ಶಿಡ್ಲಘಟ್ಟ ವೃತ್ತದಲ್ಲಿ ಆ್ಯಕ್ಸಿಸ್ ಬ್ಯಾಂಕ್‌ ATMನಲ್ಲಿ ಕಳ್ಳತನ

ಚಿಕ್ಕಬಳ್ಳಾಪುರ: ನಗರದ ಶಿಡ್ಲಘಟ್ಟ ವೃತ್ತದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನ ನಡೆದಿದೆ. ದುಷ್ಕರ್ಮಿಗಳು ಗ್ಯಾಸ್ ಕಟರ್‌ನಿಂದ ಎಟಿಎಂ ಕಟ್ ಮಾಡಿ ಹಣ ಲೂಟಿ ಮಾಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಒಳಗೆ ಹಣ ದೋಚಿರುವುದಾಗಿ ತಿಳಿದುಬಂದಿದೆ. ATMಗೆ ಖನ್ನ ಹಾಕಿ, ಗ್ಯಾಸ್ ಕಟರ್ ನಿಂದ ಮಷಿನ್ ಓಪನ್ ಮಾಡಿ ಹಣ ಲೂಟಿ ಮಾಡಿರುವ ಪ್ರಕರಣದಲ್ಲಿ ಎ.ಟಿ.ಎಂ. ಸೆಕ್ಯೂರಿಟಿ ಗಾರ್ಡ್ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಈ ಹಿಂದೆಯೂ ದುಷ್ಕರ್ಮಿಗಳು ಎರಡು ಭಾರಿ ಕಳ್ಳತನಕ್ಕೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ […]

ಶಿಡ್ಲಘಟ್ಟ ವೃತ್ತದಲ್ಲಿ ಆ್ಯಕ್ಸಿಸ್ ಬ್ಯಾಂಕ್‌ ATMನಲ್ಲಿ ಕಳ್ಳತನ
ಸಾಧು ಶ್ರೀನಾಥ್​

Updated on: Aug 29, 2020 | 11:23 AM

ಚಿಕ್ಕಬಳ್ಳಾಪುರ: ನಗರದ ಶಿಡ್ಲಘಟ್ಟ ವೃತ್ತದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನ ನಡೆದಿದೆ. ದುಷ್ಕರ್ಮಿಗಳು ಗ್ಯಾಸ್ ಕಟರ್‌ನಿಂದ ಎಟಿಎಂ ಕಟ್ ಮಾಡಿ ಹಣ ಲೂಟಿ ಮಾಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಒಳಗೆ ಹಣ ದೋಚಿರುವುದಾಗಿ ತಿಳಿದುಬಂದಿದೆ.

ATMಗೆ ಖನ್ನ ಹಾಕಿ, ಗ್ಯಾಸ್ ಕಟರ್ ನಿಂದ ಮಷಿನ್ ಓಪನ್ ಮಾಡಿ ಹಣ ಲೂಟಿ ಮಾಡಿರುವ ಪ್ರಕರಣದಲ್ಲಿ ಎ.ಟಿ.ಎಂ. ಸೆಕ್ಯೂರಿಟಿ ಗಾರ್ಡ್ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಈ ಹಿಂದೆಯೂ ದುಷ್ಕರ್ಮಿಗಳು ಎರಡು ಭಾರಿ ಕಳ್ಳತನಕ್ಕೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಜಿ.ಕೆ. ಮಿಥುನ್ ‌ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us