AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ರೈತನ ಹೆಸರಲ್ಲಿ ಸಾಲಮನ್ನಾ! ಬ್ಯಾಂಕ್ ಅಧಿಕಾರಿಯಿಂದ ಹಣ ದುರುಪಯೋಗ?

ಮೈಸೂರು: ಮೃತ ರೈತನ ಹೆಸರಿನಲ್ಲಿ 2 ಬಾರಿ ಬೆಳೆ ಸಾಲ ಮತ್ತು 2 ಬಾರಿ ಸಾಲಮನ್ನಾ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಬ್ಯಾಂಕ್‌ನ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ. ಕಾರ್ಯನಿರ್ವಹಣಾಧಿಕಾರಿ ಸಿದ್ದೇಗೌಡ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಮೃತ ರೈತನ ಹೆಸರಿನಲ್ಲಿ ವಂಚನೆ ಮಾಡಿದ್ದಾನೆ. 2017-18ರ ಆಡಿಟ್ ರಿಪೋರ್ಟ್‌ನಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಂಘದ ಕೆಲ ನಿರ್ದೇಶಕರು ಮತ್ತು ಸ್ಥಳೀಯರಿಂದ ಸಿದ್ದೇಗೌಡನ […]

ಮೃತ ರೈತನ ಹೆಸರಲ್ಲಿ ಸಾಲಮನ್ನಾ! ಬ್ಯಾಂಕ್ ಅಧಿಕಾರಿಯಿಂದ ಹಣ ದುರುಪಯೋಗ?
ಸಾಧು ಶ್ರೀನಾಥ್​
|

Updated on:Jan 31, 2020 | 11:06 AM

Share

ಮೈಸೂರು: ಮೃತ ರೈತನ ಹೆಸರಿನಲ್ಲಿ 2 ಬಾರಿ ಬೆಳೆ ಸಾಲ ಮತ್ತು 2 ಬಾರಿ ಸಾಲಮನ್ನಾ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಬ್ಯಾಂಕ್‌ನ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ.

ಕಾರ್ಯನಿರ್ವಹಣಾಧಿಕಾರಿ ಸಿದ್ದೇಗೌಡ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಮೃತ ರೈತನ ಹೆಸರಿನಲ್ಲಿ ವಂಚನೆ ಮಾಡಿದ್ದಾನೆ. 2017-18ರ ಆಡಿಟ್ ರಿಪೋರ್ಟ್‌ನಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಂಘದ ಕೆಲ ನಿರ್ದೇಶಕರು ಮತ್ತು ಸ್ಥಳೀಯರಿಂದ ಸಿದ್ದೇಗೌಡನ ಅವ್ಯವಹಾರದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಬ್ಯಾಂಕ್‌ನಿಂದ ರೈತರಿಗೆ 3 ಲಕ್ಷದವರೆಗೆ ಬಡ್ಡಿರಹಿತ ಬೆಳೆ ಸಾಲ, 1,258 ರೈತರಿಗೆ ಹಣ ನೀಡಿರುವುದಾಗಿ ಉಲ್ಲೇಖ ಮಾಡಲಾಗಿತ್ತು. 130 ರೈತರಿಗೆ 2 ಬಾರಿ ಸಾಲ ನೀಡಿದ್ದಾರೆ ಎಂಬ ಆರೋಪ ಮತ್ತು ಮೃತ ರೈತನ ಹೆಸರಿನಲ್ಲೂ ಸಾಲ‌ ಮಂಜೂರು ಮಾಡಿರುವ ಆರೋಪ ಸಿದ್ದೇಗೌಡನ ಮೇಲಿದೆ. ದೊಡ್ಡೇಗೌಡ ಬಿನ್ ಸಿದ್ದೇಗೌಡ ಹೆಸರಿನಲ್ಲಿ ದಾಖಲೆ ಸೃಷ್ಟಿ ಮಾಡಲಾಗಿದೆ.

ದೊಡ್ಡೇಗೌಡ 2017ರ ಫೆಬ್ರವರಿಯಲ್ಲಿ ಮೃತಪಟ್ಟಿದ್ದಾರೆ. ದೊಡ್ಡೇಗೌಡನಿಗೆ 2017ರ ಜೂನ್‌ನಲ್ಲಿ ಸಾಲ ಮಂಜೂರು ಮಾಡಿ ಬಳಿಕ 2018ರ ಮೇ ತಿಂಗಳಿನಲ್ಲಿ ದೊಡ್ಡೇಗೌಡನ ಸಾಲಮನ್ನಾ ಮಾಡಲಾಗಿದೆ. ಸ್ಥಳೀಯ ವ್ಯಕ್ತಿ ತೇಜಸ್ವಿ ವಿ.ಹೆಚ್ ಗೌಡ ದಾಖಲೆಗಳ ಸಮೇತ ಸಿದ್ದೇಗೌಡನ ವಿರುದ್ಧ ದೂರು ದಾಖಲು ಮಾಡಿದ್ದಾರೆ. ದೂರು ಆಧರಿಸಿ ತನಿಖೆ ನಡೆಸಿ ವರದಿ ನೀಡುವಂತೆ ಅಪೆಕ್ಸ್ ಬ್ಯಾಂಕ್,‌ ನಬಾರ್ಡ್‌ನಿಂದ ಡಿಸಿಸಿ ಬ್ಯಾಂಕ್‌ಗೆ ಸೂಚನೆ ನೀಡಲಾಗಿದೆ.

Published On - 10:21 am, Fri, 31 January 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?