AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಲ್ಲಿ ಶೇ. 80ರಷ್ಟು ಮಂದಿ ಸಾವಿಗೆ ಇದೇ ಕಾರಣ!

ಬೆಂಗಳೂರು: ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರಲ್ಲಿ ಉಸಿರಾಟದ ಸಮಸ್ಯೆಯಿಂದಲೇ ಹೆಚ್ಚು ಸಾವನ್ನಪ್ಪಿದ್ದಾರೆ. ಶೇಕಡಾ 80 ರಷ್ಟು ಸೋಂಕಿತರು ಸತ್ತಿರೋದು ಉಸಿರಾಟದ ಸಮಸ್ಯೆಯಿಂದ ಎಂದು ವೈದ್ಯರು ಉಸಿರಾಟದ ಸಮಸ್ಯೆ ಇರೋರಿಗೆ ಎಚ್ಚರಿಕೆ ನೀಡಿದ್ದಾರೆ. ಹೌದು ಕೊರೊನಾ ರೋಗಿಗಳಿಗೆ ಹೆಚ್ಚಾಗಿ ಬಾಧಿಸುತ್ತಿರೋದು ಉಸಿರಾಟದ ಸಮಸ್ಯೆ. ರಾಜ್ಯದಲ್ಲಿ ಸಾಯುತ್ತಿರೋ ಬಹುತೇಕ ಜನರು ಉಸಿರಾಟದ ಸಮಸ್ಯೆಗೊಳಗಾದವರೇ ಹೆಚ್ಚು. ಪ್ರತೀ ದಿನ ಸಾವನ್ನಪ್ಪುತ್ತಿರೋ ರೋಗಿಗಳ ಪೈಕಿ ಶೇ.80 ರಷ್ಟು ಉಸಿರಾಟದ ಸಮಸ್ಯೆಯಿಂದಲೇ ಜೀವ ಬಿಡ್ತಿದ್ದಾರೆ. ಹೀಗಾಗಿ ಆಸ್ತಮಾ, ವೀಸಿಂಗ್ ಸಮಸ್ಯೆ ಇರೋ ಜನರು ಕೊರೊನಾದಿಂದ ಎಚ್ಚರದಿಂದ […]

ಕೊರೊನಾ ಸೋಂಕಿತರಲ್ಲಿ ಶೇ. 80ರಷ್ಟು ಮಂದಿ ಸಾವಿಗೆ ಇದೇ ಕಾರಣ!
Guru
| Edited By: |

Updated on: Aug 11, 2020 | 10:03 AM

Share

ಬೆಂಗಳೂರು: ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರಲ್ಲಿ ಉಸಿರಾಟದ ಸಮಸ್ಯೆಯಿಂದಲೇ ಹೆಚ್ಚು ಸಾವನ್ನಪ್ಪಿದ್ದಾರೆ. ಶೇಕಡಾ 80 ರಷ್ಟು ಸೋಂಕಿತರು ಸತ್ತಿರೋದು ಉಸಿರಾಟದ ಸಮಸ್ಯೆಯಿಂದ ಎಂದು ವೈದ್ಯರು ಉಸಿರಾಟದ ಸಮಸ್ಯೆ ಇರೋರಿಗೆ ಎಚ್ಚರಿಕೆ ನೀಡಿದ್ದಾರೆ.

ಹೌದು ಕೊರೊನಾ ರೋಗಿಗಳಿಗೆ ಹೆಚ್ಚಾಗಿ ಬಾಧಿಸುತ್ತಿರೋದು ಉಸಿರಾಟದ ಸಮಸ್ಯೆ. ರಾಜ್ಯದಲ್ಲಿ ಸಾಯುತ್ತಿರೋ ಬಹುತೇಕ ಜನರು ಉಸಿರಾಟದ ಸಮಸ್ಯೆಗೊಳಗಾದವರೇ ಹೆಚ್ಚು. ಪ್ರತೀ ದಿನ ಸಾವನ್ನಪ್ಪುತ್ತಿರೋ ರೋಗಿಗಳ ಪೈಕಿ ಶೇ.80 ರಷ್ಟು ಉಸಿರಾಟದ ಸಮಸ್ಯೆಯಿಂದಲೇ ಜೀವ ಬಿಡ್ತಿದ್ದಾರೆ.

ಹೀಗಾಗಿ ಆಸ್ತಮಾ, ವೀಸಿಂಗ್ ಸಮಸ್ಯೆ ಇರೋ ಜನರು ಕೊರೊನಾದಿಂದ ಎಚ್ಚರದಿಂದ ಇರಬೇಕು. ಮಳೆಗಾಲ ಶುರುವಾಗಿದೆ, ವಾತವರಣದಲ್ಲಿ ಶೀತಾಂಶ ಹೆಚ್ಚಾಗಿದೆ. ಇದರಿಂದ ಆಸ್ತಮಾ ರೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳಿದೆ. ಇಂಥಹ ರೋಗಿಗಳಿಗೆ ಕೊರೊನಾ ಕೂಡ ಅಟ್ಯಾಕ್ ಮಾಡಿ ಜೀವಕ್ಕೆ ಕುತ್ತು ತರುತ್ತಿದೆ. ಹೀಗಾಗಿ ಆಸ್ತಮಾ ಇರೋರು ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ಬೇರೆ ಬೇರೆ ಖಾಯಿಲೆಗಳಿಗಿಂತ, ಉಸಿರಾಟದ ತೊಂದರೆ ಇಂದ ಬಲಿಯಾಗ್ತಿರೋರೆ ಹೆಚ್ಚು. ಉಸಿರಾಟದ ಸಮಸ್ಯೆ ಇರುವವರು ಎಚ್ಚೆತ್ತುಕೊಳ್ಳಲೇಬೇಕು. ಕಳೆದ ಹತ್ತು ದಿನಗಳಲ್ಲಿ ಬರೋಬ್ಬರಿ 998 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಪೈಕಿ ಸುಮಾರು 800 ಮಂದಿ ಉಸಿರಾಟದ ತೊಂದರೆಯಿಂದಲೇ ಬಲಿಯಾಗಿದ್ದಾರೆ.

ಈ ಮೊದಲೇ ಆಸ್ತಮ, ಕ್ಷಯ, ಶ್ವಾಸಕೋಶ ಸಂಬಂಧಿ ಕಾಯಿಲೆ ಇರುವವರೇ ಹೆಚ್ಚು ಬಲಿಯಾಗುತ್ತಿದ್ದಾರೆ. ಹೀಗಾಗಿ ಇಂಥವರು ಇನ್ನೂ ಮೂರ್ನಾಲ್ಕು ತಿಂಗಳು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಹಿರಿಯ ವೈದ್ಯರು ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ