AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರ ಪಾಲಿಗೆ ಸಂತಸದ ಸುದ್ದಿ..ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ‘ಸರ್​ಎಂವಿ’ ಹೆಸರು

ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ಸರ್.​​ಎಂ. ವಿಶ್ವೇಶ್ವರಯ್ಯ ಅವರ ಹೆಸರಿಡಲು ಸರ್ಕಾರ ನಿರ್ಧರಿಸಿದೆ.

ಕನ್ನಡಿಗರ ಪಾಲಿಗೆ ಸಂತಸದ ಸುದ್ದಿ..ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ 'ಸರ್​ಎಂವಿ' ಹೆಸರು
ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ನಿರ್ಧರಿಸಲಾಗಿದೆ
guruganesh bhat
| Updated By: Lakshmi Hegde|

Updated on:Dec 05, 2020 | 7:19 PM

Share

ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿಯ ರೈಲು ನಿಲ್ದಾಣ ಇನ್ಮುಂದೆ ‘ಸರ್. ಎಂ. ವಿಶ್ವೇಶ್ವರಯ್ಯ ನಿಲ್ದಾಣ, ಬೆಂಗಳೂರು’ ಎಂಬ ಹೆಸರಿನಿಂದ ಗುರುತಿಸಿಕೊಳ್ಳಲಿದೆ.

ಈ ಕುರಿತು ವಿಶೇಷ ಕರ್ನಾಟಕ ರಾಜ್ಯಪತ್ರ ಹೊರಡಿಸಿರುವ ಸರ್ಕಾರ, ಸರ್. ಎಂ. ವಿಶ್ವೇಶ್ವರಯ್ಯ  ಹೆಸರನ್ನು ರೈಲು ನಿಲ್ದಾಣಕ್ಕೆ ಇಡಲು ಸಮ್ಮತಿ ಸೂಚಿಸಿದೆ. ಕನ್ನಡ, ಇಂಗ್ಲಿಷ್​  ಮತ್ತು ದೇವನಾಗರಿ ಲಿಪಿಗಳಲ್ಲಿ ಸರ್​ಎಂವಿ ಹೆಸರಿನ ನಾಮಫಲಕವನ್ನು ಅಳವಡಿಸಲಾಗುವುದು ಎಂದು ರಾಜ್ಯಪತ್ರ ತಿಳಿಸಿದೆ. ಇಂಗ್ಲೀಷಿನಲ್ಲಿ SIR. M. VISWESWARAYA TERMINAL, BENGALURU ಎಂದು ನಾಮಕರಣ ಮಾಡಲಾಗುವುದೆಂದು ಸರ್ಕಾರ ತಿಳಿಸಿದೆ.

ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಎಂದು ನಾಮಕರಣ ಮಾಡಲಾಗಿತ್ತು. ಅಲ್ಲದೇ, ಬೆಂಗಳೂರಿನ ‘ನಮ್ಮ ಮೆಟ್ರೋ’ವಿನ ಹಲವು ನಿಲ್ದಾಣಗಳಿಗೆ ಕನ್ನಡದ ಹೆಮ್ಮೆಯ ನಾಯಕರ ಹೆಸರಿಡಲಾಗಿತ್ತು. ಮೆಜೆಸ್ಟಿಕ್​ನ ನಾಡಪ್ರಭು ಕೆಂಪೇಗೌಡ ಬಸ್ ನಿಲ್ದಾಣ, ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರೋ ನಿಲ್ದಾಣ, ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳು ಪ್ರಯಾಣಿಕರ ಮನಸಲ್ಲಿ ಕರ್ನಾಟಕದ ಕುರಿತು ಹೆಮ್ಮೆ ಮೂಡಿಸುತ್ತಿವೆ.

ಐತಿಹಾಸಿಕ, ಭೌಗೋಳಿಕ ಹಿನ್ನೆಲೆಯೂ ಇದೆ.. ಇತಿಹಾಸ ಮತ್ತು ಭೌಗೋಳಿಕವಾಗಿಯೂ ರೈಲು, ಬಸ್ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಿಗೆ ವಿಶಿಷ್ಟ ಹೆಸರಿಡುವ ಸಂಪ್ರದಾಯ ರೂಡಿಯಲ್ಲಿದೆ. ಉದಾಹರಣೆಗೆ, ಬೆಂಗಳೂರಿನ ಕಂಟೇನ್ಮೆಂಟ್ ವಲಯದ ರೈಲು ನಿಲ್ದಾಣಕ್ಕೆ ದಂಡು ರೈಲು ನಿಲ್ದಾಣ ಎಂಬ ಹೆಸರಿದೆ. ಹಿಂದಿನ ಕಾಲದಲ್ಲಿ ದಂಡು ಬೆಂಗಳೂರು ನಗರದ ಹೊರವಲಯವಾಗಿತ್ತು. ರೈಲು ನಿಲ್ದಾಣವೂ ಇದೇ ಪ್ರದೇಶದಲ್ಲಿತ್ತು. ಸೈನಿಕರು ನಗರದ ಕಾವಲಿಗೋಸ್ಕರ ದಂಡುವಿನ ಬಳಿ ವಸತಿ ಹೂಡುತ್ತಿದ್ದರು. ಹೀಗಾಗಿ, ದಂಡು ರೈಲು ನಿಲ್ದಾಣ ಎಂಬ ಹೆಸರನ್ನೇ ರೈಲು ನಿಲ್ದಾಣಕ್ಕೆ ಇಡಲಾಗಿದೆ. ಇದೀಗ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ಸರ್ಕಾರ ನಿರ್ಧರಿಸುವುದು ಕನ್ನಡಿಗರಲ್ಲಿ ಸಂತಸ ಮೂಡಿಸಿದೆ.

Published On - 6:57 pm, Sat, 5 December 20

ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ