AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ ಹಸಿರು ಟವೆಲ್​ ಬಿಟ್ಟು ರಾಜಕಾರಣಿಯಾಗಲಿ: ಬಡಗಲಪುರ ನಾಗೇಂದ್ರ ವ್ಯಂಗ್ಯ

ಕೋಡಿಹಳ್ಳಿ ಚಂದ್ರಶೇಖರ್ ರೈತ ಸಂಘದ ಅಧಿಕೃತ ರಾಜ್ಯಾಧ್ಯಕ್ಷ ಅಲ್ಲ. ಅವರೇ ಗುಂಪು ಕಟ್ಟಿಕೊಂಡು ಆ ಗುಂಪಿನ ನಾಯಕನಾಗಿದ್ದಾರೆ ಅಷ್ಟೇ ಎಂದು ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ ಹಸಿರು ಟವೆಲ್​ ಬಿಟ್ಟು ರಾಜಕಾರಣಿಯಾಗಲಿ: ಬಡಗಲಪುರ ನಾಗೇಂದ್ರ ವ್ಯಂಗ್ಯ
ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ಬಡಗಲಪುರ ನಾಗೇಂದ್ರ
Skanda
| Edited By: |

Updated on: Dec 14, 2020 | 7:35 PM

Share

ಮೈಸೂರು: ಕೋಡಿಹಳ್ಳಿ ಸಾರಿಗೆ ನೌಕರರ ಪರ ಹೋರಾಟ ಮಾಡಲಿ. ಆದರೆ ಅದಕ್ಕೂ ಮುನ್ನ ಹೆಗಲಿನಲ್ಲಿರುವ ಹಸಿರು ಟವಲ್ ಕೆಳಗೆ ಇಳಿಸಲಿ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಟೀಕಿಸಿದ್ದಾರೆ.

ಕೋಡಿಹಳ್ಳಿಗೆ ಸಮಸ್ಯೆಯ ಅರಿವೂ ಇಲ್ಲ. ಅದಕ್ಕೆ ಪರಿಹಾರವೂ ಗೊತ್ತಿಲ್ಲ. ಅವರಿಗೆ ಪ್ರತಿಭಟನೆ ಮಾಡೋದಷ್ಟೇ ಗೊತ್ತು. ಕೋಡಿಹಳ್ಳಿಯವರೇ ಸುಮ್ಮನೆ ಹಸಿರು ಟವಲ್ ಹಾಕಿಕೊಂಡು ರೈತರಿಗೆ ಅವಮಾನ ಮಾಡಬೇಡಿ ಎಂದು ವ್ಯಂಗ್ಯವಾಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ರೈತಸಂಘದ ಅಧಿಕೃತ ರಾಜ್ಯಾಧ್ಯಕ್ಷ ಅಲ್ಲ. ಅವರೇ ಗುಂಪು ಕಟ್ಟಿಕೊಂಡು ಆ ಗುಂಪಿನ ನಾಯಕನಾಗಿದ್ದಾರೆ ಅಷ್ಟೇ. ದೆಹಲಿಯಲ್ಲಿ ರೈತರು ಚಳಿಯಲ್ಲಿ ಬೀದಿಗೆ ಬಂದು ಹೋರಾಟ ಮಾಡುತ್ತಿದ್ದಾರೆ. ಆದರೆ, ಕೋಡಿಹಳ್ಳಿ ರೈತರ ಹೋರಾಟಕ್ಕೆ ಬೆಂಬಲ‌ ನೀಡೋ ಬದಲು ಸಾರಿಗೆ ಮುಷ್ಕರದ ನೇತೃತ್ವ ವಹಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಾರಿಗೆ ನೌಕರರ ಬಗ್ಗೆ ಸಹಾನುಭೂತಿ ಇದೆ. ಆದರೆ, ಕೋಡಿಹಳ್ಳಿಯವರು ಮಾಡುತ್ತಿರುವುದು ಸರಿಯಲ್ಲ. ಅವರಿಗೆ ಪ್ರತಿಭಟನೆ ಮಾಡುವ ಹುಮ್ಮಸ್ಸಿದ್ದರೆ ಹಸಿರು ಟವೆಲ್​ ಬಿಟ್ಟು ರಾಜಕಾರಣಕ್ಕೆ ಸೇರಿಕೊಳ್ಳಲಿ. ಅವರು ರಾಜಕಾರಣಿಯಾದರೆ ಖಂಡಿತಾ ಯಶಸ್ವಿಯಾಗುತ್ತಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಅವರ ಕಾಲೆಳೆದಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ -ಕೋಡಿಹಳ್ಳಿ ಚಂದ್ರಶೇಖರ್ ಘೋಷಣೆ, ಯಾವುದೇ ಕ್ಷಣ ಬಸ್​ ರೈಟ್.. ರೈಟ್​!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್