Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ‘16 ಅಂಗಡಿ Bakery’ ಮಾಲೀಕ ಸೋಂಕಿಗೆ ಕೊನೆಯುಸಿರು

ಬೆಂಗಳೂರು: ಶೇಷಾದ್ರಿಪುರದಲ್ಲಿ 16 ಅಂಗಡಿ ಬೇಕರಿ ಅಂತಾನೇ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಶ್ರೀನಿವಾಸ ಬ್ರಾಹ್ಮಿನ್ಸ್​ ಬೇಕರಿ ಅಂಗಡಿಯ ಮಾಲೀಕರು ಸೋಂಕಿಗೆ ಬಲಿಯಾಗಿದ್ದಾರೆ. ಶೇಷಾದ್ರಿಪುರ ಮುಖ್ಯ ರಸ್ತೆಯಲ್ಲಿದ್ದ ಬೇಕರಿಯ 49 ವರ್ಷದ ಮಾಲೀಕರಿಗೆ ಜುಲೈ 18ರಂದು ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದವು. ಆದರೆ, ಕೊವಿಡ್ ರಿಪೋರ್ಟ್ ಬರುವ ಮುನ್ನ ಯಾವ ಆಸ್ಪತ್ರೆಯಲ್ಲೂ ಇವರನ್ನ ದಾಖಲಿಸಿಕೊಂಡಿರಲಿಲ್ಲ. ಬಳಿಕ ಕಾರ್ಪೊರೇಟರ್ ಸಂಪತ್ ಕುಮಾರ್ ಅವರ ನೆರವು ಪಡೆದು ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,ಗುಣವಾಗ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಅವರ […]

ಪ್ರತಿಷ್ಠಿತ ‘16 ಅಂಗಡಿ Bakery’ ಮಾಲೀಕ ಸೋಂಕಿಗೆ ಕೊನೆಯುಸಿರು
Follow us
KUSHAL V
| Updated By:

Updated on:Jul 27, 2020 | 10:13 PM

ಬೆಂಗಳೂರು: ಶೇಷಾದ್ರಿಪುರದಲ್ಲಿ 16 ಅಂಗಡಿ ಬೇಕರಿ ಅಂತಾನೇ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಶ್ರೀನಿವಾಸ ಬ್ರಾಹ್ಮಿನ್ಸ್​ ಬೇಕರಿ ಅಂಗಡಿಯ ಮಾಲೀಕರು ಸೋಂಕಿಗೆ ಬಲಿಯಾಗಿದ್ದಾರೆ.

ಶೇಷಾದ್ರಿಪುರ ಮುಖ್ಯ ರಸ್ತೆಯಲ್ಲಿದ್ದ ಬೇಕರಿಯ 49 ವರ್ಷದ ಮಾಲೀಕರಿಗೆ ಜುಲೈ 18ರಂದು ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದವು. ಆದರೆ, ಕೊವಿಡ್ ರಿಪೋರ್ಟ್ ಬರುವ ಮುನ್ನ ಯಾವ ಆಸ್ಪತ್ರೆಯಲ್ಲೂ ಇವರನ್ನ ದಾಖಲಿಸಿಕೊಂಡಿರಲಿಲ್ಲ. ಬಳಿಕ ಕಾರ್ಪೊರೇಟರ್ ಸಂಪತ್ ಕುಮಾರ್ ಅವರ ನೆರವು ಪಡೆದು ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,ಗುಣವಾಗ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಅವರ ಪತ್ನಿಗೂ ಕೂಡ ಕೋವಿಡ್ ಲಕ್ಷಣಗಳಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ 50 ವರ್ಷಗಳಿಂದಲೂ ನಡೆಯುತ್ತಿದ್ದ ಈ ಬೇಕರಿ ತನ್ನ ವೆಜ್ ಪಫ್ಸ್​, ಬಿಸ್ಕೆಟ್ಸ್ ಮತ್ತು ಇತರೆ ತಿನಿಸುಗಳಿಗೆ ಭಾರೀ ಫೇಮಸ್ ಅಗಿತ್ತು. ಹೀಗಾಗಿ, ಈ ಬೇಕರಿಗೆ ಯಲಹಂಕ ಹಾಗೂ ನೆಲಮಂಗಲದಷ್ಟು ದೂರ ಏರಿಯಾಗಳಿಂದ ಗ್ರಾಹಕರು ಬರ್ತಿದ್ರು. ಸರತಿ ಸಾಲಿನಲ್ಲಿ ನಿಂತು ತಿನಿಸು ಕೊಳ್ಳುತ್ತಿದ್ರು. ಇದೀಗ, ಇವರ ಬೇಕರಿಯಲ್ಲಿ ತಿಂಡಿ ತಿನಿಸು ತೆಗೆದುಕೊಂಡು ಹೋಗಿ ತಿಂದವರಿಗೆ ಸೋಂಕಿನ ಭೀತಿ ಶುರುವಾಗಿದೆ.

Published On - 1:23 pm, Mon, 27 July 20

ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್