AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಸ ಸಂಗ್ರಹ ಶುಲ್ಕ ಮತ್ತಷ್ಟು ದುಬಾರಿ: ಒಪ್ಪುವರೇ ಜನ BBMP ನಿರ್ಣಯವಾ?

ಹಸಿ ಕಸ-ಒಣ ಕಸ ಎಂಬುವುದು ಬರಿ ಇಲಾಖೆಯಲ್ಲಿನ ನಿರ್ಧಾರಕ್ಕೆ ಮಾತ್ರ ಸೀಮಿತವಾಗಿದೆ. ಪೌರ ಕಾರ್ಮಿಕರಿಗೆ ಇವುಗಳ ಬಗ್ಗೆ ಮಾಹಿತಿ ಇಲ್ಲ. ಮೊದಲು ಅವರಿಗೆ ಈ ಬಗ್ಗೆ ಮಾಹಿತಿ ನೀಡುವುದು ಅಗತ್ಯ. ಇಲ್ಲವಾದರೆ ಶುಲ್ಕ ಪಾವತಿಗೆ ಅರ್ಥವೇ ಇರುವುದಿಲ್ಲ

ಬೆಂಗಳೂರಿನಲ್ಲಿ ಕಸ ಸಂಗ್ರಹ ಶುಲ್ಕ ಮತ್ತಷ್ಟು ದುಬಾರಿ: ಒಪ್ಪುವರೇ ಜನ BBMP ನಿರ್ಣಯವಾ?
preethi shettigar
| Edited By: |

Updated on:Dec 02, 2020 | 9:54 AM

Share

ಬೆಂಗಳೂರು: ಬೆಂಗಳೂರಿನ ಬಹುತೇಕ ರಸ್ತೆಗಳು ಇನ್ನೂ ಕೂಡ ತನ್ನ ಸ್ವಚ್ಛತೆ ಕಾಪಾಡಿಕೊಂಡು ಬಂದಿದೆ ಎಂದರೆ ಅದಕ್ಕೆ ಕಾರಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP). ಸಾವಿರಾರು ಪೌರ ಕಾರ್ಮಿಕರು ಈ ಕೆಲಸದಲ್ಲಿ ನಿರತರಾಗಿದ್ದು, ಕಸ ವಿಲೇವಾರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂತಹ ಕಸ ಸಂಗ್ರಹಕ್ಕೆ ಈಗ ಸಾರ್ವಜನಿಕರು ಹೆಚ್ಚು ಶುಲ್ಕವನ್ನು ಪಾವತಿ ಮಾಡಬೇಕಿದೆ.

ಬೆಂಗಳೂರಿನ ಪತ್ರಿಯೊಂದು ಮನೆಗೂ ತೆರಳಿ ಕಸವನ್ನು ಸಂಗ್ರಹಿಸುವುದಷ್ಟೇ ಅಲ್ಲದೆ ಅವುಗಳಲ್ಲಿ ಹಸಿ ಕಸಒಣ ಕಸವನ್ನು ಬೇರ್ಪಡಿಸುವ ಕಾರ್ಯವನ್ನು ಪೌರಕಾರ್ಮಿಕರು ಮಾಡುತ್ತಾರೆ. ಈ ನಿಟ್ಟಿನಲ್ಲಿ ಅವರ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ಬಿಬಿಎಂಪಿ ತೆಗೆದುಕೊಂಡಿದ್ದು, ಕಸ ಸಂಗ್ರಹದ ಶುಲ್ಕವನ್ನು 200ಕ್ಕೆ ಹೆಚ್ಚಿಸಿದೆ.

‘ಜನವರಿಯಿಂದ ಪ್ರತಿ ತಿಂಗಳು 200 ರೂ.ಯಂತೆ ಸಾರ್ವಜನಿಕರು ಶುಲ್ಕವನ್ನು ಪಾವತಿಸಬೇಕಾಗಿದ್ದು, ಖಾಸಗಿ ಒಡೆತನಕ್ಕೆ ಒಳಪಟ್ಟ ಸಂಸ್ಥೆಗಳು ಕಸ ಸಂಗ್ರಹಣೆಗೆ 10,000 ರೂ. ಪಾವತಿಸಬೇಕು. ಬೆಸ್ಕಾಂನ ವಿದ್ಯುತ್ ಸೇವೆಗೆ ಶುಲ್ಕ ಪಾವತಿಸುವಂತೆ ನಮ್ಮ ಕಸ ವಿಲೇವಾರಿ ಸೇವೆಗೂ ಮಾಸಿಕ ಶುಲ್ಕ ಪಾವತಿಸಬೇಕಾಗುತ್ತದೆ. ವಿದ್ಯುತ್ ಶುಲ್ಕದ ಜೊತೆಗೆ ಜನವರಿಯಿಂದ ಕಸದ ಶುಲ್ಕವು ಪಾವತಿಯಾಗುತ್ತದೆ. ಆದರೆ ಶುಲ್ಕದ ಹಣ ಬಿಬಿಎಂಪಿ ಖಾತೆಗೆ ಹೋಗುತ್ತದೆ’ ಎಂದು ಎಲ್​ಡಬ್ಲ್ಯೂಎಂ ವಿಶೇಷ ಆಯುಕ್ತರಾದ ರಣದೀಪ್ ಹೇಳಿದರು.

ಜನರ ಅಭಿಪ್ರಾಯ: ‘ಹಸಿ ಕಸ ಮತ್ತು ಒಣ ಕಸದ ಪ್ರತ್ಯೇಕ ವಿಲೇವಾರಿ ಇರುತ್ತದೆ. ಆದರೆ ನಿಗದಿಯಾದ ದಿನಕ್ಕೆ ಸರಿಯಾಗಿ ಕಸದ ಸಂಗ್ರಹಣೆಗೆ ಬರುವುದಿಲ್ಲ. ಶುಲ್ಕದ ಪಾವತಿಯ ನಂತರದಲ್ಲಾದರೂ ಇಂತಹ ಸಮಸ್ಯೆಗಳು ಬರದಿದ್ದರೆ ಸಾಕು ಎನ್ನುತ್ತಾರೆ’ ಬೆಂಗಳೂರಿನ ಹುಳಿಮಾವು ರಸ್ತೆಯ ನಿವಾಸಿ ಸ್ವಾತಿ.

‘ಕಸದ ಸಂಗ್ರಹಣೆಯೇ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಹಸಿ ಕಸಒಣ ಕಸ ಎಂಬುವುದು ಬರಿ ಇಲಾಖೆಯಲ್ಲಿನ ನಿರ್ಧಾರಕ್ಕೆ ಮಾತ್ರ ಸೀಮಿತವಾಗಿದೆ. ಕಸ ಸಂಗ್ರಹಣೆಗೆ ಬರುವ ಪೌರ ಕಾರ್ಮಿಕರಿಗೆ ಇವುಗಳ ಬಗ್ಗೆ ಮಾಹಿತಿ ಇಲ್ಲ. ಮೊದಲು ಅವರಿಗೆ ಈ ಬಗ್ಗೆ ಮಾಹಿತಿ ನೀಡುವುದು ಅಗತ್ಯ. ಇಲ್ಲವಾದರೆ ಶುಲ್ಕ ಪಾವತಿಗೆ ಅರ್ಥವೇ ಇರುವುದಿಲ್ಲ’ ಎನ್ನತ್ತಾರೆ ಯಲಹಂಕ ವಾರ್ಡ್.1 ರ ನಿವಾಸಿ ಹರೀಶ್.

Published On - 11:55 am, Wed, 25 November 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?