AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series ಕುತೂಹಲ ಕೆರಳಿಸಿದ ಬ್ರಿಸ್ಬೇನ್ ಟೆಸ್ಟ್: ಭಾರತೀಯ ಬೌಲರ್​ಗಳ ಮೇಲುಗೈ, ಆಸ್ಟ್ರೇಲಿಯಾ 140-4

ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. 2ನೇ ಇನ್ನಿಂಗ್ಸ್​​ ಆರಂಭಿಸಿರುವ ಆಸ್ಟ್ರೇಲಿಯಾ ಪ್ರಮುಖ 4 ವಿಕೆಟ್​ ಕಳೆದುಕೊಂಡು 140 ರನ್​​ ಗಳಿಸಿದೆ.

Australia vs India Test Series ಕುತೂಹಲ ಕೆರಳಿಸಿದ ಬ್ರಿಸ್ಬೇನ್ ಟೆಸ್ಟ್: ಭಾರತೀಯ ಬೌಲರ್​ಗಳ ಮೇಲುಗೈ, ಆಸ್ಟ್ರೇಲಿಯಾ 140-4
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 18, 2021 | 7:45 AM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಇಂದು ಪಂದ್ಯದ ನಾಲ್ಕನೇ ದಿನವಾಗಿದ್ದು, 2ನೇ ಇನ್ನಿಂಗ್ಸ್​​ ಆರಂಭಿಸಿರುವ ಆಸ್ಟ್ರೇಲಿಯಾ ಪ್ರಮುಖ 4 ವಿಕೆಟ್​ ಕಳೆದುಕೊಂಡು 140 ರನ್​​ ಗಳಿಸಿದೆ.

3ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿತ್ತು. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದು 2ನೇ ಇನ್ನಿಂಗ್ಸ್​ ಆರಂಭಿಸಿದ ಆಸ್ಟ್ರೇಲಿಯಾ 3ನೇ ದಿನದಾಟದಂತ್ಯಕ್ಕೆ ವಿಕೆಟ್​ ನಷ್ಟವಿಲ್ಲದೆ 24 ರನ್​ ಗಳಿಸಿತ್ತು. ಆಸಿಸ್​ ಪರ ಆರಂಭಿಕರಾದ ವಾರ್ನರ್​ ಹಾಗೂ ಹ್ಯಾರಿಸ್​ 4ನೇ ದಿನದಾಟಕ್ಕೆ ಬ್ಯಾಟಿಂಗ್​ ಕಾಯ್ದುಕೊಂಡಿದ್ದರು.

ವಿಕೆಟ್​ ನಷ್ಟವಿಲ್ಲದೆ 4ನೇ ದಿನದಾಟ ಆರಂಭಿಸಿದ ಆಸಿಸ್​ಗೆ ಆಘಾತ ನೀಡಿದ್ದು ಟೀಂ ಇಂಡಿಯಾ ವೇಗಿ ಶಾರ್ದೂಲ್​ ಠಾಕೂರ್​. 38 ರನ್​ ಗಳಿಸಿ ಆಡುತ್ತಿದ್ದ ಹ್ಯಾರಿಸ್​ನನ್ನು ಪೆವಿಲಿಯನ್​ಗೆ ಕಳುಹಿಸುವುದರಲ್ಲಿ ಠಾಕೂರ್​ ಯಶಸ್ವಿಯಾದರು.ತದನಂತರ 48 ರನ್​ ಗಳಿಸಿ ಅರ್ಧ ಶತಕದ ಹೊಸ್ತಿಲಿನಲ್ಲಿದ್ದ ಡೇವಿಡ್​ ವಾರ್ನರ್​ ವಾಷಿಂಗ್​ಟನ್​ ಸುಂದರ್​ ಸ್ಪಿನ್​ ಬಲೆಗೆ ಬಿದ್ದರು. ನಂತರ ಬಂದ ಮಾರ್ನಸ್ ಲಾಬುಶೆನ್ 25 ರನ್​ಗಳಿಸಿದ್ದಾಗ​ ವೇಗಿ ಮಹಮದ್​ ಸಿರಾಜ್​ಗೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಸೇರಿದರು. ಈ ವಿಕೆಟ್​ ನಂತರ ಬಂದ ಮ್ಯಾಥ್ಯೂ ವೇಡ್​ ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ವೇಗಿ ಮಹಮದ್​ ಸಿರಾಜ್​ಗೆ ಶೂನ್ಯಕ್ಕೆ ವಿಕೆಟ್​ ಒಪ್ಪಿಸಿದರು.

ಊಟದ ವಿರಾಮದ ವೇಳೆಗೆ 4 ವಿಕೆಟ್​ ಕಳೆದುಕೊಂಡಿರುವ ಆಸಿಸ್​ ಪಡೆ 140 ರನ್​ ಗಳಿಸಿದೆ. ಟೀಂ ಇಂಡಿಯಾ ಪರ ವೇಗಿ ಮಹಮದ್​ ಸಿರಾಜ್​ 2 ವಿಕೆಟ್​ ಪಡೆದಿದ್ದರೆ, ಶಾರ್ದೂಲ್​ ಠಾಕೂರ್​ ಹಾಗೂ ವಾಷಿಂಗ್​ಟನ್​ ಸುಂದರ್​ ತಲಾ 1 ವಿಕೆಟ್​ ಪಡೆದಿದ್ದಾರೆ. ​

Published On - 7:24 am, Mon, 18 January 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ