ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಅಮಾನವೀಯ ವರ್ತನೆ, ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು

ರಾಯಚೂರು: ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಅಮಾನವೀಯ ಕೃತ್ಯದಿಂದ ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿದೆ. ರಕ್ತಸ್ರಾವದಿಂದ ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆ ನರಳಾಡುತ್ತಿದ್ದರೂ ವೈದ್ಯರು ಸ್ಪಂದಿಸಲಿಲ್ಲ. ಹಾಗಾಗಿ ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ. ದೇವದುರ್ಗ ಮೂಲದ ಗರ್ಭಿಣಿ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿದ್ದರು. ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡದ ಕಾರಣ ಸೋಂಕಿತರೆಲ್ಲರೂ ಊಟ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ವೈದ್ಯರು ಶಿಫ್ಟ್ […]

ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಅಮಾನವೀಯ ವರ್ತನೆ, ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು
ಸಾಧು ಶ್ರೀನಾಥ್​ Edited By:

Updated on: Jun 09, 2020 | 11:00 AM

ರಾಯಚೂರು: ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಅಮಾನವೀಯ ಕೃತ್ಯದಿಂದ ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿದೆ. ರಕ್ತಸ್ರಾವದಿಂದ ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆ ನರಳಾಡುತ್ತಿದ್ದರೂ ವೈದ್ಯರು ಸ್ಪಂದಿಸಲಿಲ್ಲ. ಹಾಗಾಗಿ ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ.

ದೇವದುರ್ಗ ಮೂಲದ ಗರ್ಭಿಣಿ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿದ್ದರು. ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡದ ಕಾರಣ ಸೋಂಕಿತರೆಲ್ಲರೂ ಊಟ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಗೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ವೈದ್ಯರು ಶಿಫ್ಟ್ ಮಾಡಿದ್ದರು. ವೈದ್ಯರ ಬೇಜವಾಬ್ದಾರಿಗೆ ರೊಚ್ಚಿಗೆದ್ದ ಸೋಂಕಿತರು ಆಸ್ಪತ್ರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟ‌ನೆ ನಡೆಸುತ್ತಿದ್ದಾರೆ.

Published On - 10:43 am, Tue, 9 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us