AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿನಾಡಿನಲ್ಲಿ ಕೊರೊನಾ ಕಂಟ್ರೋಲ್‌ಗೆ ಹೊಸ ಪ್ರಯೋಗ

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಕೊರೊನಾ ವೈರಸ್‌ ದಿನೇದಿನೆ ಸ್ಫೋಟಗೊಳ್ಳುತ್ತಲೇ ಇದೆ. ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದ್ದು, ಈವರೆಗೆ 34 ಜನ ಬಲಿಯಾಗಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಷ್ಟೇ ಪ್ರಯತ್ನಿಸಿದ್ರೂ ಕಂಟ್ರೋಲ್‌ಗೇ ಬರ್ತಿಲ್ಲ. ಹೀಗಾಗಿ ಜಿಲ್ಲಾಡಳಿತ ರಾಜ್ಯದಲ್ಲೇ ಮೊದಲ ಬಾರಿಗೆ ವೇಗವಾಗಿ ಕೊರೊನಾ ಸೋಂಕು ಪತ್ತೆ ಹಚ್ಚೋಕೆ ಱಪಿಡ್‌ ಆ್ಯಂಟಿಜೆನ್‌ ಕಿಟ್‌ಗಳನ್ನ ಬಳಸೋಕೆ ಮುಂದಾಗಿದೆ. ಕೊರೊನಾ ವೈರಸ್ ಕಂಟ್ರೋಲ್‌ಗೆ ಹೊಸ ಪ್ರಯೋಗ..! ಹೌದು, ಇದುವರೆಗೆ ದೆಹಲಿಯಲ್ಲಿ ಮಾತ್ರ ಱಪಿಡ್‌ ಆ್ಯಂಟಿಜೆನ್ ಕಿಟ್‌ಗಳನ್ನ ಬಳಕೆ ಮಾಡಲಾಗುತ್ತಿತ್ತು. ಇದರಿಂದ […]

ಗಣಿನಾಡಿನಲ್ಲಿ ಕೊರೊನಾ ಕಂಟ್ರೋಲ್‌ಗೆ ಹೊಸ ಪ್ರಯೋಗ
KUSHAL V
| Updated By: ಸಾಧು ಶ್ರೀನಾಥ್​|

Updated on:Jul 04, 2020 | 10:40 AM

Share

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಕೊರೊನಾ ವೈರಸ್‌ ದಿನೇದಿನೆ ಸ್ಫೋಟಗೊಳ್ಳುತ್ತಲೇ ಇದೆ. ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದ್ದು, ಈವರೆಗೆ 34 ಜನ ಬಲಿಯಾಗಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಷ್ಟೇ ಪ್ರಯತ್ನಿಸಿದ್ರೂ ಕಂಟ್ರೋಲ್‌ಗೇ ಬರ್ತಿಲ್ಲ. ಹೀಗಾಗಿ ಜಿಲ್ಲಾಡಳಿತ ರಾಜ್ಯದಲ್ಲೇ ಮೊದಲ ಬಾರಿಗೆ ವೇಗವಾಗಿ ಕೊರೊನಾ ಸೋಂಕು ಪತ್ತೆ ಹಚ್ಚೋಕೆ ಱಪಿಡ್‌ ಆ್ಯಂಟಿಜೆನ್‌ ಕಿಟ್‌ಗಳನ್ನ ಬಳಸೋಕೆ ಮುಂದಾಗಿದೆ.

ಕೊರೊನಾ ವೈರಸ್ ಕಂಟ್ರೋಲ್‌ಗೆ ಹೊಸ ಪ್ರಯೋಗ..! ಹೌದು, ಇದುವರೆಗೆ ದೆಹಲಿಯಲ್ಲಿ ಮಾತ್ರ ಱಪಿಡ್‌ ಆ್ಯಂಟಿಜೆನ್ ಕಿಟ್‌ಗಳನ್ನ ಬಳಕೆ ಮಾಡಲಾಗುತ್ತಿತ್ತು. ಇದರಿಂದ ಕೇವಲ 30 ನಿಮಿಷದೊಳಗೆ ಕೊವಿಡ್ ಪರೀಕ್ಷೆಯ ರಿಪೋರ್ಟ್ ಸಿಗುತ್ತದೆ. ಸಾಮಾನ್ಯವಾಗಿ ಲ್ಯಾಬ್‌ಗಳಲ್ಲಿ ಒಬ್ಬರಿಗೆ ಕೊವಿಟ್ ಟೆಸ್ಟ್ ಮಾಡಸಿ ವರದಿ ಸಿಗಲು ಸುಮಾರು 8 ತಾಸುಗಳು ಬೇಕಾಗುತ್ತೆ. ಆದ್ರೆ ಈ ಕಿಟ್‌ನಲ್ಲಿ ಕೇವಲ 30 ನಿಮಿಷದಲ್ಲೇ ರಿಪೋರ್ಟ್ ಕೈಸೇರುತ್ತೆ. ಹಾಗಾಗಿ ಜಿಲ್ಲಾಡಳಿತ ಱಪಿಡ್‌ ಆ್ಯಂಟಿಜೆನ್ ಕಿಟ್‌ ಬಳಕೆಗೆ ಮುಂದಾಗಿದೆ.

ಈಗಾಗಲೇ 10 ಸಾವಿರ ಕಿಟ್‌ಗಳನ್ನ ತರಿಸಲಾಗಿದ್ದು, ಟೆಸ್ಟಿಂಗ್‌ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ವಿಮ್ಸ್ ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಕಿಟ್‌ಗಳನ್ನ ಬಳಕೆ ಮಾಡಲಾಗ್ತಿದೆ.

ಈ ಕಿಟ್​ನ ಬಳಕೆಯಿಂದ ಶೀಘ್ರವೇ ವರದಿ ಸಿಗುವ ಕಾರಣ ಕೂಡಲೇ ಸೋಂಕಿತರನ್ನ ಕೊವಿಡ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಬಹುದು. ಒಂದು ಕಿಟ್‌ನಿಂದ ಸುಮಾರು 25 ಜನರಿಗೆ ಕೊರೊನಾ ಟೆಸ್ಟ್ ಮಾಡುವ ಸಾಧ್ಯತೆಯಿದೆ. ಸದ್ಯಕ್ಕೆ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಜಿಲ್ಲೆಯಲ್ಲಿ ಸರ್ವೆ ನಡೆಸ್ತಿದ್ದಾರೆ. ಸೋಂಕಿನ ಲಕ್ಷಣಗಳು ಇರೋರು ಹಾಗೂ ವೃದ್ಧರು ಜೊತೆಗೆ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿರೋರನ್ನ ಪತ್ತೆ ಹಚ್ಚಿ ಅವರಿಗೆ ಈ ಱಪಿಡ್‌ ಆ್ಯಂಟಿಜೆನ್‌ ಕಿಟ್‌ ಮೂಲಕ ಟೆಸ್ಟಿಂಗ್‌ ಮಾಡಲಾಗುತ್ತಿದೆ. ಹೆಚ್ಚೆಚ್ಚು ಟೆಸ್ಟ್‌ಗಳನ್ನ ಮಾಡೋ ಮೂಲಕ ಕೊರೊನಾ ಮಹಾಮಾರಿಯನ್ನ ಹತೋಟಿಗೆ ತರಲು ಜಿಲ್ಲಾಡಳಿತ ಮುಂದಾಗಿದೆ.

Published On - 7:33 am, Sat, 4 July 20

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ