AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

B Sriramulu: ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಶ್ರೀರಾಮುಲು ತಿರುಗೇಟು

B Sriramulu: ಕುರುಬರ ಹೋರಾಟದ ಹಿಂದೆ ಆರ್​ಎಸ್​ಎಸ್ ಕೈವಾಡವಿಲ್ಲ ಎಂದು ಹೇಳಿದ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಆರ್​ಎಸ್​ಎಸ್​ಗೆ ಇಂತಹ ಕೆಲಸ ಮಾಡುವ ಅವಶ್ಯಕತೆ ಇಲ್ಲ ಎಂದರು.

B Sriramulu: ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಶ್ರೀರಾಮುಲು ತಿರುಗೇಟು
ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು
sandhya thejappa
| Edited By: |

Updated on: Feb 12, 2021 | 3:43 PM

Share

ಗದಗ: ಸರ್ಕಾರದ ಬಳಿ ಹಣವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಬಿ.ಶ್ರೀರಾಮುಲು ಬಾದಾಮಿಯಲ್ಲಿ ಕೋಟ್ಯಂತರ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ ನೀಡುತ್ತಿದ್ದಾರೆ. ಈ ಹಣ ಎಲ್ಲಿಂದ ಬಂತು ಎಂದು ಸಿದ್ದರಾಮಯ್ಯರವರೇ ಹೇಳಬೇಕು ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಬೇರೆ ವಿಷಯ ಇಲ್ಲ. ಹೀಗಾಗಿ ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಕೊವಿಡ್ ಮತ್ತು ಪ್ರವಾಹ ಹಿನ್ನೆಲೆ ಸರ್ಕಾರಕ್ಕೆ ಸ್ವಲ್ಪ ಸಮಸ್ಯೆಯಾಗಿದೆ. ಈಗ ಎಲ್ಲ ಸಚಿವರೂ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಆರ್​ಎಸ್​ಎಸ್​ ಕೈವಾಡವಿಲ್ಲ ಕುರುಬರ ಹೋರಾಟದ ಹಿಂದೆ ಆರ್​ಎಸ್​ಎಸ್ ಕೈವಾಡವಿಲ್ಲ ಎಂದು ಹೇಳಿದ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಆರ್​ಎಸ್​ಎಸ್​ಗೆ ಇಂತಹ ಕೆಲಸ ಮಾಡುವ ಅವಶ್ಯಕತೆ ಇಲ್ಲ. ಅದು ದೇಶ ಸೇವೆ ಮಾಡುವ ಕೆಲಸ ಮಾಡುತ್ತಿದೆ ಎಂದರು. ಇನ್ನೂ ಎಸ್​ಟಿ ಮೀಸಲಾತಿಗಾಗಿ ಕುರುಬರ ಹೋರಾಟ ವಿಚಾರದ ಬಗ್ಗೆ ಮಾತನಾಡಿದ ಶ್ರೀರಾಮುಲು ಹೋರಾಟದಲ್ಲಿ ಸಿದ್ದರಾಮಯ್ಯನವರು ಏಕೆ ಭಾಗಿಯಾಗುತ್ತಿಲ್ಲವೆಂದು ಗೊತ್ತಿಲ್ಲ. ಸಚಿವ ಈಶ್ವರಪ್ಪಗೆ ಕಾಳಜಿ ಇದೆ. ಹೀಗಾಗಿ ಭಾಗಿಯಾಗುತ್ತಿದ್ದಾರೆ. ಸಚಿವ ಸ್ಥಾನಕ್ಕಿಂತ ಸಮುದಾಯ ದೊಡ್ಡದೆಂದು ಭಾಗಿಯಾಗಿದ್ದಾರೆ ಎಂದರು.

ಇದನ್ನೂ ಓದಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್: ಹೆಚ್.ವಿಶ್ವನಾಥ್ ವಾಗ್ದಾಳಿ

ಕಾಂಗ್ರೆಸ್​ನಲ್ಲಿ ಸಾಕಷ್ಟು ಒಡಕಿದೆ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿ ಮಾತ್ರ ಕಾಣುತ್ತಿದೆ. ಜನರಿಗಾಗಿ ಕೆಲಸ ಮಾಡಬೇಕೆಂಬುದು ಸರ್ಕಾರದ ಉದ್ದೇಶವಾಗಿದ್ದರೇ ವಿಪಕ್ಷ ನಾಯಕ ಸಿಎಂ ಕುರ್ಚಿಗೆ ಹಾರಬೇಕೆಂಬ ಉದ್ದೇಶ ಹೊಂದಿದ್ದಾರೆ ಎಂದು ಹೇಳಿದರು. ಜೊತೆಗೆ ರಾಜ್ಯ ಕಾಂಗ್ರೆಸ್​ನಲ್ಲಿ ಸಾಕಷ್ಟು ಒಡಕು ಇದೆ. ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎನ್ನುತ್ತಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾರೆ. ಇನ್ನೊಂದೆಡೆ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಅಂತಾರೆ. ಅವರಲ್ಲಿ ಯಾವುದೂ ಸರಿಯಲ್ಲ ಎಂದು ಹೇಳಿದರು.

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?