AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೇಂದ್ರ ವಿವಿ ಪರೀಕ್ಷೆ ದಿನಾಂಕ ಪ್ರಕಟ: ಬಾಕಿ ಉಳಿದ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಹೀಗಿದೆ

ಅಂತಿಮ ಸ್ನಾತಕೋತ್ತರ ಪರೀಕ್ಷೆ ಆಗಸ್ಟ್ 2ನೇ ವಾರದಲ್ಲಿ ನಡೆಯುತ್ತದೆ. 2021-22ನೇ ಶೈಕ್ಷಣಿಕ ವರ್ಷ ಅಕ್ಟೋಬರ್ 1ರಿಂದ ಆರಂಭ ಆಗಲಿದೆ ಎಂದು ಬೆಂಗಳೂರು ಕೇಂದ್ರ ವಿವಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಬೆಂಗಳೂರು ಕೇಂದ್ರ ವಿವಿ ಪರೀಕ್ಷೆ ದಿನಾಂಕ ಪ್ರಕಟ: ಬಾಕಿ ಉಳಿದ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಹೀಗಿದೆ
ಬೆಂಗಳೂರು ವಿಶ್ವವಿದ್ಯಾಲಯ
TV9 Web
| Updated By: ganapathi bhat|

Updated on:Jul 20, 2021 | 7:36 PM

Share

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಪರೀಕ್ಷೆ ದಿನಾಂಕ ಪ್ರಕಟವಾಗಿದೆ. ಬಾಕಿ ಉಳಿದ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಇಂದು (ಜುಲೈ 20) ಬಿಡುಗಡೆ ಮಾಡಲಾಗಿದೆ. ಈ ಮೊದಲು, ಕೊರೊನಾ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಗಳನ್ನ ಮುಂದೂಡಲಾಗಿತ್ತು. ಮುಂದೂಡಲಾದ ಪದವಿ ಪರೀಕ್ಷೆಗಳ ವೇಳಾಪಟ್ಟಿ ಈ ಬಿಡುಗಡೆ ಮಾಡಲಾಗಿದೆ.

ವೇಳಾಪಟ್ಟಿಯ ವಿವರದಂತೆ ಆಗಸ್ಟ್ 10 ರಿಂದ ಪದವಿ ಪರೀಕ್ಷೆಗಳು ಆರಂಭ ಆಗಲಿವೆ. ಆಗಸ್ಟ್ 10 ರಿಂದ ಆಗಸ್ಟ್ 31ರ ಒಳಗೆ ಬಾಕಿ ಉಳಿದ ಪದವಿ ಪರೀಕ್ಷೆಗಳು ನಡೆಯಲಿವೆ. ಆಗಸ್ಟ್ 28ರಿಂದ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭ ಆಗಲಿದೆ. ಸಪ್ಟೆಂಬರ್ 20ರ ಒಳಗೆ ಫಲಿತಾಂಶ ಪ್ರಕಟಿಸಿ ಸ್ನಾತಕೋತ್ತರ ಪದವಿಗೆ ಅನುವು ಮಾಡಿಕೊಡಲಾಗುವ ಬಗ್ಗೆ ತಿಳಿಸಲಾಗಿದೆ.

ಬಾಕಿ ಉಳಿದ ಸ್ನಾತಕೋತ್ತರ ಪರೀಕ್ಷೆ ಆಗಸ್ಟ್ 10ರಿಂದ ಆರಂಭ ಆಗಲಿದ್ದು, ಸ್ನಾತಕೋತ್ತರ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಫಲಿತಾಂಶವನ್ನು ಆಂತರಿಕ ಅಂಕಗಳು ಹಾಗೂ ಹಿಂದಿನ ಸೆಮಿಸ್ಟರ್ ಅಂಕ ಆಧರಿಸಿ ನೀಡಲಾಗುವುದು. ಅಂತಿಮ ಸ್ನಾತಕೋತ್ತರ ಪರೀಕ್ಷೆ ಆಗಸ್ಟ್ 2ನೇ ವಾರದಲ್ಲಿ ನಡೆಯುತ್ತದೆ. 2021-22ನೇ ಶೈಕ್ಷಣಿಕ ವರ್ಷ ಅಕ್ಟೋಬರ್ 1ರಿಂದ ಆರಂಭ ಆಗಲಿದೆ ಎಂದು ಬೆಂಗಳೂರು ಕೇಂದ್ರ ವಿವಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಕೂಡ ಇಂದು ಪ್ರಕಟವಾಗಿದೆ. ಆಗಸ್ಟ್​ 19 ರಿಂದ ಸಪ್ಟೆಂಬರ್​ 3ರ ವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಪರೀಕ್ಷೆ ತಿರಸ್ಕರಿಸಿದ ವಿದ್ಯಾರ್ಥಿಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಜುಲೈ 30ರ ಒಳಗೆ ಮಾಹಿತಿ ಪರೀಕ್ಷಾ ಅರ್ಜಿಗಳನ್ನು ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಜುಲೈ 31ರ ಒಳಗೆ ಪರೀಕ್ಷಾ ಅರ್ಜಿಗಳನ್ನು ಸಲ್ಲಿಸಬೇಕು. ಕೇಂದ್ರ ಕಚೇರಿಗೆ ತಲುಪಿಸಲು ಆಗಸ್ಟ್ 2 ಕೊನೆಯ ದಿನ ಎಂದು ತಿಳಿಸಲಾಗಿದೆ.

ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಜುಲೈ 30 ಒಳಗೆ ಮಾಹಿತಿ ಪಡೆಯಬಹುದು ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಲಿಕ ವೇಳಾಪಟ್ಟಿ ಪ್ರಕಟವಾಗಿದೆ. ದಿನಾಂಕ 19/08/2021 ರಿಂದ 03/09/2021 ರ ವರೆಗೆ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ; ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

Karnataka PUC Exams 2021: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

(Bangalore University VV Degree Exam Time Table 2021 Details here GBD)

Published On - 7:28 pm, Tue, 20 July 21

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್