AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಬೆಂಗಳೂರಿನ ಗಡಿ ಬಂದ್ ಆಗಲ್ಲ..

ಬೆಂಗಳೂರು: ರಾಜಧಾನಿ ಗಡಿ ಬಂದ್.. ಹೋದಲ್ಲಿ ಬಂದಲ್ಲಿ, ಕುಂತಲ್ಲಿ-ನಿಂತಲೆಲ್ಲಾ ಇದೇ ವಿಷ್ಯ ಚರ್ಚೆಯಾಗ್ತಿದೆ. ರಾಜಧಾನಿಯ ಪ್ರತಿ ರಸ್ತೆಯಲ್ಲೂ ಗಂಟು ಮೂಟೆ ಕಟ್ಕೊಂಡು ಹೋಗೋರೇ ಕಣ್ಣಿಗೆ ಬೀಳ್ತಾರೆ. ಬೆಂಗಳೂರು ಸಹವಾಸ ಸಾಕಪ್ಪಾ. ಸಾಕು. ಜೀವ ಉಳಿಸಿಕೊಳ್ಳೋದೇ ಬೇಕು ಅಂತಾ ಸ್ವಂತ ಊರು ಸೇರ್ಕೊಳ್ತಿದ್ದಾರೆ. ಕೊರೊನಾ ಅಟ್ಟಹಾಸ ಬೆದರಿ ಮನೆಗಳನ್ನ ಖಾಲಿ ಮಾಡ್ತಿದ್ದಾರೆ. ಇದ್ರ ನಡ್ವೆ ಮತ್ತೆ ಲಾಕ್​ಡೌನ್ ಆಗುತ್ತೆ. ಬೆಂಗಳೂರು ಗಡಿಗಳನ್ನ ಬಂದ್ ಮಾಡಲಾಗುತ್ತೆ ಅನ್ನೋದು ಜನರ ಆತಂಕವನ್ನ ಮತ್ತಷ್ಟು ಹೆಚ್ಚಿಸಿದೆ. ಸುಳ್ಳು ವದಂತಿಗಳಿಗೆ ತೆರೆ ಎಳೆದ ರಾಜ್ಯ […]

ರಾಜಧಾನಿ ಬೆಂಗಳೂರಿನ ಗಡಿ ಬಂದ್ ಆಗಲ್ಲ..
ಆಯೇಷಾ ಬಾನು
| Edited By: |

Updated on:Jul 08, 2020 | 11:53 AM

Share

ಬೆಂಗಳೂರು: ರಾಜಧಾನಿ ಗಡಿ ಬಂದ್.. ಹೋದಲ್ಲಿ ಬಂದಲ್ಲಿ, ಕುಂತಲ್ಲಿ-ನಿಂತಲೆಲ್ಲಾ ಇದೇ ವಿಷ್ಯ ಚರ್ಚೆಯಾಗ್ತಿದೆ. ರಾಜಧಾನಿಯ ಪ್ರತಿ ರಸ್ತೆಯಲ್ಲೂ ಗಂಟು ಮೂಟೆ ಕಟ್ಕೊಂಡು ಹೋಗೋರೇ ಕಣ್ಣಿಗೆ ಬೀಳ್ತಾರೆ. ಬೆಂಗಳೂರು ಸಹವಾಸ ಸಾಕಪ್ಪಾ. ಸಾಕು. ಜೀವ ಉಳಿಸಿಕೊಳ್ಳೋದೇ ಬೇಕು ಅಂತಾ ಸ್ವಂತ ಊರು ಸೇರ್ಕೊಳ್ತಿದ್ದಾರೆ. ಕೊರೊನಾ ಅಟ್ಟಹಾಸ ಬೆದರಿ ಮನೆಗಳನ್ನ ಖಾಲಿ ಮಾಡ್ತಿದ್ದಾರೆ. ಇದ್ರ ನಡ್ವೆ ಮತ್ತೆ ಲಾಕ್​ಡೌನ್ ಆಗುತ್ತೆ. ಬೆಂಗಳೂರು ಗಡಿಗಳನ್ನ ಬಂದ್ ಮಾಡಲಾಗುತ್ತೆ ಅನ್ನೋದು ಜನರ ಆತಂಕವನ್ನ ಮತ್ತಷ್ಟು ಹೆಚ್ಚಿಸಿದೆ.

ಸುಳ್ಳು ವದಂತಿಗಳಿಗೆ ತೆರೆ ಎಳೆದ ರಾಜ್ಯ ಸರ್ಕಾರ! ರಾಜಧಾನಿ ಬೆಂಗಳೂರು ಸ್ಮಶಾನದಂತಾಗಿದೆ. ನಿತ್ಯ ಸಾಲು ಸಾಲು ಮಂದಿ ಉಸಿರು ಚೆಲ್ಲಿ ಸಾವಿನ ಮನೆ ಸೇರ್ತಿದ್ದಾರೆ. ಇದ್ರ ನಡ್ವೆ ಕೊರೊನಾ ಹೆಚ್ಚಾಗಿರೋದ್ರಿಂದ ಲಾಕ್​ಡೌನ್ ಮಾಡಲಾಗುತ್ತೆ. ಮತ್ತೆ ಬೆಂಗಳೂರಿನ ಗಡಿಗಳಿಗೆಲ್ಲಾ ಬಂದ್ ಆಗುತ್ತವೆ. ಬೆಂಗಳೂರಿಂದ ಯಾರು ಹೊರಗೆ ಹೋಗೋಕಾಗಲ್ಲ, ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಬರೋಕಾಗಲ್ಲ ಅನ್ನೋ ವದಂತಿ ಎಲ್ಲೆಡೆ ಹರಿದಾಡ್ತಿದೆ.

ಆದ್ರೆ ಈ ಎಲ್ಲಾ ವದಂತಿಗಳನ್ನ ಸರ್ಕಾರ ತಳ್ಳಿ ಹಾಕಿದೆ. ಸರ್ಕಾರದ ಮಟ್ಟದಲ್ಲಿ ಆ ರೀತಿ ಬೆಂಗಳೂರನ್ನ ಬಂದ್ ಮಾಡುವ, ಅಂತರ್ ರಾಜ್ಯ, ಅಂತರ್ ಜಿಲ್ಲೆ ಸಂಚಾರ ಬಂದ್ ಮಾಡೋ ನಿರ್ಧಾರವಾಗಿಲ್ಲ. ಈ ಬಗ್ಗೆ ಯಾವುದೇ ಯೋಚನೆ ಇಲ್ಲ ಅಂತಾ ಸರ್ಕಾರದ ಹಿರಿಯ ಅಧಿಕಾರಿಗಳೇ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇನ್ನು ಬೆಂಗಳೂರನ್ನ ದಿಢೀರ್ ಬಂದ್ ಮಾಡಿದ್ರೆ ಜನಜೀವನ ನಡೆಸೋದೇ ಕಷ್ಟವಾಗಿಬಿಡುತ್ತೆ. ಜಿಲ್ಲೆಗಳಿಂದ ಬರುವ ವಹಿವಾಟುಗಳೆಲ್ಲವೂ ಸ್ಥಗಿತಗೊಳ್ಳುತ್ತವೆ. ಈಗಾಗ್ಲೇ ಆರ್ಥಿಕ ಹೊಡೆತಕ್ಕೆ ಸಿಲುಕಿ ನಲುಗಿರೋ ಜನ್ರ ಜೀವನ ಮತ್ತಷ್ಟು ಖರಾಬ್ ಆಗಲಿದೆ. ತುತ್ತಿನ ಚೀಲ ತುಂಬಿಸೋಕೆ ಪರದಾಡೋ ಪರಿಸ್ಥಿತಿ ನಿರ್ಮಾಣವಾಗಬಹುದು. ಇದೆಲ್ಲಾ ಆತಂಕದಿಂದ ಸರ್ಕಾರ ಯಾವುದೇ ಬಂದ್ ಇಲ್ಲ ಅಂತಾ ಕ್ಲಿಯರ್ ಆಗಿ ಹೇಳಿದೆ.

Published On - 7:27 am, Wed, 8 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ