AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ; ಸದ್ದಿಲ್ಲದೆ ನಡೆಯುತ್ತಿದೆ ‌ಬಾಲ್ಯ ವಿವಾಹ; 2023 ರಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?

ಜೀವನ ಏನು ಎಂದು ಅರಿಯದೆ ಇರುವ ಬಾಲಕಿಯರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಮದುವೆ ಜೀವನಕ್ಕೆ ತಳ್ಳುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಸರಕಾರ ಎಷ್ಟೇ ಪ್ರಯತ್ನ ಪಟ್ಟರೂ ಬಾಲ್ಯ ವಿವಾಹ ಮಾತ್ರ ನಡೆಯುತ್ತಲೇ ಇವೆ. ಇನ್ನು ವಿಚಿತ್ರ ಅಂದರೆ, ಅಧಿಕಾರಿಗಳು ಒಂದು ಅಂಕಿ-ಸಂಖ್ಯೆ ಕೊಟ್ಟರೆ, ಮಕ್ಕಳ ಕಲ್ಯಾಣ ಸಮಿತಿ ಅಫಿಡವಿಟ್ ಅಂಕಿ ಸಂಖ್ಯೆಯೇ ಬೇರೆ ಇದೆ. 

ಬಾಗಲಕೋಟೆ; ಸದ್ದಿಲ್ಲದೆ ನಡೆಯುತ್ತಿದೆ ‌ಬಾಲ್ಯ ವಿವಾಹ; 2023 ರಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?
ಬಾಗಲಕೋಟೆ ಜಿಲ್ಲಾಪಂಚಾಯತಿ ಸಿಇಒ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 16, 2023 | 6:53 PM

ಬಾಗಲಕೋಟೆ, ಡಿ.16: ಜಿಲ್ಲೆಯು ಒಂದು ಕಾಲದಲ್ಲಿ ಹೆಚ್​​ಐವಿ(HIV)ಯಲ್ಲಿ ರಾಜ್ಯದಲ್ಲೇ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಕಾಲ ಕ್ರಮೇಣ ಆ ನಂಬರ್​ನಿಂದ ಮುಕ್ತವಾಗಿದೆ. ಆದರೆ, ಸದ್ಯ ಜಿಲ್ಲೆಯಲ್ಲಿ ಸದ್ದಿಲ್ಲದೆ ‌ಬಾಲ್ಯ ವಿವಾಹ (Child marriage) ಪ್ರಕರಣಗಳು ಹೆಚ್ಚುತ್ತಾ ಸಾಗುತ್ತಿವೆ. ಬಡ ಮಧ್ಯಮ ವರ್ಗ, ಹಿಂದುಳಿ ವರ್ಗ ಹಾಗೂ ಎಸ್ ಸಿ ಸಮುದಾಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹಗಳು ಕಂಡು ಬರುತ್ತಿವೆ. ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಇದನ್ನು ತಡೆಯುವುದಕ್ಕೆ‌ ಜಾಗೃತಿ ಜೊತೆಗೆ ಕಠಿಣ ಕಾನೂನು ಇದ್ದರೂ ಕೂಡ ಈ ಪಿಡುಗು ನಿಲ್ಲುತ್ತಿಲ್ಲ. ಬಾಗಲಕೋಟೆ ‌ಜಿಲ್ಲೆಯಲ್ಲಿ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿ ಪ್ರಕಾರ 2023 ರಲ್ಲೇ 79 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ.

2023 ರಲ್ಲೇ 79 ಬಾಲ್ಯ ವಿವಾಹ ಪ್ರಕರಣಗಳು

2023 ರಲ್ಲೇ 79 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದರೆ, ಅದರಲ್ಲಿ 57 ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ. ಆದರೂ ಸದ್ದಿಲ್ಲದೆ 16 ಬಾಲ್ಯ ವಿವಾಹಗಳು ನಡೆದಿವೆ. ಜೊತೆಗೆ 8 ಎಫ್ಐಆರ್‌ ಕೂಡ ಆಗಿವೆ. ಇನ್ನು ಕೋವಿಡ್ 2021 ರಲ್ಲಿ 91 ಬಾಲ್ಯವಿವಾಹ ತಡೆಯಲಾಗಿ, 15 ಬಾಲ್ಯವಿವಾಹ ನಡೆದಿತ್ತು.

ಇದನ್ನೂ ಓದಿ:Child marriage: ಬಾಲ್ಯ ವಿವಾಹಗಳಲ್ಲಿ ಕರ್ನಾಟಕಕ್ಕೆ ಅಗ್ರ ಮಣೆ: ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಕಳೆದ 5 ತಿಂಗಳಲ್ಲಿ 12 ಬಾಲ್ಯ ವಿವಾಹ!

ಬಾಗಲಕೋಟೆ ಜಿಲ್ಲೆಯಲ್ಲಿ ಮೊದಲು ಹೆಚ್​ಐವಿ ನಿಯಂತ್ರಣ ಮಾಡುವುದು ತಲೆ ನೋವಾಗಿತ್ತು. ಆದರೆ, ಹೆಚ್ ಐ ವಿ ಯಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಕಳಂಕವನ್ನು ಬಾಗಲಕೋಟೆ ಕಳೆದುಕೊಂಡಿದೆ. ಆದರೆ, ಈಗ ಬಾಲ್ಯವಿವಾಹ ತಲೆನೋವಾಗಿ ಪರಿಣಮಿಸುತ್ತಿದೆ. ಹದಿಹರೆಯದ ಬಾಲೆಯರನ್ನು ಸದ್ದಿಲ್ಲದೆ ಹಸೆಮಣಿಯಲ್ಲಿ ಕೂರಿಸಲಾಗುತ್ತಿದೆ.

ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಹೇಳುವ ಬಾಲ್ಯ ವಿವಾಹಕ್ಕೆ ಪ್ರಮುಖ ಮೂರು ಕಾರಣ

1 ಲಿಂಗತ್ವ ಅಸಮಾನತೆ

2 ಬಡತನ, ಪ್ರೇಮ ಪ್ರಕರಣ, ಸಂಬಂಧಿಕರಲ್ಲಿ ಮದುವೆ

3 ಬಾಲ್ಯ ವಿವಾಹ ಮಾಡಲು ಪೋಷಕರು ಮುಂದಾಗುತ್ತಿರುವುದು

ಜೀವನ ಅರಿಯುವ ಮುನ್ನವೇ ಮದುವೆ ಜೀವನಕ್ಕೆ ನೂಕಲಾಗುತ್ತಿದೆ. ಆದರೆ, ಇಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳಿದ ಅಂಕಿ-ಸಂಖ್ಯೆಗಳು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಹೇಳುವ ಅಂಕಿ-ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಇಲಾಖೆಯವರು 2023 ರ ಸಾಲಿನಲ್ಲಿ ಬರಿ 15 ಬಾಲ್ಯವಿವಾಹ ಆಗಿವೆ ಎಂದು ಹೇಳುತ್ತಾರೆ. ಆದರೆ, ಮಕ್ಕಳ ಕಲ್ಯಾಣ ಸಮಿತಿಯವರು 50 ಬಾಲ್ಯವಿವಾಹ ಆಗಿವೆ. ನಮಗೆ ಪೋಷಕರು ಅಫಿಡವಿಟ್ ಬರೆದುಕೊಟ್ಟಿದ್ದಾರೆ ಎನ್ನುತ್ತಾರೆ. ಜೊತೆಗೆ ಪ್ರತಿ ವರ್ಷ ಬಾಗಲಕೋಟೆ ಜಿಲ್ಲೆಯಲ್ಲಿ ಸರಾಸರಿ 50 ಬಾಲ್ಯವಿವಾಹ ನಡೆಯುತ್ತವೆ. ಇವು ಗರ್ಭಿಣಿ, ಹೆರಿಗೆ ಅವಸ್ಥೆಯಲ್ಲೂ ಬೆಳಕಿಗೆ ಬರುತ್ತಿವೆ ಇದು ವಿಪರ್ಯಾಸ ಎನ್ನುತ್ತಿದ್ದಾರೆ. ಒಟ್ಟಿನಲ್ಲಿ ಸದ್ದಿಲ್ಲದೆ ಪುಟ್ಟ ಗೌರಿಯರ ಮದುವೆ ನಡೆಯುತ್ತಿದ್ದು, ಇದು ಮಾರಕವಾಗಿದೆ. ಇದಕ್ಕೆ ಇನ್ನು ಹೆಚ್ಚಿನ ಕಣ್ಣಿಟ್ಟು ಬಾಲೆಯರನ್ನು ಕಾಪಾಡುವ ಕಾರ್ಯ ಆಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ