Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಿ ದುರ್ವಾಸನೆ ಬರೋಕೆ ಈ ಐದು ಆಹಾರಗಳು ಕಾರಣವಾಗಬಹುದು..

ನಾವು ಸೇವಿಸುವ ಆಹಾರಗಳು ಅನೇಕ ಬಾರಿ ದುರ್ವಾಸನೆ ಬೀರುವ ಉಸಿರಾಟವನ್ನು ನಮ್ಮ ದಿನವನ್ನು ಹಾಳುಮಾಡಲು ಕಾರಣವಾಗಬಹುದು. ದುರ್ವಾಸನೆಯನ್ನು ಉಂಟುಮಾಡುವ ಐದು ಆಹಾರಗಳಿಂದ ನೀವು ದೂರವಿರಿ.

ಬಾಯಿ ದುರ್ವಾಸನೆ ಬರೋಕೆ ಈ ಐದು ಆಹಾರಗಳು ಕಾರಣವಾಗಬಹುದು..
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Mar 16, 2021 | 6:40 AM

ಬಾಯಿ ವಾಸನೆ ಬರುತ್ತಿದೆ ಎಂದರೆ ಅದನ್ನು ನಿರ್ಲಕ್ಷಿಸೋಕೆ ಯಾರೂ ಬಯಸುವುದಿಲ್ಲ. ಇದು ಅವಮಾನಕರವೂ ಹೌದು. ನಾವು ಸೇವಿಸುವ ಆಹಾರಗಳು ಅನೇಕ ಬಾರಿ ದುರ್ವಾಸನೆ ಬೀರುವ ಉಸಿರಾಟವನ್ನು ನಮ್ಮ ದಿನವನ್ನು ಹಾಳುಮಾಡಲು ಕಾರಣವಾಗಬಹುದು. ಹಾಗಾದರೆ, ದುರ್ವಾಸನೆಯನ್ನು ಉಂಟುಮಾಡುವ ಐದು ಆಹಾರಗಳಿಂದ ನೀವು ದೂರವಿರಿ. ಮೀನು ಮತ್ತು ಮಾಂಸ ನಮ್ಮ ಹೊಟ್ಟೆಯಲ್ಲಿರುವ ಆಮ್ಲಗಳು ಮತ್ತು ಬ್ಯಾಕ್ಟೀರಿಯಾಗಳು ಮೀನು ಮತ್ತು ಮಾಂಸದ ಪ್ರೋಟೀನ್‌ಗಳನ್ನು ಅಮೈನೋ ಆಮ್ಲಗಳಾಗಿ ವಿಭಜಿಸುತ್ತವೆ. ಈ ಅವಧಿಯಲ್ಲಿ ದುರ್ವಾಸನೆ ಹುಟ್ಟಿಕೊಳ್ಳುತ್ತದೆ. ಇದು ಬಾಯಿಯ ಮೂಲಕ ಹೊರ ಬರುತ್ತದೆ. ಇನ್ನು, ಮೀನು ತಿಂದಾದ ಮೇಲೆ ಸೋಂಪು ಅಥವಾ ಅಡಿಕೆ ಪುಡಿ ಬಾಯಿಗೆ ಹಾಕಿಕೊಳ್ಳದೆ ಇದ್ದರೆ ಬಾಯಿ ವಾಸನೆ ಬರುತ್ತದೆ. ಹೀಗಾಗಿ ಮಾಂಸಾಹಾರವನ್ನು ಆದಷ್ಟು ಕಡಿಮೆ ಮಾಡಿ.

ಬೆಳ್ಳುಳ್ಳಿ ಬೆಳ್ಳುಳ್ಳಿ ಹೆಚ್ಚಿನ ಸಂಖ್ಯೆಯ ಸಲ್ಫರ್ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ವಾಸನೆ ಕಾರಕ. ಬೆಳ್ಳುಳ್ಳಿ ತಿನ್ನುವುದರಿಂದ ಬಾಯಿ ವಾಸನೆ ಉಂಟಾಗುತ್ತದೆ. ಬೆಳ್ಳುಳ್ಳಿ ಒಳಗೊಂಡಿರುವ ಆಹಾರವನ್ನು ತಿನ್ನುವುದರಿಂದ ಕೆಟ್ಟ ಉಸಿರಾಟ ಹೆಚ್ಚಾಗುತ್ತದೆ. ಸಂಶೋಧನೆಯ ಪ್ರಕಾರ, ಬೆಳ್ಳುಳ್ಳಿ ಸೇವನೆಯು ಅಲೈಲ್ ಮೀಥೈಲ್ ಸಲ್ಫೈಡ್ ಎಂಬ ಸಲ್ಫರ್ ಸಂಯುಕ್ತದ ಉತ್ಪಾದನೆಗೆ ಕಾರಣವಾಗುತ್ತದೆ, ಇದು ನಮ್ಮ ಹೊಟ್ಟೆಯಿಂದ ಚಯಾಪಚಯಗೊಳ್ಳುವುದಿಲ್ಲ.

ಈರುಳ್ಳಿ ಈರುಳ್ಳಿ ಮತ್ತು ಬೆಳ್ಳುಳ್ಳಿ ಒಂದೇ ಕುಟುಂಬಕ್ಕೆ ಸೇರಿದೆ. ಬೆಳ್ಳುಳ್ಳಿಯಂತೆ, ಈರುಳ್ಳಿಯಲ್ಲೂ ಹೆಚ್ಚಿನ ಸಂಖ್ಯೆಯ ಸಲ್ಫ್ಯೂರಿಕ್ ಸಂಯುಕ್ತಗಳಿವೆ. ಈರುಳ್ಳಿಯನ್ನು ಹಾಗೆಯೇ ಸೇವಿಸುವುದರಿಂದ ಇದು ದುರ್ವಾಸನೆಯನ್ನು ಉಂಟುಮಾಡುತ್ತದೆ. ಈರುಳ್ಳಿ ಬೇಯಿಸಿ ತಿನ್ನುವುದರಿಂದ ಬಾಯಿಯ ವಾಸನೆ ಸ್ವಲ್ಪ ಕಡಿಮೆ ಮಾಡಬಹುದು.

ಹಾಲು ಮತ್ತು ಹಾಲಿನ ಉತ್ಪನ್ನ ಹಾಲು ಮತ್ತು ಚೀಸ್ ಸೇವನೆಯು ಬಾಯಿ ವಾಸನೆಗೆ ಕಾರಣವಾಗುತ್ತದೆ. ಡೈರಿ ಉತ್ಪನ್ನಗಳಲ್ಲಿನ ಅಮೈನೊ ಆಮ್ಲಗಳು ನಮ್ಮ ಒಸಡುಗಳಲ್ಲಿರುವ ಬ್ಯಾಕ್ಟೀರಿಯಾದಿಂದ ಒಡೆಯಲ್ಪಡುತ್ತವೆ, ಇದು ದುರ್ವಾಸನೆಯನ್ನು ಹೊಂದಿರುವ ಸಲ್ಫರ್ ಸಂಯುಕ್ತಗಳ ಉತ್ಪಾದನೆಗೆ ಕಾರಣವಾಗುತ್ತದೆ.

ಕಾಫಿ ಅನೇಕರಿಗೆ ಕಾಫಿ ಕುಡಿಯುವ ಹವ್ಯಾಸ ಇರುತ್ತದೆ. ಕಾಫಿಯಲ್ಲಿ ಕೆಫೀನ್ ಅಂಶ ಇರುತ್ತದೆ. ಇದು ನಮ್ಮ ಬಾಯಿಯಲ್ಲಿ ಲಾಲಾರಸವನ್ನು ಒಣಗಿಸುತ್ತದೆ ಮತ್ತು ಅತಿಯಾದ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದರಿಂದ ಕೆಟ್ಟ ಉಸಿರಾಟವನ್ನು ಉಂಟುಮಾಡುತ್ತದೆ.

ಇದನ್ನೂ ಓದಿ: Bad Breath: ಬಾಯಿ ದುರ್ವಾಸನೆಯ ಶೀಘ್ರ ಶಮನಕ್ಕೆ ಇಲ್ಲಿದೆ ಮನೆ ಮದ್ದು

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ