AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜೋರಾದ ಪ್ರತಿಭಟನೆ ಕಾವು; ಟ್ರಾಫಿಕ್​ ಕಿರಿಕಿರಿಯಿಂದ ಹೈರಾಣಾದ ಜನಸಾಮಾನ್ಯರು

Traffic Jam: ಸದ್ಯ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಜಮಾಯಿಸುತ್ತಿದ್ದು ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ.

ಬೆಂಗಳೂರಿನಲ್ಲಿ ಜೋರಾದ ಪ್ರತಿಭಟನೆ ಕಾವು; ಟ್ರಾಫಿಕ್​ ಕಿರಿಕಿರಿಯಿಂದ ಹೈರಾಣಾದ ಜನಸಾಮಾನ್ಯರು
ಸಂಗ್ರಹ ಚಿತ್ರ
Skanda
|

Updated on:Mar 02, 2021 | 1:44 PM

Share

ಬೆಂಗಳೂರು: ಮೇಲಿಂದ ಮೇಲೆ ಪ್ರತಿಭಟನೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಇಂದು ಮೂರು ಪ್ರತ್ಯೇಕ ಪ್ರತಿಭಟನೆಗಳ ಬಿಸಿ ತಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಡೆಸುತ್ತಿರುವ ಪ್ರತಿಭಟನೆ, ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪಕ್ಷದ ಪ್ರತಿಭಟನೆ ಮತ್ತು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಬೆಂಗಳೂರಿನ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿ ಟ್ರಾಫಿಕ್ ಜಾಮ್​ನಿಂದ ಜನಸಾಮಾನ್ಯರು ಕಿರಿಕಿರಿ ಅನುಭವಿಸುವಂತಾಗಿದೆ.

ಸದ್ಯ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಜಮಾಯಿಸುತ್ತಿದ್ದು ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಇದಕ್ಕೂ ಮುನ್ನ ಶೇಷಾದ್ರಿ ರಸ್ತೆಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ನೂರಾರು ಕಾರು ಬೈಕ್ ಗಳು ನಿಂತಲ್ಲೇ ನಿಲ್ಲಬೇಕಾಗಿ ಬಂತು. ಇದಕ್ಕಾಗಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಮೇಲಿನ ಸಂಚಾರವನ್ನು ರೇಸ್ ಕೋರ್ಸ್ ರೋಡ್ ಕಡೆಗೆ ಡೈವರ್ಟ್ ಮಾಡಿದ ಪೋಲಿಸರು ಸಂಚಾರ ನಿಯಂತ್ರಿಸಲು ಹರಸಾಹಸಪಟ್ಟರು.

ಇನ್ನೊಂದೆಡೆ, ಗ್ಯಾಸ್ ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಮಹಿಳಾ ಘಟಕದವರು ನೆಲದ ಮೇಲೆ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನೆಲದ ಮೇಲೆ ಇಡ್ಲಿ, ಸಾಂಬಾರ್ ಬೆರೆಸಿ ಊಟ ಮಾಡಿದ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ:

ಇಂದು ಬೆಂಗಳೂರಿಗೆ ತಟ್ಟಲಿದೆ ಪ್ರತಿಭಟನೆ ಬಿಸಿ.. ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್‌

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

Published On - 1:13 pm, Tue, 2 March 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ