ಅಥಣಿಯಲ್ಲಿ ಮರಳು ದಂಧೆ: ತಹಶೀಲ್ದಾರ್‌ ಮೇಲೆ ಟ್ರ್ಯಾಕ್ಟರ್ ಬಿಟ್ಟ ದುರುಳ

ಬೆಳಗಾವಿ: ಮರಳು ದಂಧೆ ತಡೆಯಲು ಹೋದ ತಹಶೀಲ್ದಾರ್ ಕಾರಿನ ಮೇಲೆ ಖದೀಮರು ಟ್ರ್ಯಾಕ್ಟರ್ ಹತ್ತಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅಪಾಯದಿಂದ ಪಾರಾಗಿದ್ದಾರೆ. ಲಾಕ್​ಡೌನ್ ಇದ್ದರೂ ಶಿರೂರು ಗ್ರಾಮದ ಬಳಿ ಅಕ್ರಮವಾಗಿ ಹಳ್ಳದಿಂದ ಮರಳು ತೆಗೆಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ದಾಳಿ ನಡೆಸಿದ್ದಾರೆ. ಈ ವೇಳೆ ತಹಶೀಲ್ದಾರ್ ಕಾರಿಗೆ ಟ್ರ್ಯಾಕ್ಟರ್ ಗುದ್ದಿಸಿ ಮರಳು ದಂಧೆಕೋರ ಬಾಳು ಹಾಜಾರೆ ಪರಾರಿಯಾಗಿದ್ದಾನೆ. […]

ಅಥಣಿಯಲ್ಲಿ ಮರಳು ದಂಧೆ: ತಹಶೀಲ್ದಾರ್‌ ಮೇಲೆ  ಟ್ರ್ಯಾಕ್ಟರ್ ಬಿಟ್ಟ ದುರುಳ
ಸಾಧು ಶ್ರೀನಾಥ್​

Updated on: Apr 29, 2020 | 4:51 PM

ಬೆಳಗಾವಿ: ಮರಳು ದಂಧೆ ತಡೆಯಲು ಹೋದ ತಹಶೀಲ್ದಾರ್ ಕಾರಿನ ಮೇಲೆ ಖದೀಮರು ಟ್ರ್ಯಾಕ್ಟರ್ ಹತ್ತಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅಪಾಯದಿಂದ ಪಾರಾಗಿದ್ದಾರೆ.

ಲಾಕ್​ಡೌನ್ ಇದ್ದರೂ ಶಿರೂರು ಗ್ರಾಮದ ಬಳಿ ಅಕ್ರಮವಾಗಿ ಹಳ್ಳದಿಂದ ಮರಳು ತೆಗೆಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ದಾಳಿ ನಡೆಸಿದ್ದಾರೆ. ಈ ವೇಳೆ ತಹಶೀಲ್ದಾರ್ ಕಾರಿಗೆ ಟ್ರ್ಯಾಕ್ಟರ್ ಗುದ್ದಿಸಿ ಮರಳು ದಂಧೆಕೋರ ಬಾಳು ಹಾಜಾರೆ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ತಹಶೀಲ್ದಾರ್ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Published On - 4:27 pm, Wed, 29 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us