AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ರೈತನ ಹೆಸರಲ್ಲಿ ಸಾಲಮನ್ನಾ! ಬ್ಯಾಂಕ್ ಅಧಿಕಾರಿಯಿಂದ ಹಣ ದುರುಪಯೋಗ?

ಮೈಸೂರು: ಮೃತ ರೈತನ ಹೆಸರಿನಲ್ಲಿ 2 ಬಾರಿ ಬೆಳೆ ಸಾಲ ಮತ್ತು 2 ಬಾರಿ ಸಾಲಮನ್ನಾ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಬ್ಯಾಂಕ್‌ನ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ. ಕಾರ್ಯನಿರ್ವಹಣಾಧಿಕಾರಿ ಸಿದ್ದೇಗೌಡ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಮೃತ ರೈತನ ಹೆಸರಿನಲ್ಲಿ ವಂಚನೆ ಮಾಡಿದ್ದಾನೆ. 2017-18ರ ಆಡಿಟ್ ರಿಪೋರ್ಟ್‌ನಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಂಘದ ಕೆಲ ನಿರ್ದೇಶಕರು ಮತ್ತು ಸ್ಥಳೀಯರಿಂದ ಸಿದ್ದೇಗೌಡನ […]

ಮೃತ ರೈತನ ಹೆಸರಲ್ಲಿ ಸಾಲಮನ್ನಾ! ಬ್ಯಾಂಕ್ ಅಧಿಕಾರಿಯಿಂದ ಹಣ ದುರುಪಯೋಗ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 31, 2020 | 11:06 AM

Share

ಮೈಸೂರು: ಮೃತ ರೈತನ ಹೆಸರಿನಲ್ಲಿ 2 ಬಾರಿ ಬೆಳೆ ಸಾಲ ಮತ್ತು 2 ಬಾರಿ ಸಾಲಮನ್ನಾ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಬ್ಯಾಂಕ್‌ನ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ.

ಕಾರ್ಯನಿರ್ವಹಣಾಧಿಕಾರಿ ಸಿದ್ದೇಗೌಡ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಮೃತ ರೈತನ ಹೆಸರಿನಲ್ಲಿ ವಂಚನೆ ಮಾಡಿದ್ದಾನೆ. 2017-18ರ ಆಡಿಟ್ ರಿಪೋರ್ಟ್‌ನಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಂಘದ ಕೆಲ ನಿರ್ದೇಶಕರು ಮತ್ತು ಸ್ಥಳೀಯರಿಂದ ಸಿದ್ದೇಗೌಡನ ಅವ್ಯವಹಾರದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಬ್ಯಾಂಕ್‌ನಿಂದ ರೈತರಿಗೆ 3 ಲಕ್ಷದವರೆಗೆ ಬಡ್ಡಿರಹಿತ ಬೆಳೆ ಸಾಲ, 1,258 ರೈತರಿಗೆ ಹಣ ನೀಡಿರುವುದಾಗಿ ಉಲ್ಲೇಖ ಮಾಡಲಾಗಿತ್ತು. 130 ರೈತರಿಗೆ 2 ಬಾರಿ ಸಾಲ ನೀಡಿದ್ದಾರೆ ಎಂಬ ಆರೋಪ ಮತ್ತು ಮೃತ ರೈತನ ಹೆಸರಿನಲ್ಲೂ ಸಾಲ‌ ಮಂಜೂರು ಮಾಡಿರುವ ಆರೋಪ ಸಿದ್ದೇಗೌಡನ ಮೇಲಿದೆ. ದೊಡ್ಡೇಗೌಡ ಬಿನ್ ಸಿದ್ದೇಗೌಡ ಹೆಸರಿನಲ್ಲಿ ದಾಖಲೆ ಸೃಷ್ಟಿ ಮಾಡಲಾಗಿದೆ.

ದೊಡ್ಡೇಗೌಡ 2017ರ ಫೆಬ್ರವರಿಯಲ್ಲಿ ಮೃತಪಟ್ಟಿದ್ದಾರೆ. ದೊಡ್ಡೇಗೌಡನಿಗೆ 2017ರ ಜೂನ್‌ನಲ್ಲಿ ಸಾಲ ಮಂಜೂರು ಮಾಡಿ ಬಳಿಕ 2018ರ ಮೇ ತಿಂಗಳಿನಲ್ಲಿ ದೊಡ್ಡೇಗೌಡನ ಸಾಲಮನ್ನಾ ಮಾಡಲಾಗಿದೆ. ಸ್ಥಳೀಯ ವ್ಯಕ್ತಿ ತೇಜಸ್ವಿ ವಿ.ಹೆಚ್ ಗೌಡ ದಾಖಲೆಗಳ ಸಮೇತ ಸಿದ್ದೇಗೌಡನ ವಿರುದ್ಧ ದೂರು ದಾಖಲು ಮಾಡಿದ್ದಾರೆ. ದೂರು ಆಧರಿಸಿ ತನಿಖೆ ನಡೆಸಿ ವರದಿ ನೀಡುವಂತೆ ಅಪೆಕ್ಸ್ ಬ್ಯಾಂಕ್,‌ ನಬಾರ್ಡ್‌ನಿಂದ ಡಿಸಿಸಿ ಬ್ಯಾಂಕ್‌ಗೆ ಸೂಚನೆ ನೀಡಲಾಗಿದೆ.

Published On - 10:21 am, Fri, 31 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ