ATM ಒಡೆದು 27 ಲಕ್ಷ ರೂ. ದೋಚಿದ ಕಳ್ಳರು, ಎಲ್ಲಿ?

ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂ ಹೊಡೆದು 27 ಲಕ್ಷ ರೂ ಹಣ ದೋಚಿರುವ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜಾಲಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂನನ್ನು ತಡರಾತ್ರಿ ದುಷ್ಕರ್ಮಿಗಳು ಗ್ಯಾಸ್ ಕಟರ್ ಬಳಸಿ ಒಡೆದಿದ್ದಾರೆ. ಬಳಿಕ, ಎಟಿಎಂ ಒಳಗಿದ್ದ ರೂ 27 ಲಕ್ಷಕ್ಕೂ ಹೆಚ್ಚು ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕೃತ್ಯದ ಸುಳಿವು ಸಿಗಬಾರದೆಂದು ಕಳ್ಳರು ಸಿಸಿಟಿವಿಯನ್ನು ಬ್ಲಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಮನೆಯ ಮಾಲೀಕರು ಗಮನಿಸಿದಾಗ ಎಟಿಎಂ ಕಳ್ಳತನವಾಗಿರುವ ವಿಚಾರ ಬೆಳಕಿಗೆ ಬಂದಿದೆ. […]

ATM ಒಡೆದು 27 ಲಕ್ಷ ರೂ. ದೋಚಿದ ಕಳ್ಳರು, ಎಲ್ಲಿ?
ಸಾಧು ಶ್ರೀನಾಥ್​

Updated on: Aug 10, 2020 | 2:10 PM

ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂ ಹೊಡೆದು 27 ಲಕ್ಷ ರೂ ಹಣ ದೋಚಿರುವ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಜಾಲಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂನನ್ನು ತಡರಾತ್ರಿ ದುಷ್ಕರ್ಮಿಗಳು ಗ್ಯಾಸ್ ಕಟರ್ ಬಳಸಿ ಒಡೆದಿದ್ದಾರೆ. ಬಳಿಕ, ಎಟಿಎಂ ಒಳಗಿದ್ದ ರೂ 27 ಲಕ್ಷಕ್ಕೂ ಹೆಚ್ಚು ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕೃತ್ಯದ ಸುಳಿವು ಸಿಗಬಾರದೆಂದು ಕಳ್ಳರು ಸಿಸಿಟಿವಿಯನ್ನು ಬ್ಲಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ ಮನೆಯ ಮಾಲೀಕರು ಗಮನಿಸಿದಾಗ ಎಟಿಎಂ ಕಳ್ಳತನವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us