AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜೋರಾದ ಪ್ರತಿಭಟನೆ ಕಾವು; ಟ್ರಾಫಿಕ್​ ಕಿರಿಕಿರಿಯಿಂದ ಹೈರಾಣಾದ ಜನಸಾಮಾನ್ಯರು

Traffic Jam: ಸದ್ಯ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಜಮಾಯಿಸುತ್ತಿದ್ದು ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ.

ಬೆಂಗಳೂರಿನಲ್ಲಿ ಜೋರಾದ ಪ್ರತಿಭಟನೆ ಕಾವು; ಟ್ರಾಫಿಕ್​ ಕಿರಿಕಿರಿಯಿಂದ ಹೈರಾಣಾದ ಜನಸಾಮಾನ್ಯರು
ಸಂಗ್ರಹ ಚಿತ್ರ
Follow us
Skanda
|

Updated on:Mar 02, 2021 | 1:44 PM

ಬೆಂಗಳೂರು: ಮೇಲಿಂದ ಮೇಲೆ ಪ್ರತಿಭಟನೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಇಂದು ಮೂರು ಪ್ರತ್ಯೇಕ ಪ್ರತಿಭಟನೆಗಳ ಬಿಸಿ ತಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಡೆಸುತ್ತಿರುವ ಪ್ರತಿಭಟನೆ, ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪಕ್ಷದ ಪ್ರತಿಭಟನೆ ಮತ್ತು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಬೆಂಗಳೂರಿನ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿ ಟ್ರಾಫಿಕ್ ಜಾಮ್​ನಿಂದ ಜನಸಾಮಾನ್ಯರು ಕಿರಿಕಿರಿ ಅನುಭವಿಸುವಂತಾಗಿದೆ.

ಸದ್ಯ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಜಮಾಯಿಸುತ್ತಿದ್ದು ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಇದಕ್ಕೂ ಮುನ್ನ ಶೇಷಾದ್ರಿ ರಸ್ತೆಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ನೂರಾರು ಕಾರು ಬೈಕ್ ಗಳು ನಿಂತಲ್ಲೇ ನಿಲ್ಲಬೇಕಾಗಿ ಬಂತು. ಇದಕ್ಕಾಗಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಮೇಲಿನ ಸಂಚಾರವನ್ನು ರೇಸ್ ಕೋರ್ಸ್ ರೋಡ್ ಕಡೆಗೆ ಡೈವರ್ಟ್ ಮಾಡಿದ ಪೋಲಿಸರು ಸಂಚಾರ ನಿಯಂತ್ರಿಸಲು ಹರಸಾಹಸಪಟ್ಟರು.

ಇನ್ನೊಂದೆಡೆ, ಗ್ಯಾಸ್ ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಮಹಿಳಾ ಘಟಕದವರು ನೆಲದ ಮೇಲೆ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನೆಲದ ಮೇಲೆ ಇಡ್ಲಿ, ಸಾಂಬಾರ್ ಬೆರೆಸಿ ಊಟ ಮಾಡಿದ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ:

ಇಂದು ಬೆಂಗಳೂರಿಗೆ ತಟ್ಟಲಿದೆ ಪ್ರತಿಭಟನೆ ಬಿಸಿ.. ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್‌

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

Published On - 1:13 pm, Tue, 2 March 21

‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ