AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜೋರಾದ ಪ್ರತಿಭಟನೆ ಕಾವು; ಟ್ರಾಫಿಕ್​ ಕಿರಿಕಿರಿಯಿಂದ ಹೈರಾಣಾದ ಜನಸಾಮಾನ್ಯರು

Traffic Jam: ಸದ್ಯ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಜಮಾಯಿಸುತ್ತಿದ್ದು ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ.

ಬೆಂಗಳೂರಿನಲ್ಲಿ ಜೋರಾದ ಪ್ರತಿಭಟನೆ ಕಾವು; ಟ್ರಾಫಿಕ್​ ಕಿರಿಕಿರಿಯಿಂದ ಹೈರಾಣಾದ ಜನಸಾಮಾನ್ಯರು
ಸಂಗ್ರಹ ಚಿತ್ರ
Skanda
|

Updated on:Mar 02, 2021 | 1:44 PM

Share

ಬೆಂಗಳೂರು: ಮೇಲಿಂದ ಮೇಲೆ ಪ್ರತಿಭಟನೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಇಂದು ಮೂರು ಪ್ರತ್ಯೇಕ ಪ್ರತಿಭಟನೆಗಳ ಬಿಸಿ ತಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಡೆಸುತ್ತಿರುವ ಪ್ರತಿಭಟನೆ, ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪಕ್ಷದ ಪ್ರತಿಭಟನೆ ಮತ್ತು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಬೆಂಗಳೂರಿನ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿ ಟ್ರಾಫಿಕ್ ಜಾಮ್​ನಿಂದ ಜನಸಾಮಾನ್ಯರು ಕಿರಿಕಿರಿ ಅನುಭವಿಸುವಂತಾಗಿದೆ.

ಸದ್ಯ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಜಮಾಯಿಸುತ್ತಿದ್ದು ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಇದಕ್ಕೂ ಮುನ್ನ ಶೇಷಾದ್ರಿ ರಸ್ತೆಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ನೂರಾರು ಕಾರು ಬೈಕ್ ಗಳು ನಿಂತಲ್ಲೇ ನಿಲ್ಲಬೇಕಾಗಿ ಬಂತು. ಇದಕ್ಕಾಗಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಮೇಲಿನ ಸಂಚಾರವನ್ನು ರೇಸ್ ಕೋರ್ಸ್ ರೋಡ್ ಕಡೆಗೆ ಡೈವರ್ಟ್ ಮಾಡಿದ ಪೋಲಿಸರು ಸಂಚಾರ ನಿಯಂತ್ರಿಸಲು ಹರಸಾಹಸಪಟ್ಟರು.

ಇನ್ನೊಂದೆಡೆ, ಗ್ಯಾಸ್ ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಮಹಿಳಾ ಘಟಕದವರು ನೆಲದ ಮೇಲೆ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನೆಲದ ಮೇಲೆ ಇಡ್ಲಿ, ಸಾಂಬಾರ್ ಬೆರೆಸಿ ಊಟ ಮಾಡಿದ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ:

ಇಂದು ಬೆಂಗಳೂರಿಗೆ ತಟ್ಟಲಿದೆ ಪ್ರತಿಭಟನೆ ಬಿಸಿ.. ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್‌

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

Published On - 1:13 pm, Tue, 2 March 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು