ 998 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಪೈಕಿ ಸುಮಾರು 800 ಮಂದಿ ಉಸಿರಾಟದ ತೊಂದರೆಯಿಂದಲೇ ಬಲಿಯಾಗಿದ್ದಾರೆ.

ಈ ಮೊದಲೇ ಆಸ್ತಮ, ಕ್ಷಯ, ಶ್ವಾಸಕೋಶ ಸಂಬಂಧಿ ಕಾಯಿಲೆ ಇರುವವರೇ ಹೆಚ್ಚು ಬಲಿಯಾಗುತ್ತಿದ್ದಾರೆ. ಹೀಗಾಗಿ ಇಂಥವರು ಇನ್ನೂ ಮೂರ್ನಾಲ್ಕು ತಿಂಗಳು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಹಿರಿಯ ವೈದ್ಯರು ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ