AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆಯಲ್ಲಿ ತಹಶೀಲ್ದಾರ್​ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್​ ಸಾವು

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ […]

ಬಂಗಾರಪೇಟೆಯಲ್ಲಿ ತಹಶೀಲ್ದಾರ್​ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್​ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 09, 2020 | 7:30 PM

Share

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ ಪೊಲೀಸರು ತಕ್ಷಣ ಬಂಧಿಸಿದ್ದಾರೆ.

 25 ಲಕ್ಷ ರೂ. ಪರಿಹಾರ, ಒಬ್ಬರಿಗೆ ನೌಕರಿ -ಯಡಿಯೂರಪ್ಪ ಮುಖ್ಯಮಂತ್ರಿ ಯಡಿಯೂರಪ್ಪ ಬಂಗಾರಪೇಟೆ ತಹಶೀಲ್ದಾರ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಕಚೇರಿಯಿಂದ ಬಿಡುಗಡೆಯಾದ ಮಾಧ್ಯಮ ಪ್ರಕಟಣೆಯಲ್ಲಿ ಮೃತನ ಕುಟುಂಬಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಪೊಲೀಸ್​ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಸಹ ಸೂಚಿಸಿದ್ದಾರೆ. ಜೊತೆಗೆ, ಮೃತ ತಹಶೀಲ್ದಾರ್ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕುಟುಂಬದ ಸದಸ್ಯರೊಬ್ಬರಿಗೆ ನೌಕರಿ ನೀಡಲು ಸೂಚನೆ ನೀಡಿದ್ದಾರೆ.

Published On - 5:50 pm, Thu, 9 July 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ