AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಹುಡುಗರ ಕತೆ ‘ಬ್ಯಾಂಕ್ ಬೇಂಚರ್ಸ್’ ಹಾಸ್ಯವೇ ಸಿನಿಮಾದ ಜೀವಾಳ

ಹೊಸಬರ ತಂಡಗಳು ಚಿತ್ರರಂಗಕ್ಕೆ ಬರುತ್ತಲೇ ಇರುತ್ತವೆ. ಕೆಲವು ಸದ್ದು ಮಾಡುತ್ತವೆ, ಕೆಲವು ಸದ್ದಿಲ್ಲದೆ ಹೋಗುತ್ತವೆ. ಇದೀಗ ಹೊಸ ತಂಡವೊಂದು ‘ಬ್ಯಾಕ್ ಬೇಂಚರ್ಸ್’ ಸಿನಿಮಾ ಮೂಲಕ ಎಂಟ್ರಿ ಕೊಡುತ್ತಿದ್ದಾರೆ.

ಕಾಲೇಜು ಹುಡುಗರ ಕತೆ ‘ಬ್ಯಾಂಕ್ ಬೇಂಚರ್ಸ್’ ಹಾಸ್ಯವೇ ಸಿನಿಮಾದ ಜೀವಾಳ
ಮಂಜುನಾಥ ಸಿ.
|

Updated on: Jun 01, 2024 | 10:48 PM

Share

ಕಾಲೇಜು ಕತೆಯುಳ್ಳ ಸಿನಿಮಾಗಳು (Cinema) ಸಾಕಷ್ಟು ಕನ್ನಡದಲ್ಲಿ ಬಂದಿವೆ, ಬರುತ್ತಲೇ ಇರುತ್ತವೆ. ಆದರೆ ಸಾಮಾನ್ಯವಾಗಿ ಕಾಲೇಜು ಕತೆಗಳು ಪ್ರೇಮಕತೆಯ ಸುತ್ತಲೇ ಗಿರಕಿ ಹೊಡೆಯುತ್ತವೆ. ಆದರೆ ಹಾಸ್ಯ, ಮನೋರಂಜನೆಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜು ದಿನಗಳ ಸಿನಿಮಾ ಒಂದು ಕನ್ನಡದಲ್ಲಿ ಬರುತ್ತಿದೆ, ಅದುವೇ ‘ಬ್ಯಾಕ್ ಬೆಂಚರ್ಸ್ ’. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಇದೇ ಸಿನಿಮಾದ ‘ಯಲ್ಲೋ ಯಲ್ಲೋ’ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ.

ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕ ಎರಡೂ ಆಗಿರುವ ಬಿ.ಆರ್ ರಾಜಶೇಖರ್ ಮಾತನಾಡಿ, ‘ಇದೊಂದು ಮನೋರಂಜನೆಯೇ ಪ್ರಮುಖವಾಗಿರುವ ಕಾಲೇಜು ಸ್ಟೋರಿ, ಸಿನಿಮಾದ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು ಬಿಡುಗಡೆಗೆ ಸಿದ್ದಾವಾಗಿದೆ‌.‌ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಜೂನ್ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಹೊಸಬರು. ಹೊಸತಂಡಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ಮನವಿ ಮಾಡಿದರು.

ಇದನ್ನೂ ಓದಿ:ಜಾನ್ವಿ ಕಪೂರ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು?

ಸಿನಿಮಾದಲ್ಲಿ ನಟಿಸಿರುವ ರಂಜನ್ ಮಾತನಾಡಿ, ನಮ್ಮಗೆಲ್ಲಾ ಇದು ಮೊದಲ ಸಿನಿಮಾ. ಆದರೆ ನಮಗೆ ನಟನೆ ಹೊಸತಲ್ಲ‌‌. ನಾವೆಲ್ಲ ನಟನೆ ಕಲಿತು ಬಂದಿರುವವರು. ಈಗ ಚಿತ್ರಮಂದಿರಕ್ಕೆ ಹೆಚ್ಚಾಗಿ ಜನರು ಬರುತ್ತಿಲ್ಲ. ಆ ಮಾತನ್ನು ಸುಳ್ಳು ಮಾಡುವ ಪ್ರಯತ್ನವನ್ನು ನಾವು ಮಾಡುತ್ತೇವೆ‌. ವಿನೂತನ ಪ್ರಚಾರ ಮಾಡುವ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ‌. ಚಿತ್ರಮಂದಿರಕ್ಕೆ ಬಂದ ಮೇಲೆ ನಮ್ಮ ಚಿತ್ರ ನೀವು ಕೊಟ್ಟ ದುಡ್ಡಿಗೆ ಮೋಸ ಆಗುವುದಿಲ್ಲ ಎಂಬ ಭರವಸೆ ನೀಡುತ್ತೇವೆ ಎಂದರು.

‘ಬ್ಯಾಕ್ ಬೆಂಚರ್ಸ್ ’ ಸಿನಿಮಾದಲ್ಲಿ ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್ ಹೆಚ್, ಮನೋಜ್ ಶೆಟ್ಟಿ ಇನ್ನೂ ಕೆಲವು ಹೊಸ ಕಲಾವಿದರು ನಟಿಸಿದ್ದಾರೆ. ಮನೋಹರ್ ಜೋಶಿ “ಬ್ಯಾಕ್ ಬೆಂಚರ್ಸ್ ” ಸಿನಿಮಾಕ್ಕೆ ಛಾಯಾಗ್ರಹಣ ಮಾಡಿದ್ದಾರೆ.

ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನವಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ