AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಮುಖಂಡನ ಮೋಸದಾಟಕ್ಕೆ ಬಲಿಯಾದ ಮಹಿಳೆ, ಕಳಕೊಂಡ ಹಣವೆಷ್ಟು?

ಹುಬ್ಬಳ್ಳಿ: ತನ್ನ ಹೆಂಡತಿ ಮೃತಪಟ್ಟಿದ್ದಾಳೆ ಎಂದು ನಂಬಿಸಿ, ಈಗಾಗಲೆ ಮದುವೆಯಾಗಿದ್ದ ಮಹಿಳೆಯಿಂದ ಆಕೆಯ ಗಂಡನಿಗೆ ಡೈವೋರ್ಸ್ ಕೊಡಿಸಿ. ಎರಡನೇ ಮದುವೆಯಾಗಿ ಹೇಳಿ, ಮದುವೆಯಾದವಳ ಬಳಿ ಲಕ್ಷ ಲಕ್ಷ ಹಣ ಲಪಟಾಯಿಸಿದ. ವಂಚನೆ ತಿಳಿದು ಹಣ ವಾಪಸ್ ಕೇಳಿದಾಗ ಆತ ಮತ್ತು ಆತನ ಮೊದಲನೇ ಹೆಂಡತಿಯ ಮಕ್ಕಳು ಸೇರಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಆರೋಪ  ಹುಬ್ಬಳ್ಳಿ ನಗರದ ಬಿಜೆಪಿ ಮುಖಂಡನ ಮೇಲೆ ಕೇಳಿಬಂದಿದೆ. ಮಹಿಳೆಯನ್ನು ನೆಲಕ್ಕೆ ಬೀಳಿಸಿ, ಕೂದಲು ಎಳೆದು ಥಳಿತ ಹುಬ್ಬಳ್ಳಿಯ ವಿದ್ಯಾನಗರದ ಅಕ್ಷಯ ಕಾಲೋನಿಯ ಬಸವರಾಜ್ […]

ರಾಜಕೀಯ ಮುಖಂಡನ ಮೋಸದಾಟಕ್ಕೆ ಬಲಿಯಾದ ಮಹಿಳೆ, ಕಳಕೊಂಡ ಹಣವೆಷ್ಟು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 26, 2020 | 2:00 AM

Share

ಹುಬ್ಬಳ್ಳಿ: ತನ್ನ ಹೆಂಡತಿ ಮೃತಪಟ್ಟಿದ್ದಾಳೆ ಎಂದು ನಂಬಿಸಿ, ಈಗಾಗಲೆ ಮದುವೆಯಾಗಿದ್ದ ಮಹಿಳೆಯಿಂದ ಆಕೆಯ ಗಂಡನಿಗೆ ಡೈವೋರ್ಸ್ ಕೊಡಿಸಿ. ಎರಡನೇ ಮದುವೆಯಾಗಿ ಹೇಳಿ, ಮದುವೆಯಾದವಳ ಬಳಿ ಲಕ್ಷ ಲಕ್ಷ ಹಣ ಲಪಟಾಯಿಸಿದ. ವಂಚನೆ ತಿಳಿದು ಹಣ ವಾಪಸ್ ಕೇಳಿದಾಗ ಆತ ಮತ್ತು ಆತನ ಮೊದಲನೇ ಹೆಂಡತಿಯ ಮಕ್ಕಳು ಸೇರಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಆರೋಪ  ಹುಬ್ಬಳ್ಳಿ ನಗರದ ಬಿಜೆಪಿ ಮುಖಂಡನ ಮೇಲೆ ಕೇಳಿಬಂದಿದೆ.

ಮಹಿಳೆಯನ್ನು ನೆಲಕ್ಕೆ ಬೀಳಿಸಿ, ಕೂದಲು ಎಳೆದು ಥಳಿತ ಹುಬ್ಬಳ್ಳಿಯ ವಿದ್ಯಾನಗರದ ಅಕ್ಷಯ ಕಾಲೋನಿಯ ಬಸವರಾಜ್ ಕೆಲಗೇರಿ ಎಂಬಾತ ಈಗಾಗಲೇ ಮದುವೆಯಾಗಿದ್ದು, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಜೀವಂತವಾಗಿದ್ದರೂ ಸಹ ವಿವಾಹಿತ ಮಹಿಳೆಯನ್ನು ಪ್ರೀತಿ ಮಾಡುವುದಾಗಿ ನಂಬಿಸಿ, ತನ್ನ ಹೆಂಡತಿ ಈಗಾಗಲೇ ಮೃತಪಟ್ಟಿದ್ದು ನಿನ್ನನ್ನು ಎರಡನೇ ಮದುವೆಯಾಗುವುದಾಗಿ ಹೇಳಿ ಆಕೆಯಿಂದ ಲಕ್ಷ ಲಕ್ಷ ಹಣವನ್ನು ಲಪಟಾಯಿಸಿ, ಹಣವನ್ನು ವಾಪಸ್ ಕೇಳಲು ಹೋದಾಗ ಬಸವರಾಜ್ ಕೆಲಗೇರಿ ಹಾಗೂ ಆತನ ಮಕ್ಕಳು ಸೇರಿ ಈ ಮಹಿಳೆಯನ್ನು ಥಳಿಸಿದ್ದಾರೆ.

ರಾಜಕಾರಣಿಗಳ ಒತ್ತಡಕ್ಕೆ ಮಣಿದು ಬಂಧಿಸದ ಆರೋಪ ಸದ್ಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ, ಬಸವರಾಜ್ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು, ರಾಜಕೀಯ ಒತ್ತಡಕ್ಕೆ ಮಣಿದ ಪೊಲೀಸರು ಆರೋಪಿಯನ್ನು ಇನ್ನು ಬಂಧಿಸಿಲ್ಲವೆಂದು ನೊಂದ ಮಹಿಳೆ ಪೊಲೀಸರ ಮೇಲೆ ಆರೋಪಿಸಿದ್ದಾರೆ.

2012ರಲ್ಲಿ ಮನೆಯಲ್ಲಿಯೇ ಸಂತ್ರಸ್ತ ಮಹಿಳೆಯನ್ನ 2ನೇ ಮದುವೆಯಾಗಿದ್ದ ಬಸವರಾಜನ ಮೋಸದಾಟವನ್ನು ಅರಿಯದ ಮಹಿಳೆ ತನ್ನ ಬಳಿ ಇದ್ದ ಸೈಟ್ ಮಾರಿ 25 ಲಕ್ಷ ಹಣವನ್ನು ಆತನಿಗೆ ನೀಡಿ ಈಗ ವಂಚನೆಗೊಳಗಾಗಿದ್ದಾಳೆ. ಜೊತೆಗೆ ಈಗಾಗಲೇ ಮದುವೆಯಾಗಿದ್ದ ಗಂಡನಿಗೆ ಡೈವೋರ್ಸ್ ಕೊಟ್ಟಿದ್ದ ಈ ಮಹಿಳೆ ಈತನಿಗಾಗಿ ಗಂಡನನ್ನು ದೂರ ಮಾಡಿಕೊಂಡಿದ್ದು ಈಗ ದಿಕ್ಕು ತೋಚದ ಸ್ಥಿತಿಯಲ್ಲಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.

Published On - 6:30 pm, Sat, 25 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ