AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ರೈತನ ಹೆಸರಲ್ಲಿ ಸಾಲಮನ್ನಾ! ಬ್ಯಾಂಕ್ ಅಧಿಕಾರಿಯಿಂದ ಹಣ ದುರುಪಯೋಗ?

ಮೈಸೂರು: ಮೃತ ರೈತನ ಹೆಸರಿನಲ್ಲಿ 2 ಬಾರಿ ಬೆಳೆ ಸಾಲ ಮತ್ತು 2 ಬಾರಿ ಸಾಲಮನ್ನಾ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಬ್ಯಾಂಕ್‌ನ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ. ಕಾರ್ಯನಿರ್ವಹಣಾಧಿಕಾರಿ ಸಿದ್ದೇಗೌಡ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಮೃತ ರೈತನ ಹೆಸರಿನಲ್ಲಿ ವಂಚನೆ ಮಾಡಿದ್ದಾನೆ. 2017-18ರ ಆಡಿಟ್ ರಿಪೋರ್ಟ್‌ನಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಂಘದ ಕೆಲ ನಿರ್ದೇಶಕರು ಮತ್ತು ಸ್ಥಳೀಯರಿಂದ ಸಿದ್ದೇಗೌಡನ […]

ಮೃತ ರೈತನ ಹೆಸರಲ್ಲಿ ಸಾಲಮನ್ನಾ! ಬ್ಯಾಂಕ್ ಅಧಿಕಾರಿಯಿಂದ ಹಣ ದುರುಪಯೋಗ?
ಸಾಧು ಶ್ರೀನಾಥ್​
|

Updated on:Jan 31, 2020 | 11:06 AM

Share

ಮೈಸೂರು: ಮೃತ ರೈತನ ಹೆಸರಿನಲ್ಲಿ 2 ಬಾರಿ ಬೆಳೆ ಸಾಲ ಮತ್ತು 2 ಬಾರಿ ಸಾಲಮನ್ನಾ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಬ್ಯಾಂಕ್‌ನ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ.

ಕಾರ್ಯನಿರ್ವಹಣಾಧಿಕಾರಿ ಸಿದ್ದೇಗೌಡ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಮೃತ ರೈತನ ಹೆಸರಿನಲ್ಲಿ ವಂಚನೆ ಮಾಡಿದ್ದಾನೆ. 2017-18ರ ಆಡಿಟ್ ರಿಪೋರ್ಟ್‌ನಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಂಘದ ಕೆಲ ನಿರ್ದೇಶಕರು ಮತ್ತು ಸ್ಥಳೀಯರಿಂದ ಸಿದ್ದೇಗೌಡನ ಅವ್ಯವಹಾರದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಬ್ಯಾಂಕ್‌ನಿಂದ ರೈತರಿಗೆ 3 ಲಕ್ಷದವರೆಗೆ ಬಡ್ಡಿರಹಿತ ಬೆಳೆ ಸಾಲ, 1,258 ರೈತರಿಗೆ ಹಣ ನೀಡಿರುವುದಾಗಿ ಉಲ್ಲೇಖ ಮಾಡಲಾಗಿತ್ತು. 130 ರೈತರಿಗೆ 2 ಬಾರಿ ಸಾಲ ನೀಡಿದ್ದಾರೆ ಎಂಬ ಆರೋಪ ಮತ್ತು ಮೃತ ರೈತನ ಹೆಸರಿನಲ್ಲೂ ಸಾಲ‌ ಮಂಜೂರು ಮಾಡಿರುವ ಆರೋಪ ಸಿದ್ದೇಗೌಡನ ಮೇಲಿದೆ. ದೊಡ್ಡೇಗೌಡ ಬಿನ್ ಸಿದ್ದೇಗೌಡ ಹೆಸರಿನಲ್ಲಿ ದಾಖಲೆ ಸೃಷ್ಟಿ ಮಾಡಲಾಗಿದೆ.

ದೊಡ್ಡೇಗೌಡ 2017ರ ಫೆಬ್ರವರಿಯಲ್ಲಿ ಮೃತಪಟ್ಟಿದ್ದಾರೆ. ದೊಡ್ಡೇಗೌಡನಿಗೆ 2017ರ ಜೂನ್‌ನಲ್ಲಿ ಸಾಲ ಮಂಜೂರು ಮಾಡಿ ಬಳಿಕ 2018ರ ಮೇ ತಿಂಗಳಿನಲ್ಲಿ ದೊಡ್ಡೇಗೌಡನ ಸಾಲಮನ್ನಾ ಮಾಡಲಾಗಿದೆ. ಸ್ಥಳೀಯ ವ್ಯಕ್ತಿ ತೇಜಸ್ವಿ ವಿ.ಹೆಚ್ ಗೌಡ ದಾಖಲೆಗಳ ಸಮೇತ ಸಿದ್ದೇಗೌಡನ ವಿರುದ್ಧ ದೂರು ದಾಖಲು ಮಾಡಿದ್ದಾರೆ. ದೂರು ಆಧರಿಸಿ ತನಿಖೆ ನಡೆಸಿ ವರದಿ ನೀಡುವಂತೆ ಅಪೆಕ್ಸ್ ಬ್ಯಾಂಕ್,‌ ನಬಾರ್ಡ್‌ನಿಂದ ಡಿಸಿಸಿ ಬ್ಯಾಂಕ್‌ಗೆ ಸೂಚನೆ ನೀಡಲಾಗಿದೆ.

Published On - 10:21 am, Fri, 31 January 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ