AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಓವನ್ ಸ್ಫೋಟ, ಬೇಕರಿ ಮಾಲೀಕ ಸ್ಥಳದಲ್ಲೇ ಸಾವು

ಉಡುಪಿ: ತಾಲೂಕಿನ ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಅವಘಡ ಸಂಭವಿಸಿದ್ದು, ಬೇಕರಿ ಮಾಲೀಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೇಕರಿಲ್ಲಿನ ದೊಡ್ಡ ಗಾತ್ರದ ಓವನ್‌ ಸ್ಫೋಟದಿಂದ ಈ ದುರ್ಘಟನೆ ನಡೆದಿದೆ. ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಓವನ್ ಬಾಗಿಲು ಬಡಿದು ದೇಹ ಛಿದ್ರ: ಓವನ್ ನಿರ್ವಹಣೆಗೆಂದು ಮಾಲೀಕ ರಾಬರ್ಟ್ ಅದರ ಸಮೀಪ ಹೋದಾಗ ದಿಢೀರನೆ ಸ್ಫೋಟ ಸಂಭವಿಸಿದೆ. ಓವನ್ ಬಾಗಿಲು ಬಡಿದು ಅವರ ದೇಹ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ದೌಡಾಯಿಸಿದ್ದಾರೆ.

ಉಡುಪಿ: ಓವನ್ ಸ್ಫೋಟ, ಬೇಕರಿ ಮಾಲೀಕ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 10, 2020 | 9:43 AM

Share

ಉಡುಪಿ: ತಾಲೂಕಿನ ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಅವಘಡ ಸಂಭವಿಸಿದ್ದು, ಬೇಕರಿ ಮಾಲೀಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೇಕರಿಲ್ಲಿನ ದೊಡ್ಡ ಗಾತ್ರದ ಓವನ್‌ ಸ್ಫೋಟದಿಂದ ಈ ದುರ್ಘಟನೆ ನಡೆದಿದೆ. ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ.

ಓವನ್ ಬಾಗಿಲು ಬಡಿದು ದೇಹ ಛಿದ್ರ: ಓವನ್ ನಿರ್ವಹಣೆಗೆಂದು ಮಾಲೀಕ ರಾಬರ್ಟ್ ಅದರ ಸಮೀಪ ಹೋದಾಗ ದಿಢೀರನೆ ಸ್ಫೋಟ ಸಂಭವಿಸಿದೆ. ಓವನ್ ಬಾಗಿಲು ಬಡಿದು ಅವರ ದೇಹ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ದೌಡಾಯಿಸಿದ್ದಾರೆ.

Published On - 9:32 am, Mon, 10 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು