AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್​ ತಪರಾಕಿ ಬಳಿಕ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್​​ಗೆ ಎಸಿಬಿ ಫುಲ್ ಗ್ರಿಲ್!

Bangalore DC: ಖುದ್ದು ಭ್ರಷ್ಟಾಚಾರ ನಿಗ್ರಹ ದಳವೇ ಭ್ರಷ್ಟರ ಕೂಪವಾಗಿದೆ ಎಂದು ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತ ಎಸಿಬಿ ಅಧಿಕಾರಿಗಳ ತಂಡವು ಬೆಂಗಳೂರು ಜಿಲ್ಲಾಧಿಕಾರಿ ವಿರುದ್ಧದ ತನಿಖೆಯನ್ನು ಚುರುಕುಗೊಳಿಸಿದೆ. ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಂಜುನಾಥ್ ವಿಚಾರಣೆ ನಡೆದಿದೆ.

ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್​ ತಪರಾಕಿ ಬಳಿಕ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್​​ಗೆ ಎಸಿಬಿ ಫುಲ್ ಗ್ರಿಲ್!
ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್
TV9 Web
| Edited By: |

Updated on:Jun 30, 2022 | 5:35 PM

Share

ಬೆಂಗಳೂರು: ಖುದ್ದು ಭ್ರಷ್ಟಾಚಾರ ನಿಗ್ರಹ ದಳವೇ ಭ್ರಷ್ಟರ ಕೂಪವಾಗಿದೆ ಎಂದು ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತ ಎಸಿಬಿ ಅಧಿಕಾರಿಗಳ ತಂಡವು ಬೆಂಗಳೂರು ಜಿಲ್ಲಾಧಿಕಾರಿ ವಿರುದ್ಧದ ತನಿಖೆಯನ್ನು ಚುರುಕುಗೊಳಿಸಿದೆ.

ಬೆಂಗಳೂರು ಜಿಲ್ಲಾಧಿಕಾರಿಗೆ ಫುಲ್ ಎಸಿಬಿ ಗ್ರಿಲ್: ಬೆಂಗಳೂರಿನ ಎಸಿಬಿ ಕಚೇರಿಯಲ್ಲಿಇಬ್ಬರು ಡಿವೈಎಸ್ಪಿ ಗಳ ತಂಡವು ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ವಿಚಾರಣೆ ನಡೆಸುತ್ತಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಇನ್ನೂ ಮುಂದುವರಿದಿದೆ. ಇಡೀ ಪ್ರಕರಣ ಸಂಬಂಧ ವಿಸ್ತೃತ ತನಿಖೆ ನಡೆಸಿ ಜುಲೈ 4 ರಂದು ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.

ಡಿವೈಎಸ್ ಪಿ ಬಸವರಾಜ್ ಮಗದುಮ್ ಅವರು ಭ್ರಷ್ಟಾಚಾರ ಪ್ರಕರಣದ ಸಂಬಂಧ ಡಿಸಿ ಮಂಜುನಾಥ್ ರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಡಿ ಸಿ ಮಂಜುನಾಥ್ ವಿಚಾರಣೆ ನಡೆದಿದೆ. ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಅವರು ದಾಳಿಗೆ ಸಂಬಂಧಿಸಿದಂತೆ ಎಸ್ ಪಿ ಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಎಸಿಬಿ ಎಸ್ ಪಿ ಗಳಾದ ಉಮಾ ಪ್ರಶಾಂತ್, ಹರೀಶ್ ಪಾಂಡೆ, ಯತೀಶ್ ಚಂದ್ರ ಎಡಿಜಿಪಿಗೆ ಮಾಹಿತಿ ಒದಗಿಸುತ್ತಿದ್ದಾರೆ. ದಾಳಿ ವೇಳೆ ಹಾಗೂ ಆ ಬಳಿಕ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಜಮೀನು ಸ್ವಾಮ್ಯದ ವಿಷಯದಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಲಂಚ ಸ್ವೀಕರಿಸುವಾಗಲೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಉಪ ತಹಶೀಲ್ದಾರ್ ಮಹೇಶ್ ಮತ್ತು ಸಹಾಯಕ ಸಿಬ್ಬಂದಿಯನ್ನು ಬಂಧಿಸಿದ್ದರು.

ಏನಿದು ಪ್ರಕರಣ? ಅಜಂ ಪಾಷಾ ಎಂಬುವವರಿಂದ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಮಂಜುನಾಥ್ ವಿರುದ್ಧ ಕೇಳಿ ಬಂದಿತ್ತು. ಆನೇಕಲ್ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನಿಗಾಗಿ ಗಲಾಟೆಯಾಗಿತ್ತು. ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯ ಡಿಸಿ ಕೋರ್ಟಿಗೆ ಬಂದಿತ್ತು. ಪರವಾಗಿ ಆದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದಾಗಿ ದೂರುದಾರ ಆರೋಪಿಸಿದ್ದರು. ಜಿಲ್ಲಾಧಿಕಾರಿ ಮಂಜುನಾಥ್‌ 5 ಲಕ್ಷ ಲಂಚ ಪಡೆದಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು ತನ್ನ ಅಧೀನ ಅಧಿಕಾರಿಯ ಮೂಲಕ ಹಣ ಪಡೆದಿದ್ದ ಆರೋಪಿಸಲಾಗಿತ್ತು.

ಮೇ 21ರಂದು ಡಿ.ಸಿ ಕಚೇರಿ ಮೇಲೆ ದಾಳಿ ನಡೆಸಿದ್ದ ಎಸಿಬಿ5 ಲಕ್ಷ ಹಣದ ಸಮೇತ ಉಪ ತಹಶಿಲ್ದಾರ್ ಮಹೇಶ್ ಹಾಗೂ ಗುತ್ತಿಗೆ ನೌಕರ ಚೇತನ್ ಅವರನ್ನು ಬಂಧಿಸಿತ್ತು. ಬಳಿಕ ಎಫ್‌ಐಆರ್‌ ದಾಖಲಿಸಿ ಎಸಿಬಿ ತನಿಖೆ ಕೈಗೊಂಡಿತ್ತು. ತನ್ನ ವಿರುದ್ಧದ ಎಫ್‌ಐಆರ್‌ ಹಾಗೂ ಎಸಿಬಿ ತನಿಖೆ ರದ್ದುಪಡಿಸುವಂತೆ ಕೋರಿ ಅರ್ಜಿ ಮಂಜುನಾಥ್ ಅರ್ಜಿ ಸಲ್ಲಿಸಿದ್ದರು.

ಕೋರ್ಟ್ ನಿಗಾದಲ್ಲಿ ಪಿಎಸ್ಐ ನೇಮಕಾತಿ ಹಗರಣ ತನಿಖೆ ಹೊಣೆಯನ್ನು ಸಿಐಡಿ ಡಿಜಿಪಿಗೆ ವಹಿಸಿದ ರಾಜ್ಯ ಹೈಕೋರ್ಟ್

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಹಲವರ ಮೇಲೆ ಆರೋಪಗಳಿವೆ. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳಿದ್ದಾರೆ. ಹೀಗಾಗಿ ಸಮರ್ಪಕ ತನಿಖೆ ನಡೆಯುವ ಅವಶ್ಯಕತೆಯಿದೆ. ನಿಮ್ಮ ಇಲಾಖೆಯ ಗೌರವ ಉಳಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ. ಹಾಗಾಗಿ ಪಿಎಸ್ಐ ನೇಮಕಾತಿ ಹಗರಣದಲ್ಲಿ‌ ಸಮರ್ಪಕ ತನಿಖೆ ನಡೆಸಿ ಎಂದು ಸಿಐಡಿ ಡಿಜಿಪಿ ಪಿ.ಎಸ್. ಸಂಧು ಅವರಿಗೆ ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ.

ಪಿಎಸ್ಐ ನೇಮಕದಲ್ಲೇ ಭ್ರಷ್ಟಾಚಾರ ಗಂಭೀರ ವಿಚಾರವಾಗಿದೆ. ಸತ್ಯಸಂಗತಿ ತನಿಖೆಯಿಂದ ಹೊರಬೀಳಬೇಕು. ಕೋರ್ಟ್ ಪ್ರಕರಣದ ತನಿಖೆಯ ನಿಗಾ ವಹಿಸಲಿದೆ. ಪ್ರಕರಣದಲ್ಲಿ ಸಚಿವರಾಗಿರಲೀ, ಅಧಿಕಾರಿಗಳಾಗಿರಲಿ ಕ್ರಮ ಕೈಗೊಳ್ಳಬೇಕು ಎಂದು ಸಿಐಡಿ ಡಿಜಿ ಪಿ.ಎಸ್. ಸಂಧುರಿಗೆ ಹೈಕೋರ್ಟ್ ತಾಕೀತು ಮಾಡಿದೆ. ಜುಲೈ 7ಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಸಬೇಕು ಎಂದೂ ಹೈಕೋರ್ಟ್​ ಖಡಕ್ ಆಗಿ ಸೂಚಿಸಿದೆ.

ಇದನ್ನೂ ಓದಿ:

ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು

Published On - 5:31 pm, Thu, 30 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ