AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆಯಲ್ಲಿ ತಹಶೀಲ್ದಾರ್​ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್​ ಸಾವು

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ […]

ಬಂಗಾರಪೇಟೆಯಲ್ಲಿ ತಹಶೀಲ್ದಾರ್​ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್​ ಸಾವು
ಸಾಧು ಶ್ರೀನಾಥ್​
| Edited By: |

Updated on:Jul 09, 2020 | 7:30 PM

Share

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ ಪೊಲೀಸರು ತಕ್ಷಣ ಬಂಧಿಸಿದ್ದಾರೆ.

 25 ಲಕ್ಷ ರೂ. ಪರಿಹಾರ, ಒಬ್ಬರಿಗೆ ನೌಕರಿ -ಯಡಿಯೂರಪ್ಪ ಮುಖ್ಯಮಂತ್ರಿ ಯಡಿಯೂರಪ್ಪ ಬಂಗಾರಪೇಟೆ ತಹಶೀಲ್ದಾರ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಕಚೇರಿಯಿಂದ ಬಿಡುಗಡೆಯಾದ ಮಾಧ್ಯಮ ಪ್ರಕಟಣೆಯಲ್ಲಿ ಮೃತನ ಕುಟುಂಬಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಪೊಲೀಸ್​ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಸಹ ಸೂಚಿಸಿದ್ದಾರೆ. ಜೊತೆಗೆ, ಮೃತ ತಹಶೀಲ್ದಾರ್ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕುಟುಂಬದ ಸದಸ್ಯರೊಬ್ಬರಿಗೆ ನೌಕರಿ ನೀಡಲು ಸೂಚನೆ ನೀಡಿದ್ದಾರೆ.

Published On - 5:50 pm, Thu, 9 July 20

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ