ಮೋದಿ ಜೊತೆ ಪರೀಕ್ಷಾ ಪೇ ಚರ್ಚಾ: ಬಾಗಲಕೋಟೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಆಯ್ಕೆ

ಬಾಗಲಕೋಟೆ: ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೆ ಚರ್ಚಾ ಸಂವಾದಕ್ಕೆ ರಾಜ್ಯದಿಂದ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಹುನಗುಂದ ತಾಲೂಕಿನ ಚಿಕ್ಕಬಿದರಕಲ್ಲು ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. SSLC ಓದುತ್ತಿರುವ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ತಾರಿವಾಳ ಗ್ರಾಮದ ನಿವಾಸಿ. ಸಂವಾದ ಸಂಬಂಧ ಆನ್​ಲೈನ್​ನಲ್ಲಿ ಪೂರ್ಣಿಮಾ ಪ್ರಬಂಧ ಬರೆದಿದ್ದರು. ಇದೀಗ ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುವ ಅವಕಾಶ ಸರ್ಕಾರಿ ಶಾಲಾ ಬಾಲಕಿಗೆ ಲಭಿಸಿದೆ. ಜನವರಿ 16ರಂದು ವರದಿ ಮಾಡಿಕೊಳ್ಳುವಂತೆ ಕರ್ನಾಟಕ ಸಮಗ್ರ ಶಿಕ್ಷಣ ಕಾರ್ಯಕ್ರಮ […]

ಮೋದಿ ಜೊತೆ ಪರೀಕ್ಷಾ ಪೇ ಚರ್ಚಾ: ಬಾಗಲಕೋಟೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಆಯ್ಕೆ
ಸಾಧು ಶ್ರೀನಾಥ್​

Updated on: Jan 06, 2020 | 12:58 PM

ಬಾಗಲಕೋಟೆ: ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೆ ಚರ್ಚಾ ಸಂವಾದಕ್ಕೆ ರಾಜ್ಯದಿಂದ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಹುನಗುಂದ ತಾಲೂಕಿನ ಚಿಕ್ಕಬಿದರಕಲ್ಲು ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.

SSLC ಓದುತ್ತಿರುವ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ತಾರಿವಾಳ ಗ್ರಾಮದ ನಿವಾಸಿ. ಸಂವಾದ ಸಂಬಂಧ ಆನ್​ಲೈನ್​ನಲ್ಲಿ ಪೂರ್ಣಿಮಾ ಪ್ರಬಂಧ ಬರೆದಿದ್ದರು. ಇದೀಗ ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುವ ಅವಕಾಶ ಸರ್ಕಾರಿ ಶಾಲಾ ಬಾಲಕಿಗೆ ಲಭಿಸಿದೆ. ಜನವರಿ 16ರಂದು ವರದಿ ಮಾಡಿಕೊಳ್ಳುವಂತೆ ಕರ್ನಾಟಕ ಸಮಗ್ರ ಶಿಕ್ಷಣ ಕಾರ್ಯಕ್ರಮ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಲಕಿ ಬಗ್ಗೆ ಮಾಹಿತಿ ತುಂಬಿ ಇ-ಮೇಲ್ ಮಾಡುವಂತೆ ಶಾಲೆಯ ಮುಖ್ಯಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿನಿ ಬಗ್ಗೆ ಶಾಲೆಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.



Published On - 11:39 am, Mon, 6 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us