AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ‘16 ಅಂಗಡಿ Bakery’ ಮಾಲೀಕ ಸೋಂಕಿಗೆ ಕೊನೆಯುಸಿರು

ಬೆಂಗಳೂರು: ಶೇಷಾದ್ರಿಪುರದಲ್ಲಿ 16 ಅಂಗಡಿ ಬೇಕರಿ ಅಂತಾನೇ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಶ್ರೀನಿವಾಸ ಬ್ರಾಹ್ಮಿನ್ಸ್​ ಬೇಕರಿ ಅಂಗಡಿಯ ಮಾಲೀಕರು ಸೋಂಕಿಗೆ ಬಲಿಯಾಗಿದ್ದಾರೆ. ಶೇಷಾದ್ರಿಪುರ ಮುಖ್ಯ ರಸ್ತೆಯಲ್ಲಿದ್ದ ಬೇಕರಿಯ 49 ವರ್ಷದ ಮಾಲೀಕರಿಗೆ ಜುಲೈ 18ರಂದು ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದವು. ಆದರೆ, ಕೊವಿಡ್ ರಿಪೋರ್ಟ್ ಬರುವ ಮುನ್ನ ಯಾವ ಆಸ್ಪತ್ರೆಯಲ್ಲೂ ಇವರನ್ನ ದಾಖಲಿಸಿಕೊಂಡಿರಲಿಲ್ಲ. ಬಳಿಕ ಕಾರ್ಪೊರೇಟರ್ ಸಂಪತ್ ಕುಮಾರ್ ಅವರ ನೆರವು ಪಡೆದು ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,ಗುಣವಾಗ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಅವರ […]

ಪ್ರತಿಷ್ಠಿತ ‘16 ಅಂಗಡಿ Bakery’ ಮಾಲೀಕ ಸೋಂಕಿಗೆ ಕೊನೆಯುಸಿರು
KUSHAL V
| Edited By: |

Updated on:Jul 27, 2020 | 10:13 PM

Share

ಬೆಂಗಳೂರು: ಶೇಷಾದ್ರಿಪುರದಲ್ಲಿ 16 ಅಂಗಡಿ ಬೇಕರಿ ಅಂತಾನೇ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಶ್ರೀನಿವಾಸ ಬ್ರಾಹ್ಮಿನ್ಸ್​ ಬೇಕರಿ ಅಂಗಡಿಯ ಮಾಲೀಕರು ಸೋಂಕಿಗೆ ಬಲಿಯಾಗಿದ್ದಾರೆ.

ಶೇಷಾದ್ರಿಪುರ ಮುಖ್ಯ ರಸ್ತೆಯಲ್ಲಿದ್ದ ಬೇಕರಿಯ 49 ವರ್ಷದ ಮಾಲೀಕರಿಗೆ ಜುಲೈ 18ರಂದು ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದವು. ಆದರೆ, ಕೊವಿಡ್ ರಿಪೋರ್ಟ್ ಬರುವ ಮುನ್ನ ಯಾವ ಆಸ್ಪತ್ರೆಯಲ್ಲೂ ಇವರನ್ನ ದಾಖಲಿಸಿಕೊಂಡಿರಲಿಲ್ಲ. ಬಳಿಕ ಕಾರ್ಪೊರೇಟರ್ ಸಂಪತ್ ಕುಮಾರ್ ಅವರ ನೆರವು ಪಡೆದು ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,ಗುಣವಾಗ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಅವರ ಪತ್ನಿಗೂ ಕೂಡ ಕೋವಿಡ್ ಲಕ್ಷಣಗಳಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ 50 ವರ್ಷಗಳಿಂದಲೂ ನಡೆಯುತ್ತಿದ್ದ ಈ ಬೇಕರಿ ತನ್ನ ವೆಜ್ ಪಫ್ಸ್​, ಬಿಸ್ಕೆಟ್ಸ್ ಮತ್ತು ಇತರೆ ತಿನಿಸುಗಳಿಗೆ ಭಾರೀ ಫೇಮಸ್ ಅಗಿತ್ತು. ಹೀಗಾಗಿ, ಈ ಬೇಕರಿಗೆ ಯಲಹಂಕ ಹಾಗೂ ನೆಲಮಂಗಲದಷ್ಟು ದೂರ ಏರಿಯಾಗಳಿಂದ ಗ್ರಾಹಕರು ಬರ್ತಿದ್ರು. ಸರತಿ ಸಾಲಿನಲ್ಲಿ ನಿಂತು ತಿನಿಸು ಕೊಳ್ಳುತ್ತಿದ್ರು. ಇದೀಗ, ಇವರ ಬೇಕರಿಯಲ್ಲಿ ತಿಂಡಿ ತಿನಿಸು ತೆಗೆದುಕೊಂಡು ಹೋಗಿ ತಿಂದವರಿಗೆ ಸೋಂಕಿನ ಭೀತಿ ಶುರುವಾಗಿದೆ.

Published On - 1:23 pm, Mon, 27 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್