AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series ಅಂತಿಮ ಟೆಸ್ಟ್​: 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ

ಮೂರನೇ ದಿನದ ಮೊದಲ ಸೆಷನ್‌ನಲ್ಲಿ ಟೀಂ ಇಂಡಿಯಾ ಚೇತೇಶ್ವರ ಪೂಜಾರ ಹಾಗೂ ನಾಯಕ ಅಜಿಂಕ್ಯಾ ರಹಾನೆ ಅವರ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Australia vs India Test Series ಅಂತಿಮ ಟೆಸ್ಟ್​: 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ
ವಿಕೆಟ್​ ಪಡೆದ ಸಂಭ್ರಮದಲ್ಲಿ ಆಸ್ಟ್ರೇಲಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 17, 2021 | 7:49 AM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಇಂದು ಪಂದ್ಯದ ಮೂರನೇ ದಿನ. ಮೂರನೇ ದಿನದ ಮೊದಲ ಸೆಷನ್‌ನಲ್ಲಿ ಟೀಂ ಇಂಡಿಯಾ ಚೇತೇಶ್ವರ ಪೂಜಾರ ಹಾಗೂ ನಾಯಕ ಅಜಿಂಕ್ಯಾ ರಹಾನೆ ಅವರ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಮಳೆಯಿಂದಾಗಿ ಎರಡನೇ ದಿನದ ಮೂರನೇ ಸೆಷನ್‌ನಲ್ಲಿಯೇ ಪಂದ್ಯವನ್ನು ನಿಲ್ಲಿಸಲಾಯಿತು. ಪಂದ್ಯ ನಿಲ್ಲುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 2 ವಿಕೆಟ್‌ ಕಳೆದುಕೊಂಡು 62 ರನ್ ಗಳಿಸಿತ್ತು. ನಾಯಕ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದರು. ಆದರೆ ಇಂದು 3ನೇ ದಿನದಾಟವನ್ನು ಆರಂಭಿಸಿದ ಈ ಜೋಡಿ ಜವಬ್ದಾರಿಯುತ ಆಟಕ್ಕೆ ಮುಂದಾಗಲಿಲ್ಲ. ಭರವಸೆ ಆಟಗಾರನಾಗಿದ್ದ ಪೂಜಾರ 25 ರನ್​ ಗಳಿಸಿ ಹ್ಯಾಝೆಲ್​ವುಡ್​ಗೆ ವಿಕೆಟ್​ ಒಪ್ಪಿಸಿದರೆ ನಾಯಕ ರಹಾನೆ 37 ರನ್​ ಗಳಿಸಿ ಮಿಚೆಲ್​ ಸ್ಟಾರ್ಕ್​ಗೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಸೇರಿಕೊಂಡರು.

ಇತ್ತೀಚಿನ ವರದಿಯ ಪ್ರಕಾರ ಭೋಜನ ವಿರಾಮದ ಹೊತ್ತಿಗೆ ಟೀಂ ಇಂಡಿಯಾ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡು 161 ರನ್​ ಗಳಿಸಿದೆ. 38 ರನ್​ ಗಳಿಸಿರುವ ಮಾಯಾಂಕ್​ ಅಗರ್​ವಾಲ್​ ಹಾಗೂ 4 ರನ್​ ಗಳಿಸಿರುವ ರಿಷಭ್​ ಪಂತ್​ ಕ್ರೀಸ್​ನಲ್ಲಿದ್ದಾರೆ.

Published On - 7:43 am, Sun, 17 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ