AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series ಕುತೂಹಲ ಕೆರಳಿಸಿದ ಬ್ರಿಸ್ಬೇನ್ ಟೆಸ್ಟ್: ಭಾರತೀಯ ಬೌಲರ್​ಗಳ ಮೇಲುಗೈ, ಆಸ್ಟ್ರೇಲಿಯಾ 140-4

ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. 2ನೇ ಇನ್ನಿಂಗ್ಸ್​​ ಆರಂಭಿಸಿರುವ ಆಸ್ಟ್ರೇಲಿಯಾ ಪ್ರಮುಖ 4 ವಿಕೆಟ್​ ಕಳೆದುಕೊಂಡು 140 ರನ್​​ ಗಳಿಸಿದೆ.

Australia vs India Test Series ಕುತೂಹಲ ಕೆರಳಿಸಿದ ಬ್ರಿಸ್ಬೇನ್ ಟೆಸ್ಟ್: ಭಾರತೀಯ ಬೌಲರ್​ಗಳ ಮೇಲುಗೈ, ಆಸ್ಟ್ರೇಲಿಯಾ 140-4
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 18, 2021 | 7:45 AM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಇಂದು ಪಂದ್ಯದ ನಾಲ್ಕನೇ ದಿನವಾಗಿದ್ದು, 2ನೇ ಇನ್ನಿಂಗ್ಸ್​​ ಆರಂಭಿಸಿರುವ ಆಸ್ಟ್ರೇಲಿಯಾ ಪ್ರಮುಖ 4 ವಿಕೆಟ್​ ಕಳೆದುಕೊಂಡು 140 ರನ್​​ ಗಳಿಸಿದೆ.

3ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿತ್ತು. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದು 2ನೇ ಇನ್ನಿಂಗ್ಸ್​ ಆರಂಭಿಸಿದ ಆಸ್ಟ್ರೇಲಿಯಾ 3ನೇ ದಿನದಾಟದಂತ್ಯಕ್ಕೆ ವಿಕೆಟ್​ ನಷ್ಟವಿಲ್ಲದೆ 24 ರನ್​ ಗಳಿಸಿತ್ತು. ಆಸಿಸ್​ ಪರ ಆರಂಭಿಕರಾದ ವಾರ್ನರ್​ ಹಾಗೂ ಹ್ಯಾರಿಸ್​ 4ನೇ ದಿನದಾಟಕ್ಕೆ ಬ್ಯಾಟಿಂಗ್​ ಕಾಯ್ದುಕೊಂಡಿದ್ದರು.

ವಿಕೆಟ್​ ನಷ್ಟವಿಲ್ಲದೆ 4ನೇ ದಿನದಾಟ ಆರಂಭಿಸಿದ ಆಸಿಸ್​ಗೆ ಆಘಾತ ನೀಡಿದ್ದು ಟೀಂ ಇಂಡಿಯಾ ವೇಗಿ ಶಾರ್ದೂಲ್​ ಠಾಕೂರ್​. 38 ರನ್​ ಗಳಿಸಿ ಆಡುತ್ತಿದ್ದ ಹ್ಯಾರಿಸ್​ನನ್ನು ಪೆವಿಲಿಯನ್​ಗೆ ಕಳುಹಿಸುವುದರಲ್ಲಿ ಠಾಕೂರ್​ ಯಶಸ್ವಿಯಾದರು.ತದನಂತರ 48 ರನ್​ ಗಳಿಸಿ ಅರ್ಧ ಶತಕದ ಹೊಸ್ತಿಲಿನಲ್ಲಿದ್ದ ಡೇವಿಡ್​ ವಾರ್ನರ್​ ವಾಷಿಂಗ್​ಟನ್​ ಸುಂದರ್​ ಸ್ಪಿನ್​ ಬಲೆಗೆ ಬಿದ್ದರು. ನಂತರ ಬಂದ ಮಾರ್ನಸ್ ಲಾಬುಶೆನ್ 25 ರನ್​ಗಳಿಸಿದ್ದಾಗ​ ವೇಗಿ ಮಹಮದ್​ ಸಿರಾಜ್​ಗೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಸೇರಿದರು. ಈ ವಿಕೆಟ್​ ನಂತರ ಬಂದ ಮ್ಯಾಥ್ಯೂ ವೇಡ್​ ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ವೇಗಿ ಮಹಮದ್​ ಸಿರಾಜ್​ಗೆ ಶೂನ್ಯಕ್ಕೆ ವಿಕೆಟ್​ ಒಪ್ಪಿಸಿದರು.

ಊಟದ ವಿರಾಮದ ವೇಳೆಗೆ 4 ವಿಕೆಟ್​ ಕಳೆದುಕೊಂಡಿರುವ ಆಸಿಸ್​ ಪಡೆ 140 ರನ್​ ಗಳಿಸಿದೆ. ಟೀಂ ಇಂಡಿಯಾ ಪರ ವೇಗಿ ಮಹಮದ್​ ಸಿರಾಜ್​ 2 ವಿಕೆಟ್​ ಪಡೆದಿದ್ದರೆ, ಶಾರ್ದೂಲ್​ ಠಾಕೂರ್​ ಹಾಗೂ ವಾಷಿಂಗ್​ಟನ್​ ಸುಂದರ್​ ತಲಾ 1 ವಿಕೆಟ್​ ಪಡೆದಿದ್ದಾರೆ. ​

Published On - 7:24 am, Mon, 18 January 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ